AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆದಿತ್ಯ-L1 ಮಿಷನ್‌ ಉಡಾವಣೆಗೆ ಮುನ್ನ ತಿರುಪತಿಗೆ ಭೇಟಿ ನೀಡಿದ ಇಸ್ರೋ ವಿಜ್ಞಾನಿಗಳ ತಂಡ

Aditya-L1 launch Mission: ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ಶುಕ್ರವಾರ ಆದಿತ್ಯ ಎಲ್1 ಮಿಷನ್ ಉಡಾವಣೆಗೂ ಮುನ್ನ ತಿರುಪತಿ ಬಾಲಾಜಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಸೋಮನಾಥ್, ಇಸ್ರೋದ ಮುಂಬರುವ ಮಿಷನ್ ಬಗ್ಗೆ ಮಾಹಿತಿ ನೀಡಿದ್ದು, ಮಿಷನ್ ಚಂದ್ರಯಾನ 3 ರ ವೈಜ್ಞಾನಿಕ ಪ್ರಯೋಗಗಳ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು.

ಆದಿತ್ಯ-L1 ಮಿಷನ್‌ ಉಡಾವಣೆಗೆ ಮುನ್ನ ತಿರುಪತಿಗೆ ಭೇಟಿ ನೀಡಿದ ಇಸ್ರೋ ವಿಜ್ಞಾನಿಗಳ ತಂಡ
ತಿರುಪತಿಯಲ್ಲಿ ಪೂಜೆ ಸಲ್ಲಿಸಿದ ಇಸ್ರೋ ಮುಖ್ಯಸ್ಥ
ರಶ್ಮಿ ಕಲ್ಲಕಟ್ಟ
|

Updated on:Sep 01, 2023 | 4:25 PM

Share

ದೆಹಲಿ ಸೆಪ್ಟೆಂಬರ್ 01: ಪಿಎಸ್‌ಎಲ್‌ವಿಯಲ್ಲಿ ಭಾರತದ ಚೊಚ್ಚಲ ಸೌರ ಮಿಷನ್ ಆದಿತ್ಯ ಎಲ್1 ಉಡಾವಣೆಗೆ (Aditya-L1 Mission ) ಕ್ಷಣಗಣನೆ ಶುಕ್ರವಾರ ಆರಂಭವಾಗಿದೆ ಎಂದು ಇಸ್ರೋ (ISRO) ತಿಳಿಸಿದೆ. ಈ ಬಾಹ್ಯಾಕಾಶ ನಿಲ್ದಾಣದಿಂದ ಶನಿವಾರ ಬೆಳಿಗ್ಗೆ 11.50 ಕ್ಕೆ ಸೂರ್ಯನ ಮಿಷನ್ ಉಡಾವಣೆಗೊಳ್ಳಲು ಸಿದ್ಧವಾಗಿದೆ ಭಾರತದ ಯಶಸ್ವಿ ಚಂದ್ರಯಾನ -3 (Chandrayaan-3) ರ ಬೆನ್ನಲ್ಲೇ ಭಾರತ ಸೌರಯಾನ ನಡೆಯಲಿದೆ.

“PSLV-C57/Aditya-L1 ಮಿಷನ್: ಸೆಪ್ಟೆಂಬರ್ 2, 2023 ರಂದು 11:50 Hrs. IST ಕ್ಕೆ ಉಡಾವಣೆಗೆ ಕೌಂಟ್ ಡೌನ್ ಪ್ರಾರಂಭವಾಗಿದೆ ಎಂದು ಇಸ್ರೋ ಟ್ವೀಟ್ ಮಾಡಿದೆ. 23 ಗಂಟೆಗಳ 40 ನಿಮಿಷಗಳ ಕೌಂಟ್‌ಡೌನ್ ಮಧ್ಯಾಹ್ನ 12:10 ಕ್ಕೆ ಪ್ರಾರಂಭವಾಯಿತು ಎಂದು ಅದು ಹೇಳಿದೆ.

ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ಶುಕ್ರವಾರ ಆದಿತ್ಯ ಎಲ್1 ಮಿಷನ್ ಉಡಾವಣೆಗೂ ಮುನ್ನ ತಿರುಪತಿ ಬಾಲಾಜಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಸೋಮನಾಥ್, ಇಸ್ರೋದ ಮುಂಬರುವ ಮಿಷನ್ ಬಗ್ಗೆ ಮಾಹಿತಿ ನೀಡಿದ್ದು, ಮಿಷನ್ ಚಂದ್ರಯಾನ 3 ರ ವೈಜ್ಞಾನಿಕ ಪ್ರಯೋಗಗಳ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು.

ಈ ಕಾರ್ಯಾಚರಣೆಯು ನಿಖರವಾದ ತ್ರಿಜ್ಯವನ್ನು ತಲುಪಲು 125 ದಿನಗಳನ್ನು ತೆಗೆದುಕೊಳ್ಳುತ್ತದೆ ಎಂದು ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಈ ಹಿಂದೆ ಹೇಳಿದ್ದರು. ಆದಿತ್ಯ-L1 ಅನ್ನು ಸೌರ ಕರೋನದ ದೂರದಿಂದಲೇ ಅವಲೋಕನಗಳನ್ನು ಒದಗಿಸಲು ಮತ್ತು ಭೂಮಿಯಿಂದ ಸುಮಾರು 1.5 ಮಿಲಿಯನ್ ಕಿಲೋಮೀಟರ್ ದೂರದಲ್ಲಿರುವ L1 (ಸೂರ್ಯ-ಭೂಮಿಯ ಲಗ್ರಾಂಜಿಯನ್ ಪಾಯಿಂಟ್) ನಲ್ಲಿ ಸೌರ ಮಾರುತದ ವೀಕ್ಷಣೆಗಳನ್ನು ಒದಗಿಸಲು ವಿನ್ಯಾಸಗೊಳಿಸಲಾಗಿದೆ. ಬೆಂಗಳೂರಿನ ಪ್ರಧಾನ ಕಚೇರಿಯ ಬಾಹ್ಯಾಕಾಶ ಸಂಸ್ಥೆಯಿಂದ ಉಡಾವಣೆಗೊಳ್ಳಲಿರುವ ಸೂರ್ಯನ ವೀಕ್ಷಣೆಗಾಗಿ ಮೀಸಲಾದ ಮೊದಲ ಭಾರತೀಯ ಬಾಹ್ಯಾಕಾಶ ಕಾರ್ಯಾಚರಣೆಯಾಗಿದೆ.

ಇಸ್ರೋ ವಿಜ್ಞಾನಿಗಳು ಪ್ರಮುಖ ಕಾರ್ಯಾಚರಣೆಗಳ ಮೊದಲು ತಿರುಪತಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸುವುದು ವಾಡಿಕೆ. ಆದಿತ್ಯ L1  ರಿಹರ್ಸಲ್ ಮತ್ತು ವಾಹನದ ಆಂತರಿಕ ತಪಾಸಣೆಯನ್ನು ಪ್ರಾರಂಭಿಸಿ, ಸೆಪ್ಟೆಂಬರ್ 2 ರಂದು ಭಾರತದ ಮೊದಲ ಸೌರ ಮಿಷನ್ ಉಡಾವಣೆಗೆ ಸಜ್ಜಾಗುತ್ತಿದೆ ಎಂದು ಇಸ್ರೋ ಹೇಳಿತ್ತು.

ಇದನ್ನೂ ಓದಿ:  ಆದಿತ್ಯ L1 ಮಿಷನ್‌ನಿಂದ ನಿಮಗೇನು ಲಾಭ? ಜನರ ದೈನಂದಿನ ಚಟುವಟಿಕೆಗಳ ಮೇಲೆ ಇದರ ಪ್ರಭಾವ

ಜುಲೈನಲ್ಲಿ ಚಂದ್ರಯಾನ-3 ಉಡಾವಣೆಗೂ ಮುನ್ನ ಇಸ್ರೋ ತಂಡ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿತ್ತು. ಚಂದ್ರನ ಮಿಷನ್ ಆಗಸ್ಟ್ 23 ರಂದು ಚಂದ್ರನ ಮೇಲ್ಮೈಯಲ್ಲಿ ಯಶಸ್ವಿಯಾಗಿ ಇಳಿಯುವ ಮೂಲಕ ಇತಿಹಾಸವನ್ನು ಬರೆದಿದೆ. ಈ ಮೂಲಕ ಭಾರತ ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡಿಂಗ್ ಮಾಡಿದ ಏಕೈಕ ದೇಶವಾಯಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:23 pm, Fri, 1 September 23

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?