AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಮರಿಗೆ ಭಾರತ ಮೊದಲ ತಾಯ್ನಾಡು, ಮೋದಿ-ಮೋಹನ್ ಭಾಗವತ್​ಗೆ ಭಾರತ ಎಷ್ಟು ಸೇರಿದ್ದೋ, ಅಷ್ಟೇ ಮಹಮೂದ್‌ಗೂ ಸೇರಿದೆ: ಜಮೈತ್​ ಉಲೇಮಾ ಎ ಹಿಂದ್​ ಮುಖ್ಯಸ್ಥ

ಪ್ರಧಾನಿ ಮೋದಿ ಮತ್ತು ಮೋಹನ್​ ಭಾಗವತ್​ ಅವರಿಗೆ ಭಾರತದ ಮೇಲೆ ಎಷ್ಟು ಹಕ್ಕಿದೆಯೋ ಅಷ್ಟೇ ಹಕ್ಕು ನಮಗೂ ಇದೆ. ಮುಸ್ಲಿಮರಿಗೆ ಭಾರತ ಮೊದಲ ತಾಯ್ನಾಡು ಅಂತೆಲ್ಲ ಜಮೈತ್​ ಉಲೇಮಾ ಎ ಹಿಂದ್​ ಮುಖ್ಯಸ್ಥ ಮಹಮೂದ್​ ಮದನಿ ಹೇಳಿದ್ದಾರೆ.

ಮುಸ್ಲಿಮರಿಗೆ ಭಾರತ ಮೊದಲ ತಾಯ್ನಾಡು, ಮೋದಿ-ಮೋಹನ್ ಭಾಗವತ್​ಗೆ ಭಾರತ ಎಷ್ಟು ಸೇರಿದ್ದೋ, ಅಷ್ಟೇ ಮಹಮೂದ್‌ಗೂ ಸೇರಿದೆ: ಜಮೈತ್​ ಉಲೇಮಾ ಎ ಹಿಂದ್​ ಮುಖ್ಯಸ್ಥ
ಮಹಮೂದ್​ ಮದನಿ, ಜಮೈತ್​ ಉಲೇಮಾ ಎ ಹಿಂದ್​ ಮುಖ್ಯಸ್ಥ
ರಮೇಶ್ ಬಿ. ಜವಳಗೇರಾ
|

Updated on:Feb 11, 2023 | 6:52 PM

Share

ನವದೆಹಲಿ: ಇಸ್ಲಾಂ ವಿಶ್ವದಲ್ಲೇ ಅತ್ಯಂತ ಹಳೆಯ ಧರ್ಮ. ಭಾರತ ನಮ್ಮ ದೇಶ. ಪ್ರಧಾನಿ ಮೋದಿ(Narendra Modi) ಮತ್ತು ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್​ ಭಾಗವತ್(RSS chief Mohan Bhagwat)​ ಅವರಿಗೆ ಭಾರತದ ಮೇಲೆ ಎಷ್ಟು ಹಕ್ಕಿದೆಯೋ ಅಷ್ಟೇ ಹಕ್ಕು ನಮಗೂ ಇದೆ. ಅವರಿಗೆ ಭಾರತ ಎಷ್ಟು ಸೇರಿದ್ದೋ, ಅಷ್ಟೇ ಮುಸ್ಲಿಮರಿಗೂ ಸೇರಿದ್ದಾಗಿದೆ ಎಂದು ಜಮೈತ್​ ಉಲೇಮಾ ಎ ಹಿಂದ್​ ಮುಖ್ಯಸ್ಥ ಮಹಮೂದ್​ ಮದನಿ(Mahmood Madani)ಗುಡುಗಿದ್ದಾರೆ.

ನವದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಜಮೀಯತ್ ಉಲಮಾ-ಇ-ಹಿಂದ್‌ನ ಸಮಗ್ರ ಅಧಿವೇಶನವನ್ನು ಉದ್ಘಾಟಿಸಿ ಮಾತನಾಡಿದ ಮೌಲಾನಾ ಮದನಿ, ಭಾರತ ನಮ್ಮ ದೇಶ. ಪ್ರಧಾನಿ ಮೋದಿ ಮತ್ತು ಮೋಹನ್​ ಭಾಗವತ್​ ಅವರಿಗೆ ಭಾರತದ ಮೇಲೆ ಎಷ್ಟು ಹಕ್ಕಿದೆಯೋ ಅಷ್ಟೇ ಹಕ್ಕು ನಮಗೂ ಇದೆ. ಮಹಮೂದ್, ಅವರಿಗಿಂತ ಒಂದು ಇಂಚು ಮುಂದಿಲ್ಲ ಅಥವಾ ಮಹಮೂದ್‌ಗಿಂತ ಅವರು ಒಂದು ಇಂಚು ಮುಂದಿಲ್ಲ ಎಂದು ಹೇಳಿದರು.

