AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಮಾಸ್​ ದಾಳಿಯಲ್ಲಿ ಮೃತಪಟ್ಟಿದ್ದ ಕೇರಳದ ಮಹಿಳೆಯ ಕುಟುಂಬಕ್ಕೆ ಪರಿಹಾರ ಘೋಷಿಸಿದ ಇಸ್ರೇಲ್ ಸರ್ಕಾರ…

ರಾನ್ ಮಲ್ಕಾ ಅವರು ಕೇರಳದಲ್ಲಿರುವ ಸೌಮ್ಯಾ ಕುಟುಂಬದೊಂದಿಗೆ ಮಾತುಕತೆ ನಡೆಸಿದ್ದು, ಈ ವಾರದ ಕೊನೆಯಲ್ಲಿ ಆಕೆಯ ಮೃತದೇಹ ಇಸ್ರೇಲ್​ನಿಂದ ಭಾರತಕ್ಕೆ ತಲುಪುವ ಭರವಸೆ ನೀಡಿದ್ದಾರೆ. 2008ರಲ್ಲಿ ಮುಂಬೈ ಮೇಲೆ ಉಗ್ರರು ದಾಳಿ ನಡೆಸಿದ ಸಂದರ್ಭವನ್ನು ನೆನಪಿಸಿಕೊಂಡಿದ್ದಾರೆ.

ಹಮಾಸ್​ ದಾಳಿಯಲ್ಲಿ ಮೃತಪಟ್ಟಿದ್ದ ಕೇರಳದ ಮಹಿಳೆಯ ಕುಟುಂಬಕ್ಕೆ ಪರಿಹಾರ ಘೋಷಿಸಿದ ಇಸ್ರೇಲ್ ಸರ್ಕಾರ...
ಸೌಮ್ಯಾ ಸಂತೋಷ್​
Lakshmi Hegde
|

Updated on:May 13, 2021 | 11:06 PM

Share

ದೆಹಲಿ: ಪ್ಯಾಲೆಸ್ಟೈನ್​ನ ಉಗ್ರಸಂಘಟನೆ ಹಮಾಸ್​, ಗಾಜಾದಿಂದ ಇಸ್ರೇಲ್​ ಮೇಲೆ ನಡೆಸಿದ್ದ ರಾಕೆಟ್​ ದಾಳಿಯಲ್ಲಿ ಮೃತಪಟ್ಟಿದ್ದ ಕೇರಳದ ಮಹಿಳೆಯ ಕುಟುಂಬಕ್ಕೆ ಪರಿಹಾರ ನೀಡುವುದಾಗಿ ಇಸ್ರೇಲ್ ಸರ್ಕಾರ ತಿಳಿಸಿದೆ. ಭಾರತದಲ್ಲಿರುವ ಇಸ್ರೇಲಿ ರಾಯಭಾರಿ ರಾನ್ ಮಲ್ಕಾ ಈ ವಿಷಯವನ್ನು ತಿಳಿಸಿದ್ದಾರೆ. ಅಷ್ಟೇ ಅಲ್ಲ, ಕೇರಳದ 31 ವರ್ಷದ ಮಹಿಳೆ ಸೌಮ್ಯಾ ಸಂತೋಷ್​ ಅವರ ಸಾವಿಗೆ ವೈಯಕ್ತಿಕವಾಗಿ ಮತ್ತು ಇಡೀ ಇಸ್ರೇಲ್​ ಪರವಾಗಿ ಸಂತಾಪ ಸೂಚಿಸುವುದಾಗಿ ಹೇಳಿದ್ದಾರೆ. ಸೌಮ್ಯಾ ಅವರ 9 ವರ್ಷದ ಮಗನ ಬಗ್ಗೆ ಯೋಚಿಸಿದರೆ ತುಂಬ ನೋವಾಗುತ್ತದೆ. ಆ ಮಗು ಇಷ್ಟು ಚಿಕ್ಕ ವಯಸ್ಸಿನಲ್ಲಿಯೇ ಅಮ್ಮನನ್ನು ಕಳೆದುಕೊಳ್ಳುವಂತಾಯಿತು ಎಂದು ಟ್ವೀಟ್ ಮಾಡಿದ್ದಾರೆ.

