AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆದಿತ್ಯ-L1 ಮಿಷನ್‌ ಉಡಾವಣೆಗೆ ಮುನ್ನ ತಿರುಪತಿಗೆ ಭೇಟಿ ನೀಡಿದ ಇಸ್ರೋ ವಿಜ್ಞಾನಿಗಳ ತಂಡ

Aditya-L1 launch Mission: ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ಶುಕ್ರವಾರ ಆದಿತ್ಯ ಎಲ್1 ಮಿಷನ್ ಉಡಾವಣೆಗೂ ಮುನ್ನ ತಿರುಪತಿ ಬಾಲಾಜಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಸೋಮನಾಥ್, ಇಸ್ರೋದ ಮುಂಬರುವ ಮಿಷನ್ ಬಗ್ಗೆ ಮಾಹಿತಿ ನೀಡಿದ್ದು, ಮಿಷನ್ ಚಂದ್ರಯಾನ 3 ರ ವೈಜ್ಞಾನಿಕ ಪ್ರಯೋಗಗಳ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು.

ಆದಿತ್ಯ-L1 ಮಿಷನ್‌ ಉಡಾವಣೆಗೆ ಮುನ್ನ ತಿರುಪತಿಗೆ ಭೇಟಿ ನೀಡಿದ ಇಸ್ರೋ ವಿಜ್ಞಾನಿಗಳ ತಂಡ
ತಿರುಪತಿಯಲ್ಲಿ ಪೂಜೆ ಸಲ್ಲಿಸಿದ ಇಸ್ರೋ ಮುಖ್ಯಸ್ಥ
ರಶ್ಮಿ ಕಲ್ಲಕಟ್ಟ
|

Updated on:Sep 01, 2023 | 4:25 PM

Share

ದೆಹಲಿ ಸೆಪ್ಟೆಂಬರ್ 01: ಪಿಎಸ್‌ಎಲ್‌ವಿಯಲ್ಲಿ ಭಾರತದ ಚೊಚ್ಚಲ ಸೌರ ಮಿಷನ್ ಆದಿತ್ಯ ಎಲ್1 ಉಡಾವಣೆಗೆ (Aditya-L1 Mission ) ಕ್ಷಣಗಣನೆ ಶುಕ್ರವಾರ ಆರಂಭವಾಗಿದೆ ಎಂದು ಇಸ್ರೋ (ISRO) ತಿಳಿಸಿದೆ. ಈ ಬಾಹ್ಯಾಕಾಶ ನಿಲ್ದಾಣದಿಂದ ಶನಿವಾರ ಬೆಳಿಗ್ಗೆ 11.50 ಕ್ಕೆ ಸೂರ್ಯನ ಮಿಷನ್ ಉಡಾವಣೆಗೊಳ್ಳಲು ಸಿದ್ಧವಾಗಿದೆ ಭಾರತದ ಯಶಸ್ವಿ ಚಂದ್ರಯಾನ -3 (Chandrayaan-3) ರ ಬೆನ್ನಲ್ಲೇ ಭಾರತ ಸೌರಯಾನ ನಡೆಯಲಿದೆ.

“PSLV-C57/Aditya-L1 ಮಿಷನ್: ಸೆಪ್ಟೆಂಬರ್ 2, 2023 ರಂದು 11:50 Hrs. IST ಕ್ಕೆ ಉಡಾವಣೆಗೆ ಕೌಂಟ್ ಡೌನ್ ಪ್ರಾರಂಭವಾಗಿದೆ ಎಂದು ಇಸ್ರೋ ಟ್ವೀಟ್ ಮಾಡಿದೆ. 23 ಗಂಟೆಗಳ 40 ನಿಮಿಷಗಳ ಕೌಂಟ್‌ಡೌನ್ ಮಧ್ಯಾಹ್ನ 12:10 ಕ್ಕೆ ಪ್ರಾರಂಭವಾಯಿತು ಎಂದು ಅದು ಹೇಳಿದೆ.

ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ಶುಕ್ರವಾರ ಆದಿತ್ಯ ಎಲ್1 ಮಿಷನ್ ಉಡಾವಣೆಗೂ ಮುನ್ನ ತಿರುಪತಿ ಬಾಲಾಜಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಸೋಮನಾಥ್, ಇಸ್ರೋದ ಮುಂಬರುವ ಮಿಷನ್ ಬಗ್ಗೆ ಮಾಹಿತಿ ನೀಡಿದ್ದು, ಮಿಷನ್ ಚಂದ್ರಯಾನ 3 ರ ವೈಜ್ಞಾನಿಕ ಪ್ರಯೋಗಗಳ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು.

ಈ ಕಾರ್ಯಾಚರಣೆಯು ನಿಖರವಾದ ತ್ರಿಜ್ಯವನ್ನು ತಲುಪಲು 125 ದಿನಗಳನ್ನು ತೆಗೆದುಕೊಳ್ಳುತ್ತದೆ ಎಂದು ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಈ ಹಿಂದೆ ಹೇಳಿದ್ದರು. ಆದಿತ್ಯ-L1 ಅನ್ನು ಸೌರ ಕರೋನದ ದೂರದಿಂದಲೇ ಅವಲೋಕನಗಳನ್ನು ಒದಗಿಸಲು ಮತ್ತು ಭೂಮಿಯಿಂದ ಸುಮಾರು 1.5 ಮಿಲಿಯನ್ ಕಿಲೋಮೀಟರ್ ದೂರದಲ್ಲಿರುವ L1 (ಸೂರ್ಯ-ಭೂಮಿಯ ಲಗ್ರಾಂಜಿಯನ್ ಪಾಯಿಂಟ್) ನಲ್ಲಿ ಸೌರ ಮಾರುತದ ವೀಕ್ಷಣೆಗಳನ್ನು ಒದಗಿಸಲು ವಿನ್ಯಾಸಗೊಳಿಸಲಾಗಿದೆ. ಬೆಂಗಳೂರಿನ ಪ್ರಧಾನ ಕಚೇರಿಯ ಬಾಹ್ಯಾಕಾಶ ಸಂಸ್ಥೆಯಿಂದ ಉಡಾವಣೆಗೊಳ್ಳಲಿರುವ ಸೂರ್ಯನ ವೀಕ್ಷಣೆಗಾಗಿ ಮೀಸಲಾದ ಮೊದಲ ಭಾರತೀಯ ಬಾಹ್ಯಾಕಾಶ ಕಾರ್ಯಾಚರಣೆಯಾಗಿದೆ.

ಇಸ್ರೋ ವಿಜ್ಞಾನಿಗಳು ಪ್ರಮುಖ ಕಾರ್ಯಾಚರಣೆಗಳ ಮೊದಲು ತಿರುಪತಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸುವುದು ವಾಡಿಕೆ. ಆದಿತ್ಯ L1  ರಿಹರ್ಸಲ್ ಮತ್ತು ವಾಹನದ ಆಂತರಿಕ ತಪಾಸಣೆಯನ್ನು ಪ್ರಾರಂಭಿಸಿ, ಸೆಪ್ಟೆಂಬರ್ 2 ರಂದು ಭಾರತದ ಮೊದಲ ಸೌರ ಮಿಷನ್ ಉಡಾವಣೆಗೆ ಸಜ್ಜಾಗುತ್ತಿದೆ ಎಂದು ಇಸ್ರೋ ಹೇಳಿತ್ತು.

ಇದನ್ನೂ ಓದಿ:  ಆದಿತ್ಯ L1 ಮಿಷನ್‌ನಿಂದ ನಿಮಗೇನು ಲಾಭ? ಜನರ ದೈನಂದಿನ ಚಟುವಟಿಕೆಗಳ ಮೇಲೆ ಇದರ ಪ್ರಭಾವ

ಜುಲೈನಲ್ಲಿ ಚಂದ್ರಯಾನ-3 ಉಡಾವಣೆಗೂ ಮುನ್ನ ಇಸ್ರೋ ತಂಡ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿತ್ತು. ಚಂದ್ರನ ಮಿಷನ್ ಆಗಸ್ಟ್ 23 ರಂದು ಚಂದ್ರನ ಮೇಲ್ಮೈಯಲ್ಲಿ ಯಶಸ್ವಿಯಾಗಿ ಇಳಿಯುವ ಮೂಲಕ ಇತಿಹಾಸವನ್ನು ಬರೆದಿದೆ. ಈ ಮೂಲಕ ಭಾರತ ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡಿಂಗ್ ಮಾಡಿದ ಏಕೈಕ ದೇಶವಾಯಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:23 pm, Fri, 1 September 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