AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೇಠಿಯಲ್ಲಿ ಸ್ಪರ್ಧೆ ಎಂದು ಕೇಳಿ ಲೇಹ್‌ನಲ್ಲಿ ರಜಾ ಮೂಡ್​​ನಲ್ಲಿರುವ ರಾಹುಲ್ ಗಾಂಧಿಗೆ ಶಾಕ್ ಆಗಿಲ್ಲವೆ?: ಬಿಜೆಪಿ

ಯಾರು ಎಲ್ಲಿಂದ ಬೇಕಾದರೂ ಸ್ಪರ್ಧಿಸಬಹುದು ಆದರೆ ಗೆಲ್ಲುತ್ತೇವೆ ಎಂದು ಹೇಳಬಾರದು ಎಂದು ಬಿಜೆಪಿ ನಾಯಕ ಕೌಶಲ್ ಕಿಶೋರ್ ಹೇಳಿದ್ದಾರೆ. "ಪ್ರಜಾಪ್ರಭುತ್ವದಲ್ಲಿ, ಯಾರು ಎಲ್ಲಿಂದ ಬೇಕಾದರೂ ಚುನಾವಣೆಗೆ ಸ್ಪರ್ಧಿಸಬಹುದು. ಆದರೆ ವಯನಾಡಿನ ಜನರು ಅವರನ್ನು (ರಾಹುಲ್ ಗಾಂಧಿ) ತಿರಸ್ಕರಿಸಿದ್ದಾರೆಂದು ತೋರುತ್ತದೆ, ಅದಕ್ಕಾಗಿಯೇ ಅವರು ಅಮೇಠಿಗೆ ಬರುತ್ತಿದ್ದಾರೆ. ಅವರು ಎಲ್ಲಿಂದಲಾದರೂ ಸ್ಪರ್ಧಿಸಬಹುದು ಆದರೆ ಅವರು ಗೆಲ್ಲುತ್ತಾರೆ ಎಂದು ಅವರು ಹೇಳಬಾರದು ಎಂದು ಕಿಶೋರ್ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಅಮೇಠಿಯಲ್ಲಿ ಸ್ಪರ್ಧೆ ಎಂದು ಕೇಳಿ ಲೇಹ್‌ನಲ್ಲಿ ರಜಾ ಮೂಡ್​​ನಲ್ಲಿರುವ ರಾಹುಲ್ ಗಾಂಧಿಗೆ ಶಾಕ್ ಆಗಿಲ್ಲವೆ?: ಬಿಜೆಪಿ
ರಾಹುಲ್ ಗಾಂಧಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Aug 18, 2023 | 8:56 PM

Share

ದೆಹಲಿ ಆಗಸ್ಟ್ 18: 2024 ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ (Rahul Gandhi) ಅಮೇಠಿಯಿಂದಲೇ (Amethi) ಸ್ಪರ್ಧಿಸುತ್ತಾರೆ ಎಂದು ಯುಪಿ ಕಾಂಗ್ರೆಸ್ ಮುಖ್ಯಸ್ಥ ಅಜಯ್ ರಾಯ್ (Ajay Rai) ಹೇಳಿಕೆಗೆ ಪ್ರತಿಕ್ರಿಯಿಸಿದ ಬಿಜೆಪಿಯ ಅಮಿತ್ ಮಾಳವಿಯಾ,ರಾಯ್ ಉತ್ಸಾಹದಿಂದ ಮಾತನಾಡಿದ್ದಾರೆ ಎಂದು ತೋರುತ್ತದೆ ಎಂ ಹೇಳಿದ್ದಾರೆ. ಲೇಹ್‌ನಲ್ಲಿ ರಜಾ ಕಳೆಯುತ್ತಿರುವ ರಾಹುಲ್ ಗಾಂಧಿ ಅವರು ಅಜಯ್ ರಾಯ್ ಅವರ ಘೋಷಣೆಯನ್ನು ಕೇಳಿ ಆಘಾತಕ್ಕೊಳಗಾಗಿದ್ದಾರೆಯೇ ಎಂದು ಅಮಿತ್ ಮಾಳವಿಯಾ ಟ್ವೀಟ್ ಮಾಡಿದ್ದಾರೆ.

ಈಗ ನೀವು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರು ಎಲ್ಲಿಂದ ಸ್ಪರ್ಧಿಸುತ್ತಾರೆ ಎಂದು ಹೇಳಿದ್ದೀರಿ. ಸೋನಿಯಾ ಗಾಂಧಿ ಅವರು ಎಲ್ಲಿಂದ ಸ್ಪರ್ಧಿಸುತ್ತಾರೆ ಎಂಬುದನ್ನು ಸಹ ನೀವು ಘೋಷಿಸಬೇಕಾಗಿತ್ತು ಎಂದಿದ್ದಾರೆ ಮಾಳವಿಯಾ.