ರಾನ್ ಮಲ್ಕಾ ಅವರು ಕೇರಳದಲ್ಲಿರುವ ಸೌಮ್ಯಾ ಕುಟುಂಬದೊಂದಿಗೆ ಮಾತುಕತೆ ನಡೆಸಿದ್ದು, ಈ ವಾರದ ಕೊನೆಯಲ್ಲಿ ಆಕೆಯ ಮೃತದೇಹ ಇಸ್ರೇಲ್​ನಿಂದ ಭಾರತಕ್ಕೆ ತಲುಪುವ ಭರವಸೆ ನೀಡಿದ್ದಾರೆ. 2008ರಲ್ಲಿ ಮುಂಬೈ ಮೇಲೆ ಉಗ್ರರು ದಾಳಿ ನಡೆಸಿದ ಸಂದರ್ಭ ನೆನಪಿಗೆ ಬರುತ್ತಿದೆ. ಆ ಸಮಯದಲ್ಲಿ ಅನೇಕ ಮಕ್ಕಳು ತಮ್ಮ ಪಾಲಕರನ್ನು ಕಳೆದುಕೊಂಡಿದ್ದರು, ಅದೆಷ್ಟೋ ಜನರು ತಮ್ಮ ಆಪ್ತರನ್ನು ಕಳೆದುಕೊಂಡಿದ್ದರು. ಇದೀಗ ಸೌಮ್ಯಾ ಅವರ ಸಾವಿನ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕುಟುಂಬಕ್ಕೆ ಕರುಣಿಸಲಿ ಎಂದು ರಾನ್​ ಮಲ್ಕಾ ಟ್ವೀಟ್​ನಲ್ಲಿ ತಿಳಿಸಿದ್ದಾರೆ.

ಗಾಜಾದಿಂದ ಇಸ್ರೇಲ್ ಮೇಲೆ ಹಮಾಸ್ ಉಗ್ರರು ರಾಕೆಟ್ ದಾಳಿ ನಡೆಸಿದ್ದರು. ಈ ವೇಳೆ ಇಸ್ರೇಲ್​​ನ ಅಶ್ಕೆಲೋನ್​ನಲ್ಲಿರುವ ಮನೆಯಲ್ಲಿ ಕುಳಿತು ಕೇರಳದಲ್ಲಿರುವ ಪತಿಯೊಂದಿಗೆ ವಿಡಿಯೋ ಕಾಲ್​ ಮೂಲಕ ಸೌಮ್ಯಾ ಮಾತನಾಡುತ್ತಿದ್ದಾಗ ಈ ರಾಕೆಟ್ ಬಂದು ಬಡಿದಿತ್ತು. ಅಲ್ಲಿಗೆ ಆಕೆಯ ಜೀವವೂ ಹೋಗಿತ್ತು. ಪತಿ ಹಾಗೂ ಮಗ ಇಡುಕ್ಕಿಯ ಕೀರಿತೋಡು ಎಂಬಲ್ಲಿ ವಾಸವಾಗಿದ್ದಾರೆ. ಇದೀಗ ಸೌಮ್ಯಾ ಮೃತದೇಹವನ್ನು ಅಲ್ಲಿಯೇ ತೆಗೆದುಕೊಂಡು ಹೋಗಿ ಅಂತ್ಯಕ್ರಿಯೆ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಮನೆಯ ಪಕ್ಕದ ಸಭಾಭವನವನ್ನೇ ಕೊವಿಡ್​ ಕಾಳಜಿ ಕೇಂದ್ರವನ್ನಾಗಿ ಪರಿವರ್ತಿಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ

ಆಗಸ್ಟ್​ನಿಂದ ಸೆಪ್ಟೆಂಬರ್ ಅವಧಿಯಲ್ಲಿ ದೇಶದಲ್ಲಿ 200 ಕೋಟಿ ಡೋಸ್ ಕೊವಿಡ್ ಲಸಿಕೆ ದೊರೆಯುವ ಸಾಧ್ಯತೆ

Published On - 11:03 pm, Thu, 13 May 21

Follow Us
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು