Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಎಸ್‌ಕೆಪಿ ಪ್ರಕರಣದ ತನಿಖೆಗಾಗಿ ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದ ಐದು ಸ್ಥಳಗಳಲ್ಲಿ ಎನ್ಐಎ ದಾಳಿ

ಶಂಕಿತ ಅಬ್ದುಲ್ ಅಜೀಜ್ ಸಲಾಫಿ ಮತ್ತು ಶೋಬ್ ಖಾನ್​​ನ ವಸತಿ ಮತ್ತು ವಾಣಿಜ್ಯ ಆವರಣಗಳನ್ನು ಒಳಗೊಂಡಿರುವ ಸಿಯೋನಿಯ ಇತರ ಮೂರು ಸ್ಥಳಗಳಲ್ಲಿ ಶೋಧ ನಡೆಸಿರುವುದಾಗಿ ಎನ್ಐಎ ತಿಳಿಸಿದೆ.

ಐಎಸ್‌ಕೆಪಿ ಪ್ರಕರಣದ ತನಿಖೆಗಾಗಿ ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದ ಐದು ಸ್ಥಳಗಳಲ್ಲಿ ಎನ್ಐಎ ದಾಳಿ
ಪ್ರಾತಿನಿಧಿಕ ಚಿತ್ರ
Follow us
ರಶ್ಮಿ ಕಲ್ಲಕಟ್ಟ
|

Updated on: Mar 12, 2023 | 10:19 PM

ಕರ್ನಾಟಕದ ಶಿವಮೊಗ್ಗದಲ್ಲಿರುವ ಐಸಿಸ್ (ISIS) ಮಾಡ್ಯೂಲ್‌ನ ತನಿಖೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಶನಿವಾರ ಮಧ್ಯಪ್ರದೇಶ (Madhya pradesh) ಮತ್ತು ಮಹಾರಾಷ್ಟ್ರದ (Maharashtra) ಐದು ಸ್ಥಳಗಳಲ್ಲಿ ಶೋಧ ನಡೆಸಿದೆ. ಸುಳಿವುಗಳನ್ನು ಆಧರಿಸಿ ಕೇಂದ್ರ ತನಿಖಾ ಸಂಸ್ಥೆಯು ಶಂಕಿತರಾದ ತಲ್ಹಾ ಖಾನ್ ನ ಪುಣೆಯಲ್ಲಿರುವ ಮನೆ ಮತ್ತು ಅಕ್ರಮ್ ಖಾನ್​​ನ ಸಿಯೋನಿಯಲ್ಲಿರುವ (ಮಧ್ಯಪ್ರದೇಶ) ಮನೆಯನ್ನು ಶೋಧಿಸಿದೆ.

ದೆಹಲಿಯ ಓಖ್ಲಾದಲ್ಲಿ ಕಾಶ್ಮೀರಿ ದಂಪತಿ ಜಹಾನ್‌ಝೈಬ್ ಸಮಿ ವಾನಿ ಮತ್ತು ಅವರ ಪತ್ನಿ ಹಿನಾ ಬಶೀರ್ ಬೀಗ್ ಅವರನ್ನು ಬಂಧಿಸಿದ ನಂತರ ದೆಹಲಿ ಪೊಲೀಸ್ ವಿಶೇಷ ಸೆಲ್ ಆರಂಭದಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿತು. ಇವರಿಬ್ಬರೂ ಇಸ್ಲಾಮಿಕ್ ಸ್ಟೇಟ್ ಖೊರಾಸನ್ ಪ್ರಾಂತ್ಯ (ಐಎಸ್‌ಕೆಪಿ) ನಂಟು ಹೊಂದಿದ್ದರು ಎಂದು ಕಂಡುಬಂದಿದೆ. ತನಿಖೆಯ ಸಮಯದಲ್ಲಿ, ಎನ್‌ಐಎ ಮತ್ತೊಂದು ಪ್ರಕರಣದಲ್ಲಿ ಈಗಾಗಲೇ ತಿಹಾರ್ ಜೈಲಿನಲ್ಲಿರುವ ಅಬ್ದುಲ್ಲಾ ಬಸಿತ್ ಎಂಬ ಇನ್ನೊಬ್ಬ ಆರೋಪಿಯ ಪಾತ್ರವನ್ನು ಪತ್ತೆ ಮಾಡಿದೆ.

