ಭಾರತದಲ್ಲಿ 2028ರ ಹೊತ್ತಿಗೆ ನಿರ್ಮಾಣವಾಗಲಿದೆ ದೇಶದ ಮೊದಲ ಅಂತರಿಕ್ಷ ನಿಲ್ದಾಣ

ಭಾರತದಲ್ಲಿ 2028ರಷ್ಟೊತ್ತಿಗೆ ಭಾರತೀಯ ಅಂತರಿಕ್ಷ ನಿಲ್ದಾಣ ಸ್ಥಾಪನೆಯಾಗಲಿದೆ ಎಂದು ಇಸ್ರೋ ಮಾಹಿತಿ ನೀಡಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಧ್ಯಕ್ಷ ಎಸ್ ಸೋಮನಾಥ್ ಮಾತನಾಡಿ, ಭಾರತವು ತನ್ನ ಅಸ್ತಿತ್ವದಲ್ಲಿರುವ ಸಾಮರ್ಥ್ಯಗಳನ್ನು ಬಳಸಿಕೊಂಡು 2028 ರ ವೇಳೆಗೆ ಮೊದಲ ಭಾರತೀಯ ಬಾಹ್ಯಾಕಾಶ ನಿಲ್ದಾಣ ಸ್ಥಾಪಿಸಲು ಮುಂದಾಗಿದೆ ಎಂದಿದ್ದಾರೆ.

ಭಾರತದಲ್ಲಿ 2028ರ ಹೊತ್ತಿಗೆ ನಿರ್ಮಾಣವಾಗಲಿದೆ  ದೇಶದ ಮೊದಲ ಅಂತರಿಕ್ಷ ನಿಲ್ದಾಣ
ಎಸ್​ ಸೋಮನಾಥ್​Image Credit source: The Week
Follow us
|

Updated on: Jan 12, 2024 | 9:30 AM

ಭಾರತದಲ್ಲಿ 2028ರಷ್ಟೊತ್ತಿಗೆ ಭಾರತೀಯ ಅಂತರಿಕ್ಷ ನಿಲ್ದಾಣ ಸ್ಥಾಪನೆಯಾಗಲಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(Isro) ಮಾಹಿತಿ ನೀಡಿದೆ. ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಮಾತನಾಡಿ, ಭಾರತವು ತನ್ನ ಅಸ್ತಿತ್ವದಲ್ಲಿರುವ ಸಾಮರ್ಥ್ಯಗಳನ್ನು ಬಳಸಿಕೊಂಡು 2028 ರ ವೇಳೆಗೆ ಮೊದಲ ಭಾರತೀಯ ಬಾಹ್ಯಾಕಾಶ ನಿಲ್ದಾಣ ಸ್ಥಾಪಿಸಲು ಮುಂದಾಗಿದೆ ಎಂದಿದ್ದಾರೆ.

ಭಾರತದ ಪ್ರತಿಭೆ ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿದೆ, ಮುಂದಿನ 5 ರಿಂದ 10 ವರ್ಷಗಳಲ್ಲಿ ಭೂಮಿಯ ಮೇಲಿನ ವಿವಿಧ ಕಾರ್ಯಗಳಿಗಾಗಿ ಕೈಗಾರಿಕೆಗಳು ನೂರಾರು ಬಾಹ್ಯಾಕಾಶ ನೌಕೆಗಳನ್ನು ನಿರ್ಮಿಸಬೇಕಾಗುತ್ತದೆ ಎಂದು ಅವರು ಹೇಳಿದರು. ಭಾರತದ ಮೊದಲ ಬಾಹ್ಯಾಕಾಶ ನಿಲ್ದಾಣವನ್ನು ಸ್ಥಾಪಿಸುವಲ್ಲಿ ಯಶಸ್ವಿಯಾದ ನಂತರ, ನೀವು (ಗಗನಯಾತ್ರಿಗಳು) ಬಂದು ಪ್ರಯೋಗಗಳನ್ನು ನಡೆಸಲು ಪ್ರಯೋಗಾಲಯವಾಗಿ ಅಭಿವೃದ್ಧಿಪಡಿಸಲು ನಾವು ಬಯಸುತ್ತೇವೆ ಎಂದು ಹೇಳಿದ್ದಾರೆ.

2035 ರ ವೇಳೆಗೆ ನಾವು ಮಾನವರನ್ನು ಬಾಹ್ಯಾಕಾಶಕ್ಕೆ ಕಳುಹಿಸಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು. ಖಗೋಳಶಾಸ್ತ್ರಕ್ಕೆ ಸಂಬಂಧಿಸಿದ ಸಂಶೋಧನೆಗಳನ್ನು ಮಾಡಬಹುದಾದ ಪ್ರಯೋಗಾಲಯಗಳು, ಸಂಸ್ಥೆಗಳು, ವೈಜ್ಞಾನಿಕ ಸಂಸ್ಥೆಗಳನ್ನು ನಾವು ಹೊಂದಿರಲಿದ್ದೇವೆ.

ಮತ್ತಷ್ಟು ಓದಿ: ಅಂತಿಮ ಕಕ್ಷೆ ಸೇರಿದ ಆದಿತ್ಯ ಎಲ್1; ಇದು ದೀರ್ಘ ಪ್ರಯಾಣದ ಅಂತ್ಯ: ಇಸ್ರೋ ಮುಖ್ಯಸ್ಥ ಸೋಮನಾಥ್

ಮುಂದಿನ ದಿನಗಳಲ್ಲಿ ಭಾರತೀಯ ಬಾಹ್ಯಾಕಾಶ ನಿಲ್ದಾಣದಿಂದ ಹೆಚ್ಚಿನ ಪ್ರಯೋಜನವಾಗಲಿದೆ ಎಂದು ಇಸ್ರೋ ಮುಖ್ಯಸ್ಥರು ಹೇಳಿದ್ದಾರೆ. ಉದ್ಯಮವು ಬಾಹ್ಯಾಕಾಶ ಕ್ಷೇತ್ರದ ಅಭಿವೃದ್ಧಿಗೆ ಕೊಡುಗೆ ನೀಡಲು ಅವಕಾಶವನ್ನು ಪಡೆಯುತ್ತದೆ. ಬಾಹ್ಯಾಕಾಶ ನಿಲ್ದಾಣವನ್ನು ನಿರ್ಮಿಸಲು ಅತ್ಯಾಧುನಿಕ ತಂತ್ರಜ್ಞಾನ ಮತ್ತು ಅವುಗಳನ್ನು ನಿರ್ವಹಿಸುವ ಪ್ರಾವೀಣ್ಯತೆಯ ವಿಚಾರದಲ್ಲಿ ಭಾರೀ ಪ್ರಮಾಣದ ಸಂಪನ್ಮೂಲಗಳನ್ನು ಹೊಂದುವ ಅವಶ್ಯಕತೆಯಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?