AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇಪಾಳ-ಟಿಬೆಟ್ ಗಡಿ ಪ್ರವಾಹ ದುರಂತ; ಸಂತ್ರಸ್ತರ ನೆರವಿಗೆ ಧಾವಿಸಿದ ಇಶಾ ಫೌಂಡೇಶನ್

ನೇಪಾಳ-ಟಿಬೆಟ್ ಗಡಿ ಪ್ರದೇಶದಲ್ಲಿ ಕಳೆದ 2 ವಾರಗಳಿಂದ ಸಂಭವಿಸಿರುವ ಭೀಕರ ಪ್ರಕೃತಿ ವಿಕೋಪ ಮತ್ತು ಹಠಾತ್ ಪ್ರವಾಹದ ಘಟನೆಯಿಂದ ಸಂಪೂರ್ಣ ಇಶಾ ಸಂಘಟನೆ ತೀವ್ರ ಕಳವಳ ವ್ಯಕ್ತಪಡಿಸಿದೆ. ಈ ಸಂಕಷ್ಟದ ಸಮಯದಲ್ಲಿ ದುರಂತಕ್ಕೊಳಗಾದ ಕುಟುಂಬಗಳಿಗೆ ಹಾಗೂ ಸಂತ್ರಸ್ತರಿಗೆ ನೆರವಾಗಲು ಇಶಾ ಫೌಂಡೇಶನ್ ಜಾಗತಿಕ ಮಟ್ಟದಲ್ಲಿ ಪರಿಹಾರ ಕಾರ್ಯಾಚರಣೆಗೆ ಧುಮುಕಿದೆ. ಇಶಾ ಫೌಂಡೇಶನ್ ಬಿಡುಗಡೆ ಮಾಡಿರುವ ಅಧಿಕೃತ ಪತ್ರಿಕಾ ಪ್ರಕಟಣೆಯಲ್ಲಿ, ನೇಪಾಳ ಹಾಗೂ ಇತರ ಭಾಗಗಳಲ್ಲಿರುವ ಇಶಾ ಸ್ವಯಂಸೇವಕರು ಸಂತ್ರಸ್ತರಿಗೆ ಅಗತ್ಯವಿರುವ ಎಲ್ಲಾ ರೀತಿಯ ನೆರವು ಹಾಗೂ ಆಸರೆಯನ್ನು ಒದಗಿಸಲು ನಿರಂತರವಾಗಿ ಶ್ರಮಿಸುತ್ತಿದ್ದಾರೆ ಎಂದು ತಿಳಿಸಲಾಗಿದೆ.

ನೇಪಾಳ-ಟಿಬೆಟ್ ಗಡಿ ಪ್ರವಾಹ ದುರಂತ; ಸಂತ್ರಸ್ತರ ನೆರವಿಗೆ ಧಾವಿಸಿದ ಇಶಾ ಫೌಂಡೇಶನ್
Isha FoundationImage Credit source: TV9
ಸುಷ್ಮಾ ಚಕ್ರೆ
|

Updated on: Sep 12, 2026 | 9:28 PM

Share

ಕಠ್ಮಂಡು, ಸೆಪ್ಟೆಂಬರ್ 12: ಕಳೆದ 2 ವಾರಗಳಿಂದ ನೇಪಾಳ-ಟಿಬೆಟ್ ಗಡಿ ಪ್ರದೇಶದಲ್ಲಿ ಸಂಭವಿಸುತ್ತಿರುವ ಭೀಕರ ಹಠಾತ್ ಪ್ರವಾಹವು ತೀವ್ರ ಆತಂಕವನ್ನು ಸೃಷ್ಟಿಸಿದೆ. ಈ ದುರಂತದಿಂದ ಸಂಕಷ್ಟಕ್ಕೊಳಗಾದ ಕುಟುಂಬಗಳಿಗೆ ನೆರವಾಗಲು ಇಶಾ ಫೌಂಡೇಶನ್ ಜಾಗತಿಕ ಮಟ್ಟದಲ್ಲಿ ಕಾರ್ಯಾಚರಣೆಗೆ ಇಳಿದಿದೆ. ಇಶಾ ಸಮುದಾಯವು ಪ್ರಕೃತಿ ವಿಕೋಪಕ್ಕೆ ಸಿಲುಕಿದ ಜನರೊಂದಿಗೆ ಸದಾ ಜೊತೆಯಾಗಿರಲಿದ್ದು, ಸಂಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರಕ್ಷಣೆ ಹಾಗೂ ಸಾಂತ್ವನ ಒದಗಿಸಲು ಶ್ರಮಿಸುತ್ತಿದೆ ಎಂದು ಇಶಾ ಫೌಂಡೇಶನ್ ತಿಳಿಸಿದೆ.

