AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೇಲ್​ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಪ್ರಧಾನಿ ಮೋದಿ ಮಾತುಕತೆ: ಯುದ್ಧ ಸೇರಿ ಹಲವು ವಿಚಾರ ಚರ್ಚೆ

ದೂರವಾಣಿ ಮಾತುಕತೆ ವೇಳೆ, ಕೆಂಪು ಸಮುದ್ರದಲ್ಲಿ ಜಾಗತಿಕ ಹಡಗು ಸಾಗಣೆಗೆ ಇರಾನ್ ಬೆಂಬಲಿತ ಹೌತಿಗಳು ಒಡ್ಡುತ್ತಿರುವ ಬೆದರಿಕೆಗಳ ಬಗ್ಗೆ ನೆತನ್ಯಾಹು ಅವರು ಪ್ರಧಾನಿ ಮೋದಿ ಅವರೊಂದಿಗೆ ಚರ್ಚಿಸಿದ್ದಾರೆ. ಇಸ್ರೇಲ್​ನಲ್ಲಿ ನಡೆಯುತ್ತಿರುವ ಸಂಘರ್ಷದ ಬಗ್ಗೆ ಪ್ರಧಾನಿ ಮೋದಿಯವರಿಗೆ ವಿವರಿಸಿದ್ದಾರೆ.

ಇಸ್ರೇಲ್​ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಪ್ರಧಾನಿ ಮೋದಿ ಮಾತುಕತೆ: ಯುದ್ಧ ಸೇರಿ ಹಲವು ವಿಚಾರ ಚರ್ಚೆ
ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಇಸ್ರೇಲ್ ಕೌಂಟರ್ ಬೆಂಜಮಿನ್ ನೆತನ್ಯಾಹು ಅವರ ಸಂಗ್ರಹ ಚಿತ್ರ
ಗಣಪತಿ ಶರ್ಮಾ
|

Updated on:Dec 20, 2023 | 7:20 AM

Share

ನವದೆಹಲಿ, ಡಿಸೆಂಬರ್ 20: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು (Benjamin Netanyahu) ಮಂಗಳವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ದೂರವಾಣಿ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ. ಯುದ್ಧ ಪೀಡಿತ ಗಾಜಾದಲ್ಲಿ ಕದನ ವಿರಾಮಕ್ಕೆ ಕರೆ ನೀಡುವ ವಿಶ್ವಸಂಸ್ಥೆಯ ನಿರ್ಣಯದ ಪರವಾಗಿ ಭಾರತ ಮತ ಚಲಾಯಿಸಿದ ಕೆಲವೇ ದಿನಗಳ ಬಳಿಕ ಈ ಮಾತುಕತೆ ನಡೆದಿದೆ. ನೆತನ್ಯಾಹು ಅವರೊಂದಿಗಿನ ದೂರವಾಣಿ ಸಂಭಾಷಣೆಯ ಸಮಯದಲ್ಲಿ, ಇಸ್ರೇಲ್-ಹಮಾಸ್ ಯುದ್ಧ ಮತ್ತು ಸಮುದ್ರ ಸಂಚಾರದ ಸುರಕ್ಷತೆ ಸೇರಿದಂತೆ ಹಲವಾರು ವಿಷಯಗಳನ್ನು ಪ್ರಧಾನಿ ಮೋದಿ ಪ್ರಸ್ತಾಪಿಸಿದ್ದಾರೆ.