ಯಾರು ಎಲ್ಲಿಂದ ಬೇಕಾದರೂ ಸ್ಪರ್ಧಿಸಬಹುದು ಆದರೆ ಗೆಲ್ಲುತ್ತೇವೆ ಎಂದು ಹೇಳಬಾರದು ಎಂದು ಬಿಜೆಪಿ ನಾಯಕ ಕೌಶಲ್ ಕಿಶೋರ್ ಹೇಳಿದ್ದಾರೆ. “ಪ್ರಜಾಪ್ರಭುತ್ವದಲ್ಲಿ, ಯಾರು ಎಲ್ಲಿಂದ ಬೇಕಾದರೂ ಚುನಾವಣೆಗೆ ಸ್ಪರ್ಧಿಸಬಹುದು. ಆದರೆ ವಯನಾಡಿನ ಜನರು ಅವರನ್ನು (ರಾಹುಲ್ ಗಾಂಧಿ) ತಿರಸ್ಕರಿಸಿದ್ದಾರೆಂದು ತೋರುತ್ತದೆ, ಅದಕ್ಕಾಗಿಯೇ ಅವರು ಅಮೇಠಿಗೆ ಬರುತ್ತಿದ್ದಾರೆ. ಅವರು ಎಲ್ಲಿಂದಲಾದರೂ ಸ್ಪರ್ಧಿಸಬಹುದು ಆದರೆ ಅವರು ಗೆಲ್ಲುತ್ತಾರೆ ಎಂದು ಅವರು ಹೇಳಬಾರದು ಎಂದು ಕಿಶೋರ್ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಅಜಯ್  ರಾಯ್ ಅವರನ್ನು ಯುಪಿ ಕಾಂಗ್ರೆಸ್ ಮುಖ್ಯಸ್ಥರನ್ನಾಗಿ ಗುರುವಾರ ನೇಮಕ ಮಾಡಲಾಗಿದೆ. ಒಂದು ದಿನದ ನಂತರ ಮಾಧ್ಯಮದವರಲ್ಲಿ ಮಾತಾನಾಡಿದ ರಾಯ್, ರಾಹುಲ್ ಗಾಂಧಿ ಅವರು ಅಮೇಠಿಯಿಂದ ಮತ್ತು ಪ್ರಿಯಾಂಕಾ ಗಾಂಧಿ ವಾರಣಾಸಿಯಿಂದ ಸ್ಪರ್ಧಿಸುತ್ತಾರೆ ಎಂದು ಹೇಳಿದ್ದಾರೆಯ “ನೋಡಿ, ಅಮೇಥಿಯ ಜನರು ಮತ್ತು ಪಕ್ಷದ ಕಾರ್ಯಕರ್ತರಿಗೆ ಬೇಕಾಗಿರುವುದು ಇದೇ. ರಾಹುಲ್ ಗಾಂಧಿಯವರು ಅಲ್ಲಿ ನಮ್ಮ ತಪ್ಪುಗಳನ್ನು ಸರಿಪಡಿಸಬೇಕು ಮತ್ತು ಅವರು ರಾಹುಲ್ ಗಾಂಧಿಯನ್ನು ಅಮೇಠಿಯಿಂದ ಭಾರಿ ಬಹುಮತದಿಂದ ಗೆಲ್ಲಿಸಬೇಕೆಂದು ಅವರು ಬಯಸುತ್ತಾರೆ” ಎಂದು ಅಜಯ್ ರಾಯ್ ಹೇಳಿದ್ದಾರೆ.

“ಪ್ರಿಯಾಂಕಾ ಗಾಂಧಿ ಅವರು ಎಲ್ಲಿಂದ ಸ್ಪರ್ಧಿಸಬೇಕು ಎಂಬುದು ಅವರಿಗೆ ಬಿಟ್ಟದ್ದು. ಆದರೆ ಪಕ್ಷದ ಎಲ್ಲಾ ಕಾರ್ಯಕರ್ತರು ಅವರನ್ನು ಪೂರ್ಣ ಶಕ್ತಿಯಿಂದ ಬೆಂಬಲಿಸುತ್ತಾರೆ. ಎಲ್ಲಿಂದ ಸ್ಪರ್ಧಿಸಬೇಕು ಎಂಬುದು ಅವರ (ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ) ಅವರ ವೈಯಕ್ತಿಕ ನಿರ್ಧಾರ. ನಾವು ಬೆಂಬಲ ನೀಡುತ್ತೇವೆ ಎಂದು 2014 ಮತ್ತು 2019 ಎರಡರಲ್ಲೂ ವಾರಣಾಸಿಯಿಂದ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸಿದ್ದ ಅಜಯ್ ರಾಯ್ ಹೇಳಿದ್ದಾರೆ.

ಇದನ್ನೂ ಓದಿ: ಅಮೇಠಿಯಿಂದಲೇ ರಾಹುಲ್ ಗಾಂಧಿ ಸ್ಪರ್ಧೆ, ಪ್ರಿಯಾಂಕಾ ಎಲ್ಲಿ ಬಯಸುತ್ತಾರೋ ಅಲ್ಲಿ ಕಣಕ್ಕಿಳಿಯಬಹುದು: ಯುಪಿ ಕಾಂಗ್ರೆಸ್ ಮುಖ್ಯಸ್ಥ

2024ರಲ್ಲಿ ವಾರಣಾಸಿಯಿಂದ ಪ್ರಧಾನಿ ಮೋದಿಗೆ ಯಾರು ಸವಾಲು ಹಾಕುತ್ತಾರೆ ಎಂದು ಕೇಳಿದಾಗ ಸದ್ಯಕ್ಕೆ ನಾನು ನಿಮ್ಮ ಮುಂದೆ ನಿಂತಿದ್ದೇನೆ. ಉಳಿದವರ ಬಗ್ಗೆ ಪಕ್ಷದ ಹೈಕಮಾಂಡ್ ಮತ್ತು ಇಂಡಿಯಾ ಮೈತ್ರಿಕೂಟ ನಿರ್ಧರಿಸುತ್ತದೆ ಎಂದು ಅಜಯ್ ರಾಯ್ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