ಭಾರತದಲ್ಲಿ ದುಷ್ಕೃತ್ಯ ನಡೆಸಲು ಐಎಸ್​ಐ ಸಂಚು, ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಾಯಿಬಿಟ್ಟ ಐಎಸ್ಐ ಏಜೆಂಟ್​​​ ಕಲೀಮ್

ಭಾರತದಲ್ಲಿ ದುಷ್ಕೃತ್ಯ ನಡೆಸಲು ಪಾಕ್​ನ ಐಎಸ್​ಐ ಸಂಚು ರೂಪಿಸಿರುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಗುಪ್ತಚರ ಇಲಾಖೆ ಸ್ಫೋಟಕ ಮಾಹಿತಿಯನ್ನು ನೀಡಿದೆ. ಉಗ್ರರ ಮೂಲಕ ಸೇನಾ ನೆಲೆಗಳು ಸೇರಿ ಭಾರತದ ಹಲವಡೆ ದುಷ್ಕೃತ್ಯ ನಡೆಸಲು ಪಾಕ್​ನ ಐಎಸ್​ಐ ಸಂಚು ರೂಪಿಸಿದೆ ಎಂದು ಹೇಳಲಾಗಿದೆ.

ಭಾರತದಲ್ಲಿ ದುಷ್ಕೃತ್ಯ ನಡೆಸಲು ಐಎಸ್​ಐ ಸಂಚು, ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಾಯಿಬಿಟ್ಟ ಐಎಸ್ಐ ಏಜೆಂಟ್​​​ ಕಲೀಮ್
ಸಾಂದರ್ಭಿಕ ಚಿತ್ರ

Updated on: Aug 18, 2023 | 1:14 PM

ದೆಹಲಿ, ಆ.18: ಭಾರತದಲ್ಲಿ ದುಷ್ಕೃತ್ಯ ನಡೆಸಲು ಪಾಕ್​ನ ಐಎಸ್​ಐ (ISI) ಸಂಚು ರೂಪಿಸಿರುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಗುಪ್ತಚರ ಇಲಾಖೆ ಸ್ಫೋಟಕ ಮಾಹಿತಿಯನ್ನು ನೀಡಿದೆ. ಉಗ್ರರ ಮೂಲಕ ಸೇನಾ ನೆಲೆಗಳು ಸೇರಿ ಭಾರತದ ಹಲವಡೆ ದುಷ್ಕೃತ್ಯ ನಡೆಸಲು ಪಾಕ್​ನ ಐಎಸ್​ಐ ಸಂಚು ರೂಪಿಸಿದೆ ಎಂದು ಹೇಳಲಾಗಿದೆ. ಇದೀಗ ಕೇಂದ್ರ ಸರ್ಕಾರಕ್ಕೆ ಪ್ರಮುಖ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶದಲ್ಲಿ ಪಾಕಿಸ್ತಾನ​​​ ಐಎಸ್ಐ ಏಜೆಂಟ್​​​ ಕಲೀಮ್​ ಬಂಧನ ಮಾಡಲಾಗಿದ್ದು, ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಾಯ್ಬಿಟ್ಟಿದ್ದಾನೆ ಎಂದು ಹೇಳಲಾಗಿದೆ. ಭಾರತದಲ್ಲಿ ಅನೇಕ ಕಡೆ ದುಷ್ಕೃತ್ಯ ನಡೆಸಲು ಸಂಚು ರೂಪಿಸಿದ್ದು, ಇನ್ನು ಪಾಕ್​ ಗುಪ್ತಚರ ಇಲಾಖೆ ಸಂಚಿನ ಬಗ್ಗೆಯು ಬಂಧಿತ ಐಎಸ್ಐ ಏಜೆಂಟ್​​​ ಕಲೀಮ್​ ಹೇಳಿದ್ದಾನೆ. ಬಂಧಿತ ಕಲೀಮ್ ಬಳಿ ಇದ್ದ ಹಲವು ದಾಖಲೆಗಳು ವಶಪಡಿಸಲಾಗಿದೆ. ದಾಖಲೆಗಳಲ್ಲಿ ಭಾರತೀಯ ಸೇನಾ ಕೇಂದ್ರಗಳ ಬಗ್ಗೆ ಉಲ್ಲೇಖಿಸಲಾಗಿದೆ. ರಫೇಲ್​ ಯುದ್ಧ ವಿಮಾನದ ಬಗ್ಗೆಯೂ ಮಾಹಿತಿ ಸಂಗ್ರಹಿಸಲಾಗಿದೆ ಎಂದು ವಿಚಾರಣೆ ಸಮಯದಲ್ಲಿ ತಿಳಿಸಿದ್ದಾನೆ.

Published On - 1:13 pm, Fri, 18 August 23

Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Follow Us