AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆತನ್ಯಾಹುಗೆ ಪ್ರಧಾನಿ ಮೋದಿ ಕರೆ, ಭದ್ರತಾ ಸಂಪುಟ ಸಭೆಯನ್ನೇ ಬಿಟ್ಟು ಬಂದ ಇಸ್ರೇಲ್ ಪ್ರಧಾನಿ

ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ಕರೆ ಮಾಡಿದ್ದಾರೆ. ಗಾಜಾ ಶಾಂತಿ ಯೋಜನೆಯ ಯಶಸ್ಸಿಗೆ ಅವರನ್ನು ಅಭಿನಂದಿಸಿದರು. ಒತ್ತೆಯಾಳುಗಳನ್ನು ಬಿಡುಗಡೆ ಮಾಡುವ ಮತ್ತು ಗಾಜಾಗೆ ಮಾನವೀಯ ನೆರವು ಹೆಚ್ಚಿಸುವ ಒಪ್ಪಂದವನ್ನು ಅವರು ಸ್ವಾಗತಿಸಿದರು. ಎಲ್ಲಾ ರೀತಿಯ ಭಯೋತ್ಪಾದನೆಯನ್ನು ಸ್ವೀಕಾರಾರ್ಹವಲ್ಲ ಎಂದು ಅವರು ಖಂಡಿಸಿದರು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಸಂಭಾಷಣೆಯ ನಂತರ ಈ ಮಾತುಕತೆ ನಡೆಯಿತು.

ನೆತನ್ಯಾಹುಗೆ ಪ್ರಧಾನಿ ಮೋದಿ ಕರೆ, ಭದ್ರತಾ ಸಂಪುಟ ಸಭೆಯನ್ನೇ ಬಿಟ್ಟು ಬಂದ ಇಸ್ರೇಲ್ ಪ್ರಧಾನಿ
ನರೇಂದ್ರ ಮೋದಿ ನೆತನ್ಯಾಹು
ನಯನಾ ರಾಜೀವ್
|

Updated on:Oct 10, 2025 | 7:56 AM

Share

ನವದೆಹಲಿ, ಅಕ್ಟೋಬರ್ 10: ಗಾಜಾದಲ್ಲಿ ಶಾಂತಿ ಸ್ಥಾಪನೆಗೆ ಒಪ್ಪಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ(Narendra Modi) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹುಗೆ ಕರೆ ಮಾಡಿ ಅಭಿನಂದಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೂಡ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಇದೇ ವಿಷಯದ ಬಗ್ಗೆ ಮಾತನಾಡಿ, ಗಾಜಾ ಯುದ್ಧವನ್ನು ಕೊನೆಗೊಳಿಸಲು ಅವರ ಉದ್ದೇಶಿತ ಗಾಜಾ ಶಾಂತಿ ಯೋಜನೆಗೆ ಅಭಿನಂದನೆ ಸಲ್ಲಿಸಿದ ನಂತರ ಪ್ರಧಾನಿ ಮೋದಿ ಮತ್ತು ನೆತನ್ಯಾಹು ನಡುವಿನ ಈ ಸಂಭಾಷಣೆ ನಡೆದಿದೆ.

ಪ್ರಧಾನಿ ಮೋದಿ ಅವರೊಂದಿಗೆ ಗಾಜಾ ಶಾಂತಿ ಯೋಜನೆಯನ್ನು ಚರ್ಚಿಸಲು ಪ್ರಧಾನಿ ನೆತನ್ಯಾಹು ತಮ್ಮ ಭದ್ರತಾ ಸಂಪುಟ ಸಭೆಯನ್ನು ತಾತ್ಕಾಲಿಕವಾಗಿ ಮುಂದೂಡಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ. ಪ್ರಧಾನಿ ನರೇಂದ್ರ ಮೋದಿ ತಮ್ಮ ಎಕ್ಸ್​ ಖಾತೆಯಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ನಾನು ನನ್ನ ಸ್ನೇಹಿತ ಬೆಂಜಮಿನ್ ನೆತನ್ಯಾಹುಗೆ ಕರೆ ಮಾಡಿ ಅಧ್ಯಕ್ಷ ಟ್ರಂಪ್ ಅವರ ಗಾಜಾ ಶಾಂತಿ ಯೋಜನೆಯಡಿಯಲ್ಲಿ ಆಗಿರುವ ಪ್ರಗತಿಗೆ ಅಭಿನಂದನೆ ಸಲ್ಲಿಸಿದೆ.

