AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಮಾಸ್​ ದಾಳಿಯಲ್ಲಿ ಮೃತಪಟ್ಟಿದ್ದ ಕೇರಳದ ಮಹಿಳೆಯ ಕುಟುಂಬಕ್ಕೆ ಪರಿಹಾರ ಘೋಷಿಸಿದ ಇಸ್ರೇಲ್ ಸರ್ಕಾರ…

ರಾನ್ ಮಲ್ಕಾ ಅವರು ಕೇರಳದಲ್ಲಿರುವ ಸೌಮ್ಯಾ ಕುಟುಂಬದೊಂದಿಗೆ ಮಾತುಕತೆ ನಡೆಸಿದ್ದು, ಈ ವಾರದ ಕೊನೆಯಲ್ಲಿ ಆಕೆಯ ಮೃತದೇಹ ಇಸ್ರೇಲ್​ನಿಂದ ಭಾರತಕ್ಕೆ ತಲುಪುವ ಭರವಸೆ ನೀಡಿದ್ದಾರೆ. 2008ರಲ್ಲಿ ಮುಂಬೈ ಮೇಲೆ ಉಗ್ರರು ದಾಳಿ ನಡೆಸಿದ ಸಂದರ್ಭವನ್ನು ನೆನಪಿಸಿಕೊಂಡಿದ್ದಾರೆ.

ಹಮಾಸ್​ ದಾಳಿಯಲ್ಲಿ ಮೃತಪಟ್ಟಿದ್ದ ಕೇರಳದ ಮಹಿಳೆಯ ಕುಟುಂಬಕ್ಕೆ ಪರಿಹಾರ ಘೋಷಿಸಿದ ಇಸ್ರೇಲ್ ಸರ್ಕಾರ...
ಸೌಮ್ಯಾ ಸಂತೋಷ್​
Lakshmi Hegde
|

Updated on:May 13, 2021 | 11:06 PM

Share

ದೆಹಲಿ: ಪ್ಯಾಲೆಸ್ಟೈನ್​ನ ಉಗ್ರಸಂಘಟನೆ ಹಮಾಸ್​, ಗಾಜಾದಿಂದ ಇಸ್ರೇಲ್​ ಮೇಲೆ ನಡೆಸಿದ್ದ ರಾಕೆಟ್​ ದಾಳಿಯಲ್ಲಿ ಮೃತಪಟ್ಟಿದ್ದ ಕೇರಳದ ಮಹಿಳೆಯ ಕುಟುಂಬಕ್ಕೆ ಪರಿಹಾರ ನೀಡುವುದಾಗಿ ಇಸ್ರೇಲ್ ಸರ್ಕಾರ ತಿಳಿಸಿದೆ. ಭಾರತದಲ್ಲಿರುವ ಇಸ್ರೇಲಿ ರಾಯಭಾರಿ ರಾನ್ ಮಲ್ಕಾ ಈ ವಿಷಯವನ್ನು ತಿಳಿಸಿದ್ದಾರೆ. ಅಷ್ಟೇ ಅಲ್ಲ, ಕೇರಳದ 31 ವರ್ಷದ ಮಹಿಳೆ ಸೌಮ್ಯಾ ಸಂತೋಷ್​ ಅವರ ಸಾವಿಗೆ ವೈಯಕ್ತಿಕವಾಗಿ ಮತ್ತು ಇಡೀ ಇಸ್ರೇಲ್​ ಪರವಾಗಿ ಸಂತಾಪ ಸೂಚಿಸುವುದಾಗಿ ಹೇಳಿದ್ದಾರೆ. ಸೌಮ್ಯಾ ಅವರ 9 ವರ್ಷದ ಮಗನ ಬಗ್ಗೆ ಯೋಚಿಸಿದರೆ ತುಂಬ ನೋವಾಗುತ್ತದೆ. ಆ ಮಗು ಇಷ್ಟು ಚಿಕ್ಕ ವಯಸ್ಸಿನಲ್ಲಿಯೇ ಅಮ್ಮನನ್ನು ಕಳೆದುಕೊಳ್ಳುವಂತಾಯಿತು ಎಂದು ಟ್ವೀಟ್ ಮಾಡಿದ್ದಾರೆ.