ಶಂಕಿತ ಅಬ್ದುಲ್ ಅಜೀಜ್ ಸಲಾಫಿ ಮತ್ತು ಶೋಬ್ ಖಾನ್​​ನ ವಸತಿ ಮತ್ತು ವಾಣಿಜ್ಯ ಆವರಣಗಳನ್ನು ಒಳಗೊಂಡಿರುವ ಸಿಯೋನಿಯ ಇತರ ಮೂರು ಸ್ಥಳಗಳಲ್ಲಿ ಶೋಧ ನಡೆಸಿರುವುದಾಗಿ ಎನ್ಐಎ ತಿಳಿಸಿದೆ.

ಮೊಹಮ್ಮದ್ ಶಾರಿಕ್, ಮಾಜ್ ಮುನೀರ್ ಖಾನ್, ಯಾಸಿನ್ ಮತ್ತು ಇತರರು ಗೋದಾಮುಗಳು, ಹಾರ್ಡ್‌ವೇರ್ ಅಂಗಡಿಗಳು, ವಾಹನಗಳು, ಮದ್ಯದ ಅಂಗಡಿಗಳು ಮತ್ತು ನಿರ್ದಿಷ್ಟ ಸಮುದಾಯಕ್ಕೆ ಸೇರಿದ ಇತರ ಆಸ್ತಿಗಳು ಸೇರಿದಂತೆ ಸಾರ್ವಜನಿಕ ಮತ್ತು ಖಾಸಗಿ ಆಸ್ತಿಗಳನ್ನು ಗುರಿಯಾಗಿಸಿಕೊಂಡು 25 ಕ್ಕೂ ಹೆಚ್ಚು ಬೆಂಕಿ ಮತ್ತು ವಿಧ್ವಂಸಕ ಕೃತ್ಯಗಳನ್ನು ಎಸಗಿದ್ದಾರೆ ಎಂದು ಎನ್‌ಐಎ ತನಿಖೆಯು ಕಂಡುಹಿಡಿದಿದೆ. ಮೂವರು ಅಣಕು IED ಸ್ಫೋಟವನ್ನು ಸಹ ನಡೆಸಿದ್ದು, ಆನ್‌ಲೈನ್ ಹ್ಯಾಂಡ್ಲರ್‌ನಿಂದ ಕ್ರಿಪ್ಟೋಕರೆನ್ಸಿಗಳ ಮೂಲಕ ಹಣವನ್ನು ಪಡೆದಿದ್ದಾರೆ ಎಂದು ತನಿಖಾ ಸಂಸ್ಥೆ ಹೇಳಿದೆ.