ಪ್ರಧಾನಿ ಮೋದಿ ಪೋಸ್ಟ್​

ಒತ್ತೆಯಾಳುಗಳನ್ನು ಬಿಡುಗಡೆ ಮಾಡುವ ಮತ್ತು ಗಾಜಾದ ಜನರಿಗೆ ಮಾನವೀಯ ನೆರವು ಹೆಚ್ಚಿಸುವ ಒಪ್ಪಂದವನ್ನು ನಾವು ಸ್ವಾಗತಿಸುತ್ತೇವೆ. ಯಾವುದೇ ಸ್ಥಳದಲ್ಲಿ ಭಯೋತ್ಪಾದನೆ ಸ್ವೀಕಾರಾರ್ಹವಲ್ಲ ಎಂದು ನಾವು ಪುನರುಚ್ಚರಿಸಿದ್ದೇವೆ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ಹಮಾಸ್​ನಿಂದ ಒತ್ತೆಯಾಳುಗಳ ಬಿಡುಗಡೆ ಗಾಜಾದಲ್ಲಿ ಶಾಂತಿಗೆ ದಾರಿ ಮಾಡಿಕೊಡಬಹುದು: ಮೋದಿ

ಟೈಮ್ಸ್ ಆಫ್ ಇಸ್ರೇಲ್‌ನ ವರದಿಯ ಪ್ರಕಾರ, ಇಸ್ರೇಲ್ ಪ್ರಧಾನಿ ಕಚೇರಿ ಕೂಡ ಈ ಸಂಬಂಧ ಹೇಳಿಕೆ ನೀಡಿದೆ. ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಗಾಜಾದಲ್ಲಿ ಕದನ ವಿರಾಮ ಮತ್ತು ಒತ್ತೆಯಾಳು ಬಿಡುಗಡೆ ಒಪ್ಪಂದದ ಕುರಿತು ಚರ್ಚಿಸುತ್ತಿದ್ದ ಭದ್ರತಾ ಸಂಪುಟ ಸಭೆಯನ್ನು ಪ್ರಧಾನಿ ಮೋದಿ ಅವರೊಂದಿಗೆ ಮಾತನಾಡಲು ಸ್ವಲ್ಪ ಸಮಯ ಮುಂದೂಡಲಾಯಿತು ಎಂದು ಇಸ್ರೇಲ್ ಪ್ರಧಾನಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ನೆತನ್ಯಾಹು ಯಾವಾಗಲೂ ಭಾರತದ ಆಪ್ತ ಸ್ನೇಹಿತರಾಗಿದ್ದಾರೆ ಮತ್ತು ಈ ಸ್ನೇಹ ಭವಿಷ್ಯದಲ್ಲಿಯೂ ಬಲವಾಗಿ ಉಳಿಯುತ್ತದೆ ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದರು. ಇಸ್ರೇಲ್ ನೀಡಿದ ಬೆಂಬಲಕ್ಕಾಗಿ ಪ್ರಧಾನಿ ನೆತನ್ಯಾಹು ಪ್ರಧಾನಿ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದರು ಮತ್ತು ಇಬ್ಬರೂ ನಾಯಕರು ಪರಸ್ಪರ ಸಹಕಾರವನ್ನು ಇನ್ನಷ್ಟು ಗಾಢವಾಗಿಸಲು ಒಪ್ಪಿಕೊಂಡರು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:51 am, Fri, 10 October 25

ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು
SSLC ವಿದ್ಯಾರ್ಥಿಗಳ ಪರೀಕ್ಷೆ ಮುಗಿಯುವವರೆಗೂ ಟಿವಿ–ಮೊಬೈಲ್ ಆಫ್!
SSLC ವಿದ್ಯಾರ್ಥಿಗಳ ಪರೀಕ್ಷೆ ಮುಗಿಯುವವರೆಗೂ ಟಿವಿ–ಮೊಬೈಲ್ ಆಫ್!
ಮೊಬೈಲ್ ಕದ್ದು ಬಸ್ಸಿನ ಕಿಟಕಿಯಿಂದ ಜಾರಿಕೊಳ್ಳುವ ಕಳ್ಳನ ಪ್ಲ್ಯಾನ್ ಫ್ಲಾಪ್
ಮೊಬೈಲ್ ಕದ್ದು ಬಸ್ಸಿನ ಕಿಟಕಿಯಿಂದ ಜಾರಿಕೊಳ್ಳುವ ಕಳ್ಳನ ಪ್ಲ್ಯಾನ್ ಫ್ಲಾಪ್
ಗಟ ಗಟನೆ ಚರಂಡಿ ನೀರು ಕುಡಿದ ಹಣ್ಣಿನ ವ್ಯಾಪಾರಿ
ಗಟ ಗಟನೆ ಚರಂಡಿ ನೀರು ಕುಡಿದ ಹಣ್ಣಿನ ವ್ಯಾಪಾರಿ