AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆದಿತ್ಯ ಎಲ್​-1 ಉಡಾವಣೆ ದಿನವೇ ಇಸ್ರೋ ಅಧ್ಯಕ್ಷ ಸೋಮನಾಥ್​ ಅವರಿಗೆ ಕ್ಯಾನ್ಸರ್​ ಇರುವುದು ಗೊತ್ತಾಗಿತ್ತು

ಆದಿತ್ಯ ಎಲ್​-1 ಉಡಾವಣೆ ದಿನವೇ ಇಸ್ರೋ ಅಧ್ಯಕ್ಷ ಎಸ್​ ಸೋಮನಾಥ್​ ಅವರಿಗೆ ಕ್ಯಾನ್ಸರ್​ ಇರುವುದು ಗೊತ್ತಾಗಿತ್ತು ಎನ್ನುವ ಮಾಹಿತಿ ಲಭ್ಯವಾಗಿದೆ.

ಆದಿತ್ಯ ಎಲ್​-1 ಉಡಾವಣೆ ದಿನವೇ ಇಸ್ರೋ ಅಧ್ಯಕ್ಷ ಸೋಮನಾಥ್​ ಅವರಿಗೆ ಕ್ಯಾನ್ಸರ್​ ಇರುವುದು ಗೊತ್ತಾಗಿತ್ತು
ಎಸ್​ ಸೋಮನಾಥ್​
ನಯನಾ ರಾಜೀವ್
|

Updated on:Mar 04, 2024 | 3:24 PM

Share

ಆದಿತ್ಯ ಎಲ್​-1 ಉಡಾವಣೆ ದಿನವೇ ಇಸ್ರೋ ಅಧ್ಯಕ್ಷ ಎಸ್​ ಸೋಮನಾಥ್(S Somnath)​ ಅವರಿಗೆ ಕ್ಯಾನ್ಸರ್(Cancer)​ ಇರುವುದು ಗೊತ್ತಾಗಿತ್ತು ಎನ್ನುವ ಮಾಹಿತಿ ಲಭ್ಯವಾಗಿದೆ. ಭಾರತದ ಸೂರ್ಯ ಮಿಷನ್ ಆದಿತ್ಯ ಎಲ್​1 ಉಡಾವಣೆ ಸಮಯದಲ್ಲೇ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮುಖ್ಯಸ್ಥ ಎಸ್​ ಸೋಮನಾಥ್​ ಕ್ಯಾನ್ಸರ್​ ವಿರುದ್ಧ ಹೋರಾಡುತ್ತಿದ್ದರು.

ಸೋಮನಾಥ್​ ಸಂದರ್ಶನದಲ್ಲಿ ಈ ವಿಚಾರವನ್ನು ಖಚಿತಪಡಿಸಿದ್ದಾರೆ. ಸ್ಕ್ಯಾನಿಂಗ್​ನಲ್ಲಿ ಕ್ಯಾನ್ಸರ್​ ಪತ್ತೆಯಾಗಿದೆ ಎಂದು ಹೇಳಿದ್ದಾರೆ.

ಚಂದ್ರಯಾನ 3 ಮಿಷನ್ ಉಡಾವಣೆ ಸಮಯದಲ್ಲಿಯೂ ಕೆಲವು ಆರೋಗ್ಯ ಸಂಬಂಧಿತ ಸಮಸ್ಯೆಗಳಿದ್ದವು, ಆದರೆ ಅಲ್ಲಿಯವರೆಗೆ ಏನೂ ಸ್ಪಷ್ಟವಾಗಿರಲಿಲ್ಲ, ಆದಿತ್ಯ ಮಿಷನ್ ದಿನದಂದು ಕಾಯಿಲೆ ಇರುವುದು ಪತ್ತೆಯಾಗಿತ್ತು. ಇದರಿಂದ ಅವರು ಮತ್ತವರ ಕುಟುಂಬದವರು ತುಂಬಾ ಬೇಸರಗೊಂಡಿದ್ದರು ಎಂದು ಹೇಳಿದರು.

ಮತ್ತಷ್ಟು ಓದಿ: ಹೊಟ್ಟೆಯ ಕ್ಯಾನ್ಸರ್ ಏಕೆ ಅಪಾಯಕಾರಿ; ತಜ್ಞರ ಉತ್ತರ ಇಲ್ಲಿದೆ

ಈ ಸುದ್ದಿ ಕೇಳಿ ಎಲ್ಲಾ ವಿಜ್ಞಾನಿಗಳು ಕೂಡ ಬೇಸರಗೊಂಡಿದ್ದಾರೆ, ಉಡಾವಣೆ ಬಳಿಕ ಹೊಟ್ಟೆಯ ಸ್ಕ್ಯಾನ್ ಮಾಡಲಾಯಿತು. ಆಗ ರೋಗ ಬಹಿರಂಗವಾಯಿತು. ಹೆಚ್ಚಿನ ತನಿಖೆ ಹಾಗೂ ಚಿಕಿತ್ಸೆಗಾಗಿ ಚೆನ್ನೈಗೆ ಹೋಗಿದ್ದರು. ಅನುವಂಶಿಕವಾಗಿ ಕ್ಯಾನ್ಸರ್ ಬಂದಿದೆ. ಅವರಿಗೆ ಉದರದ ಕ್ಯಾನ್ಸರ್​ ಇತ್ತು, ತಕ್ಷಣವೇ ಕಿಮೋ ಥೆರಪಿ ನಡೆಸಿದ್ದಾರೆ.

ಚಿಕಿತ್ಸೆ ನಡೆದು ಚೇತರಿಸಿಕೊಂಡಿದ್ದಾರೆ. ಇದು ಸುದೀರ್ಘ ಪ್ರಕ್ರಿಯೆ, ನಾನು ಈ ಯುದ್ಧದಲ್ಲಿ ಹೋರಾಡುತ್ತೇನೆ, ನಾಲ್ಕು ದಿನ ಮಾತ್ರ ಆಸ್ಪತ್ರೆಯಲ್ಲಿದ್ದೆ, ಯಾವುದೇ ನೋವಿಲ್ಲದೆ ಇಸ್ರೋದಲ್ಲಿ ಕೆಲಸ ಮಾಡಲು ಪ್ರಾರಂಭಿಸಿದ್ದೇನೆ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:12 pm, Mon, 4 March 24

Follow Us
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!