ಎನ್‌ಐಎ ಪ್ರಕಾರ, ಶಾರಿಕ್ ಕಳೆದ ವರ್ಷ ನವೆಂಬರ್ 19 ರಂದು ಇವರು ಮಂಗಳೂರಿನ ಕದ್ರಿ ದೇವಸ್ಥಾನದಲ್ಲಿ ಐಇಡಿ ಸ್ಫೋಟ ನಡೆಸಲು ಯೋಜಿಸಿದ್ದರು. ಆದರೆ ಅದು ಗುರಿ ತಲುಪುವ ಮುನ್ನ ಮಾರ್ಗದಲ್ಲೇ ಸ್ಫೋಟವಾಗಿತ್ತು. 40 ವರ್ಷದ ಸಿಯೋನಿ ಜಮಾ ಮಸೀದಿಯ ಧರ್ಮಗುರು ಅಬ್ದುಲ್ ಸಲಫಿ ಮತ್ತು ಆಟೋಮೊಬೈಲ್ ಬಿಡಿಭಾಗಗಳ ಮಾರಾಟಗಾರ ಶೋಬ್ (26) ಪಾತ್ರವನ್ನು ಎನ್‌ಐಎ ಕಂಡುಹಿಡಿದಿದೆ. ಇವರು ಚುನಾವಣೆಯಲ್ಲಿ ಮತ ಚಲಾಯಿಸುವುದು ಮುಸ್ಲಿಮರಿಗೆ ಪಾಪದ ವಿಷಯ ಎಂಬಂತಹ ‘ವಿನಾಶಕಾರಿ’ ವಿಚಾರಗಳನ್ನು ಪ್ರಚಾರ ಮಾಡುತ್ತಿದ್ದಾರೆ ಎನ್ನಲಾಗಿದೆ.

ಮೌಲಾನಾ ಅಜೀಜ್ ಸಲಾಫಿ ನೇತೃತ್ವದ ಮತ್ತೊಂದು ಗುಂಪು ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ದಕ್ಷಿಣದ ಹಲವು ರಾಜ್ಯಗಳಲ್ಲಿ ಯೂಟ್ಯೂಬ್‌ನಲ್ಲಿ ಪ್ರಚೋದನಕಾರಿ ಭಾಷಣಗಳ ಮೂಲಕ ಮುಸ್ಲಿಂ ಯುವಕರನ್ನು ಆಮೂಲಾಗ್ರಗೊಳಿಸುವಲ್ಲಿ ತೊಡಗಿದೆ ಎಂದು ಎನ್‌ಐಎ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಶೋಧದ ವೇಳೆ ವಶಪಡಿಸಿಕೊಂಡ ದಾಖಲೆಗಳ ಪ್ರಕಾರ, ಆಮೂಲಾಗ್ರ ಗುಂಪು ಅಫ್ಘಾನಿಸ್ತಾನ ಸೇರಿದಂತೆ ವಿವಿಧ ಜಿಹಾದಿ ಥಿಯೇಟರ್‌ಗಳಲ್ಲಿ ನಡೆಯುತ್ತಿರುವ ಚಟುವಟಿಕೆಗಳು ಮತ್ತು ಘಟನೆಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸುತ್ತಿದೆ ಎಂದು ಕಂಡುಬಂದಿದೆ. ಇಂತಹ ಸುಳ್ಳು ಪ್ರಚಾರದ ಪ್ರಸಾರಕ್ಕಾಗಿ ಅವರು ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ಬಳಸುತ್ತಿದ್ದರು. ಅಂತಹ ಪ್ರಯತ್ನಗಳ ಮುಂದುವರಿಕೆಯಾಗಿ, ಅಜೀಜ್ ಸಲಫಿ ಬಂಧಿತ ಆರೋಪಿ ಕರ್ನಾಟಕದ ಮಾಜ್ ಮುನೀರ್ ಅಹ್ಮದ್ ಜೊತೆ ಸಂಪರ್ಕದಲ್ಲಿದ್ದರು. ಅಹ್ಮದ್ ಪ್ರಯೋಗ ಸ್ಫೋಟಕ್ಕೆ ಸ್ಫೋಟಕ ವಸ್ತುಗಳನ್ನು ಸಂಗ್ರಹಿಸಿದ್ದ ಎಂದು ಎನ್ಐಎ ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು
ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು
Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
ಬಾಂಬೆ ಹೈಕೋರ್ಟ್​ ಆವರಣದಲ್ಲಿ ವಾಮಾಚಾರ?
ಬಾಂಬೆ ಹೈಕೋರ್ಟ್​ ಆವರಣದಲ್ಲಿ ವಾಮಾಚಾರ?