ಜಾಗತಿಕ ಸ್ವಯಂಸೇವಕರ ಶೀಘ್ರ ಕಾರ್ಯಾಚರಣೆ:

ಪ್ರವಾಹ ಸಂಭವಿಸಿದ ತಕ್ಷಣವೇ ನೇಪಾಳದ ಸ್ಥಳೀಯ ಭಾಗಗಳಲ್ಲಿರುವ ಈಶ ಸ್ವಯಂಸೇವಕರು, ವಿವಿಧ ನಗರ ಕೇಂದ್ರಗಳ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿರುವ ತಂಡಗಳು ಜಂಟಿಯಾಗಿ ಪರಿಹಾರ ಕಾರ್ಯಗಳಲ್ಲಿ ತೊಡಗಿಸಿಕೊಂಡಿವೆ. ದುರಂತದಿಂದ ಸಂಕಷ್ಟಕ್ಕೆ ಈಡಾಗಿರುವ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲಾ ರೀತಿಯ ನೆರವು ಹಾಗೂ ತುರ್ತು ಆಸರೆಯನ್ನು ಒದಗಿಸಲಾಗುತ್ತಿದ್ದು, ಇಶಾ ಸಮುದಾಯವು ಅವರ ಬೆಂಬಲಕ್ಕೆ ನಿಂತಿದೆ.

ಇದನ್ನೂ ಓದಿ: Nepal Flood: ನೇಪಾಳ ಜಲಪ್ರಳಯದಲ್ಲಿ ಕೈಲಾಸ ಯಾತ್ರಿಕರು ನಾಪತ್ತೆ: ಇಶಾ ಫೌಂಡೇಶನ್‌ನ 77 ಮಂದಿ ಹಾಗೂ ಕೋಲ್ಕತ್ತಾದ 32 ಯಾತ್ರಿಕರ ಸಂಪರ್ಕ ಕಟ್

ಸಮಯೋಚಿತ ಮಾಹಿತಿ ವಿನಿಮಯ:

ಪ್ರವಾಹ ಪೀಡಿತ ಪ್ರದೇಶದ ಪರಿಸ್ಥಿತಿ ಮತ್ತು ಪರಿಹಾರ ಕಾರ್ಯಾಚರಣೆಗಳ ಕುರಿತು ಪ್ರಸ್ತುತ ಲಭ್ಯವಾಗುವ ಅಧಿಕೃತ ಮಾಹಿತಿಯನ್ನು ಸಂತ್ರಸ್ತರ ಕುಟುಂಬಗಳಿಗೆ ಹಾಗೂ ಸಾರ್ವಜನಿಕರಿಗೆ ನಿಯಮಿತವಾಗಿ ತಲುಪಿಸಲಾಗುತ್ತಿದೆ. ಪ್ರವಾಹ ದುರಂತದಿಂದ ತೊಂದರೆಗೊಳಗಾದ ಪ್ರತಿಯೊಬ್ಬ ನಾಗರಿಕರ ಮತ್ತು ಅವರ ಕುಟುಂಬಗಳ ಶ್ರೇಯೋಭಿವೃದ್ಧಿಗಾಗಿ ಇಶಾ ಫೌಂಡೇಷನ್ ಸಂಸ್ಥೆಯು ಕಾರ್ಯೋನ್ಮುಖವಾಗಿದೆ.

ಇದನ್ನೂ ಓದಿ: ನೇಪಾಳ ಪ್ರವಾಹ: 9 ದಿನಗಳ ನರಕಯಾತನೆ ಬಳಿಕ ಸುರಂಗದಿಂದ ಜೀವಂತವಾಗಿ ಹೊರಬಂದ ಇಬ್ಬರು ಕಾರ್ಮಿಕರು

ನೇಪಾಳ ಪ್ರವಾಹದಿಂದ ಹಾನಿಗೊಳಗಾದ ಕುಟುಂಬಗಳಿಗೆ ಅಗತ್ಯವಿರುವ ಎಲ್ಲಾ ಸಹಾಯವನ್ನು ನೀಡುವುದನ್ನು ಇಶಾ ಫೌಂಡೇಶನ್ ಮುಂದುವರಿಸಿದೆ ಮತ್ತು ಕುಟುಂಬಗಳು ಮತ್ತು ಇಶಾ ಸಮುದಾಯದೊಂದಿಗೆ ನಿಯಮಿತವಾಗಿ ಪ್ರಮುಖ ಮಾಹಿತಿಯನ್ನು ಹಂಚಿಕೊಳ್ಳುತ್ತಿದೆ ಎಂದು ಹೇಳಿದೆ. ಪ್ರವಾಹದಿಂದ ಹಾನಿಗೊಳಗಾದ ಎಲ್ಲರಿಗೂ ಮತ್ತು ಅವರ ಕುಟುಂಬಗಳಿಗೆ ಇಶಾ ಫೌಂಡೇಶನ್ ತನ್ನ ಆಳವಾದ ಬೆಂಬಲವನ್ನು ವ್ಯಕ್ತಪಡಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!