ಮುಸ್ಲಿಮರಿಗೆ ಭಾರತ ಮೊದಲ ತಾಯ್ನಾಡು. ಭಾರತಕ್ಕೆ ಇಸ್ಲಾಂ ಧರ್ಮ ಹೊರಗಿನಿಂದ ಬಂದಿದೆ ಎಂಬುದು ಸುಳ್ಳು. ಅದು ಆಧಾರರಹಿತವಾಗಿದೆ. ಹಿಂದಿ ಮುಸ್ಲಿಮರಿಗೆ ಭಾರತವು ಅತ್ಯುತ್ತಮ ದೇಶವಾಗಿದೆ. ಎಲ್ಲ ಧರ್ಮಗಳಿಗಿಂತ ಇಸ್ಲಾಂ ಧರ್ಮ ತುಂಬಾ ಹಳೆಯದು. ಆದ್ರೆ, ದೇಶದಲ್ಲಿ ದ್ವೇಷ ಭಾಷಣ ಮತ್ತು ಇಸ್ಲಮೋಫೋಬಿಯಾ ಹೆಚ್ಚುತ್ತಿದೆ. ಅಲ್ಲದೇ ಬಲವಂತದ ಧಾರ್ಮಿಕ ಮತಾಂತರವನ್ನು ನಾವು ವಿರೋಧಿಸುತ್ತೇವೆ. ಸ್ವಯಂಪ್ರೇರಣೆಯಿಂದ ತಮ್ಮ ಧರ್ಮವನ್ನು ಪರಿವರ್ತಿಸುವ ಜನರನ್ನು ಕೂಡ, ಸುಳ್ಳು ಆರೋಪದ ಮೇಲೆ ಜೈಲಿಗೆ ಕಳುಹಿಸಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.

ಬಲವಂತವಾಗಿ ನಡೆಯುವ ಧಾರ್ಮಿಕ ಮತಾಂತರಕ್ಕೆ ನಮ್ಮ ವಿರೋಧವಿದೆ. ಧಾರ್ಮಿಕ ಸ್ವಾತಂತ್ರ್ಯದ ಭಾರತದ ಪ್ರಜೆಯ ಮೂಲಭೂತ ಹಕ್ಕು. ಬಲವಂತ, ವಂಚನೆ, ದುರಾಸೆಯಿಂದ ಮತಾಂತರ ಮಾಡುವುದನ್ನು ಒಪ್ಪುವುದಕ್ಕೆ ಸಾಧ್ಯವಿಲ್ಲ. ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿರುವ ಹಲವು ಉದಾಹರಣೆಗಳು ನಮ್ಮ ಕಣ್ಣ ಮುಂದಿವೆ. ನಮಾಝ್ ನಿಷೇಧ, ಅಲ್ಪಸಂಖ್ಯಾತರ ಮನೆಗಳ ಮೇಲೆ ಬುಲ್ಡೋಜರ್ ಕ್ರಮವನ್ನು ಉದಾಹರಣಣೆಗಳನ್ನು ನೀಡಿ ಅಸಮಾಧಾನ ಹೊರಹಾಕಿದರು.

ಭಾರತ ಸರ್ವಧರ್ಮಗಳ ನೆಲೆಯಾಗಿದ್ದು, ಎಲ್ಲ ಧರ್ಮಗಳನ್ನೂ ಗೌರವಿಸುವುದು ಈ ಮಣ್ಣಿನ ಗುಣ. ಧರ್ಮ ವ್ಯಕ್ತಿಯ ಖಾಸಗಿ ವಿಷಯವಾಗಿದ್ದು, ಇತ್ತೀಚಿಗೆ ಈ ಹಕ್ಕಿನ ಮೇಲೆ ದಾಳಿ ಮಾಡಲಾಗುತ್ತಿದೆ. ಭಾರತದ ಮುಸ್ಲಿಮರು ಎರಡನೇ ದರ್ಜೆಯ ಪ್ರಜೆಗಳಲ್ಲ. ಅವರೂ ಕೂಡ ದೇಶದ ಇತರ ಪ್ರಜೆಗಳಂತೆ ಏಲ್ಲಾ ಹಕ್ಕುಗಳನ್ನು ಹೊಂದಿದ್ದಾರೆ ಎಂದು ಮಹಮೂದ್‌ ಮದನಿ ಸ್ಪಷ್ಟಪಡಿಸಿದರು.

Published On - 5:21 pm, Sat, 11 February 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