ಇಸ್ರೇಲ್ ಪಡೆಗಳು ಮತ್ತು ಹಮಾಸ್ ಉಗ್ರಗಾಮಿಗಳ ನಡುವೆ ನಡೆಯುತ್ತಿರುವ ಯುದ್ಧದ ಇತ್ತೀಚಿನ ಬೆಳವಣಿಗೆಗಳ ಕುರಿತು ನೆತನ್ಯಾಹು ಅವರು ದೂರವಾಣಿ ಕರೆಯಲ್ಲಿ ಪ್ರಧಾನಿ ಮೋದಿಯವರಿಗೆ ವಿವರಿಸಿದರು. ಏತನ್ಮಧ್ಯೆ, ಈ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯ ಮರುಸ್ಥಾಪನೆಯ ಪರವಾಗಿ ಭಾರತದ ನಿಲುವನ್ನು ಪ್ರಧಾನಿ ಮೋದಿ ಒತ್ತಿ ಹೇಳಿದರು. ಸಂತ್ರಸ್ತರಿಗೆ ಮಾನವೀಯ ನೆರವು ದೊರೆಯಲೇಬೇಕು ಎಂದು ಭಾರತದ ಪ್ರಧಾನಿ ಪುನರುಚ್ಚರಿಸಿದರು.

ಕೆಂಪು ಸಮುದ್ರದಲ್ಲಿ ಜಾಗತಿಕ ಹಡಗು ಸಾಗಣೆಗೆ ಇರಾನ್ ಬೆಂಬಲಿತ ಹೌತಿಗಳು ಒಡ್ಡುತ್ತಿರುವ ಬೆದರಿಕೆಗಳ ಬಗ್ಗೆ ನೆತನ್ಯಾಹು ಅವರು ಪ್ರಧಾನಿ ಮೋದಿ ಅವರೊಂದಿಗೆ ಚರ್ಚಿಸಿದ್ದಾರೆ. ಇಸ್ರೇಲ್​ನಲ್ಲಿ ನಡೆಯುತ್ತಿರುವ ಸಂಘರ್ಷದ ಬಗ್ಗೆ ಪ್ರಧಾನಿ ಮೋದಿಯವರಿಗೆ ವಿವರಿಸಿದ್ದಾರೆ. ಹಮಾಸ್ ವಿರುದ್ಧದ ಹೋರಾಟದಲ್ಲಿ ಬೆಂಬಲಿಸಿದ್ದಕ್ಕಾಗಿ ಇಸ್ರೇಲ್ ಪ್ರಧಾನಿ ಭಾರತಕ್ಕೆ ಧನ್ಯವಾದ ಅರ್ಪಿಸಿದ್ದಾರೆ ಎಂದು ‘ಇಸ್ರೇಲ್ ಟೈಮ್ಸ್’ ವರದಿ ಉಲ್ಲೇಖಿಸಿದೆ.

ಇದನ್ನೂ ಓದಿ: ಗಾಜಾ ಜಾಬಾಲಿಯಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: 90 ಮಂದಿ ಸಾವು

ಇಸ್ರೇಲ್ ಪ್ರಧಾನ ಮಂತ್ರಿ ನೆತನ್ಯಾಹು ಅವರೊಂದಿಗೆ ಇಸ್ರೇಲ್-ಹಮಾಸ್ ಸಂಘರ್ಷದ ಬಗ್ಗೆ, ಕಡಲ ಸಂಚಾರದ ಸುರಕ್ಷತೆಯ ಕಳವಳಗಳು ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆಯಿತು. ಯುದ್ಧ ಸಂತ್ರಸ್ತರಿಗಾಗಿ ನಿರಂತರ ಮಾನವೀಯ ನೆರವಿನೊಂದಿಗೆ ಆ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯ ಮರುಸ್ಥಾಪನೆಯ ಪರವಾಗಿ ಭಾರತದ ಸ್ಥಿರ ನಿಲುವನ್ನು ಒತ್ತಿ ಹೇಳಲಾಗಿದೆ ಎಂದು ಪ್ರಧಾನಿ ಮೋದಿ ಅವರು ಸಾಮಾಜಿಕ ಮಾಧ್ಯಮ ಎಕ್ಸ್​ ಖಾತೆಯಲ್ಲಿ ಸಂದೇಶ ಪ್ರಕಟಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:18 am, Wed, 20 December 23

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!