ರಾನ್ ಮಲ್ಕಾ ಅವರು ಕೇರಳದಲ್ಲಿರುವ ಸೌಮ್ಯಾ ಕುಟುಂಬದೊಂದಿಗೆ ಮಾತುಕತೆ ನಡೆಸಿದ್ದು, ಈ ವಾರದ ಕೊನೆಯಲ್ಲಿ ಆಕೆಯ ಮೃತದೇಹ ಇಸ್ರೇಲ್​ನಿಂದ ಭಾರತಕ್ಕೆ ತಲುಪುವ ಭರವಸೆ ನೀಡಿದ್ದಾರೆ. 2008ರಲ್ಲಿ ಮುಂಬೈ ಮೇಲೆ ಉಗ್ರರು ದಾಳಿ ನಡೆಸಿದ ಸಂದರ್ಭ ನೆನಪಿಗೆ ಬರುತ್ತಿದೆ. ಆ ಸಮಯದಲ್ಲಿ ಅನೇಕ ಮಕ್ಕಳು ತಮ್ಮ ಪಾಲಕರನ್ನು ಕಳೆದುಕೊಂಡಿದ್ದರು, ಅದೆಷ್ಟೋ ಜನರು ತಮ್ಮ ಆಪ್ತರನ್ನು ಕಳೆದುಕೊಂಡಿದ್ದರು. ಇದೀಗ ಸೌಮ್ಯಾ ಅವರ ಸಾವಿನ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕುಟುಂಬಕ್ಕೆ ಕರುಣಿಸಲಿ ಎಂದು ರಾನ್​ ಮಲ್ಕಾ ಟ್ವೀಟ್​ನಲ್ಲಿ ತಿಳಿಸಿದ್ದಾರೆ.

ಗಾಜಾದಿಂದ ಇಸ್ರೇಲ್ ಮೇಲೆ ಹಮಾಸ್ ಉಗ್ರರು ರಾಕೆಟ್ ದಾಳಿ ನಡೆಸಿದ್ದರು. ಈ ವೇಳೆ ಇಸ್ರೇಲ್​​ನ ಅಶ್ಕೆಲೋನ್​ನಲ್ಲಿರುವ ಮನೆಯಲ್ಲಿ ಕುಳಿತು ಕೇರಳದಲ್ಲಿರುವ ಪತಿಯೊಂದಿಗೆ ವಿಡಿಯೋ ಕಾಲ್​ ಮೂಲಕ ಸೌಮ್ಯಾ ಮಾತನಾಡುತ್ತಿದ್ದಾಗ ಈ ರಾಕೆಟ್ ಬಂದು ಬಡಿದಿತ್ತು. ಅಲ್ಲಿಗೆ ಆಕೆಯ ಜೀವವೂ ಹೋಗಿತ್ತು. ಪತಿ ಹಾಗೂ ಮಗ ಇಡುಕ್ಕಿಯ ಕೀರಿತೋಡು ಎಂಬಲ್ಲಿ ವಾಸವಾಗಿದ್ದಾರೆ. ಇದೀಗ ಸೌಮ್ಯಾ ಮೃತದೇಹವನ್ನು ಅಲ್ಲಿಯೇ ತೆಗೆದುಕೊಂಡು ಹೋಗಿ ಅಂತ್ಯಕ್ರಿಯೆ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಮನೆಯ ಪಕ್ಕದ ಸಭಾಭವನವನ್ನೇ ಕೊವಿಡ್​ ಕಾಳಜಿ ಕೇಂದ್ರವನ್ನಾಗಿ ಪರಿವರ್ತಿಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ

ಆಗಸ್ಟ್​ನಿಂದ ಸೆಪ್ಟೆಂಬರ್ ಅವಧಿಯಲ್ಲಿ ದೇಶದಲ್ಲಿ 200 ಕೋಟಿ ಡೋಸ್ ಕೊವಿಡ್ ಲಸಿಕೆ ದೊರೆಯುವ ಸಾಧ್ಯತೆ

Published On - 11:03 pm, Thu, 13 May 21

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