ಆದಿತ್ಯ-L1 ಮಿಷನ್‌ ಉಡಾವಣೆಗೆ ಮುನ್ನ ತಿರುಪತಿಗೆ ಭೇಟಿ ನೀಡಿದ ಇಸ್ರೋ ವಿಜ್ಞಾನಿಗಳ ತಂಡ

Aditya-L1 launch Mission: ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ಶುಕ್ರವಾರ ಆದಿತ್ಯ ಎಲ್1 ಮಿಷನ್ ಉಡಾವಣೆಗೂ ಮುನ್ನ ತಿರುಪತಿ ಬಾಲಾಜಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಸೋಮನಾಥ್, ಇಸ್ರೋದ ಮುಂಬರುವ ಮಿಷನ್ ಬಗ್ಗೆ ಮಾಹಿತಿ ನೀಡಿದ್ದು, ಮಿಷನ್ ಚಂದ್ರಯಾನ 3 ರ ವೈಜ್ಞಾನಿಕ ಪ್ರಯೋಗಗಳ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು.

ಆದಿತ್ಯ-L1 ಮಿಷನ್‌ ಉಡಾವಣೆಗೆ ಮುನ್ನ ತಿರುಪತಿಗೆ ಭೇಟಿ ನೀಡಿದ ಇಸ್ರೋ ವಿಜ್ಞಾನಿಗಳ ತಂಡ
ತಿರುಪತಿಯಲ್ಲಿ ಪೂಜೆ ಸಲ್ಲಿಸಿದ ಇಸ್ರೋ ಮುಖ್ಯಸ್ಥ
ರಶ್ಮಿ ಕಲ್ಲಕಟ್ಟ

Updated on: Sep 01, 2023 | 4:25 PM

ದೆಹಲಿ ಸೆಪ್ಟೆಂಬರ್ 01: ಪಿಎಸ್‌ಎಲ್‌ವಿಯಲ್ಲಿ ಭಾರತದ ಚೊಚ್ಚಲ ಸೌರ ಮಿಷನ್ ಆದಿತ್ಯ ಎಲ್1 ಉಡಾವಣೆಗೆ (Aditya-L1 Mission ) ಕ್ಷಣಗಣನೆ ಶುಕ್ರವಾರ ಆರಂಭವಾಗಿದೆ ಎಂದು ಇಸ್ರೋ (ISRO) ತಿಳಿಸಿದೆ. ಈ ಬಾಹ್ಯಾಕಾಶ ನಿಲ್ದಾಣದಿಂದ ಶನಿವಾರ ಬೆಳಿಗ್ಗೆ 11.50 ಕ್ಕೆ ಸೂರ್ಯನ ಮಿಷನ್ ಉಡಾವಣೆಗೊಳ್ಳಲು ಸಿದ್ಧವಾಗಿದೆ ಭಾರತದ ಯಶಸ್ವಿ ಚಂದ್ರಯಾನ -3 (Chandrayaan-3) ರ ಬೆನ್ನಲ್ಲೇ ಭಾರತ ಸೌರಯಾನ ನಡೆಯಲಿದೆ.

“PSLV-C57/Aditya-L1 ಮಿಷನ್: ಸೆಪ್ಟೆಂಬರ್ 2, 2023 ರಂದು 11:50 Hrs. IST ಕ್ಕೆ ಉಡಾವಣೆಗೆ ಕೌಂಟ್ ಡೌನ್ ಪ್ರಾರಂಭವಾಗಿದೆ ಎಂದು ಇಸ್ರೋ ಟ್ವೀಟ್ ಮಾಡಿದೆ. 23 ಗಂಟೆಗಳ 40 ನಿಮಿಷಗಳ ಕೌಂಟ್‌ಡೌನ್ ಮಧ್ಯಾಹ್ನ 12:10 ಕ್ಕೆ ಪ್ರಾರಂಭವಾಯಿತು ಎಂದು ಅದು ಹೇಳಿದೆ.


ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ಶುಕ್ರವಾರ ಆದಿತ್ಯ ಎಲ್1 ಮಿಷನ್ ಉಡಾವಣೆಗೂ ಮುನ್ನ ತಿರುಪತಿ ಬಾಲಾಜಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಸೋಮನಾಥ್, ಇಸ್ರೋದ ಮುಂಬರುವ ಮಿಷನ್ ಬಗ್ಗೆ ಮಾಹಿತಿ ನೀಡಿದ್ದು, ಮಿಷನ್ ಚಂದ್ರಯಾನ 3 ರ ವೈಜ್ಞಾನಿಕ ಪ್ರಯೋಗಗಳ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು.


ಈ ಕಾರ್ಯಾಚರಣೆಯು ನಿಖರವಾದ ತ್ರಿಜ್ಯವನ್ನು ತಲುಪಲು 125 ದಿನಗಳನ್ನು ತೆಗೆದುಕೊಳ್ಳುತ್ತದೆ ಎಂದು ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಈ ಹಿಂದೆ ಹೇಳಿದ್ದರು. ಆದಿತ್ಯ-L1 ಅನ್ನು ಸೌರ ಕರೋನದ ದೂರದಿಂದಲೇ ಅವಲೋಕನಗಳನ್ನು ಒದಗಿಸಲು ಮತ್ತು ಭೂಮಿಯಿಂದ ಸುಮಾರು 1.5 ಮಿಲಿಯನ್ ಕಿಲೋಮೀಟರ್ ದೂರದಲ್ಲಿರುವ L1 (ಸೂರ್ಯ-ಭೂಮಿಯ ಲಗ್ರಾಂಜಿಯನ್ ಪಾಯಿಂಟ್) ನಲ್ಲಿ ಸೌರ ಮಾರುತದ ವೀಕ್ಷಣೆಗಳನ್ನು ಒದಗಿಸಲು ವಿನ್ಯಾಸಗೊಳಿಸಲಾಗಿದೆ. ಬೆಂಗಳೂರಿನ ಪ್ರಧಾನ ಕಚೇರಿಯ ಬಾಹ್ಯಾಕಾಶ ಸಂಸ್ಥೆಯಿಂದ ಉಡಾವಣೆಗೊಳ್ಳಲಿರುವ ಸೂರ್ಯನ ವೀಕ್ಷಣೆಗಾಗಿ ಮೀಸಲಾದ ಮೊದಲ ಭಾರತೀಯ ಬಾಹ್ಯಾಕಾಶ ಕಾರ್ಯಾಚರಣೆಯಾಗಿದೆ.

ಇಸ್ರೋ ವಿಜ್ಞಾನಿಗಳು ಪ್ರಮುಖ ಕಾರ್ಯಾಚರಣೆಗಳ ಮೊದಲು ತಿರುಪತಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸುವುದು ವಾಡಿಕೆ. ಆದಿತ್ಯ L1  ರಿಹರ್ಸಲ್ ಮತ್ತು ವಾಹನದ ಆಂತರಿಕ ತಪಾಸಣೆಯನ್ನು ಪ್ರಾರಂಭಿಸಿ, ಸೆಪ್ಟೆಂಬರ್ 2 ರಂದು ಭಾರತದ ಮೊದಲ ಸೌರ ಮಿಷನ್ ಉಡಾವಣೆಗೆ ಸಜ್ಜಾಗುತ್ತಿದೆ ಎಂದು ಇಸ್ರೋ ಹೇಳಿತ್ತು.

ಇದನ್ನೂ ಓದಿ:  ಆದಿತ್ಯ L1 ಮಿಷನ್‌ನಿಂದ ನಿಮಗೇನು ಲಾಭ? ಜನರ ದೈನಂದಿನ ಚಟುವಟಿಕೆಗಳ ಮೇಲೆ ಇದರ ಪ್ರಭಾವ

ಜುಲೈನಲ್ಲಿ ಚಂದ್ರಯಾನ-3 ಉಡಾವಣೆಗೂ ಮುನ್ನ ಇಸ್ರೋ ತಂಡ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿತ್ತು. ಚಂದ್ರನ ಮಿಷನ್ ಆಗಸ್ಟ್ 23 ರಂದು ಚಂದ್ರನ ಮೇಲ್ಮೈಯಲ್ಲಿ ಯಶಸ್ವಿಯಾಗಿ ಇಳಿಯುವ ಮೂಲಕ ಇತಿಹಾಸವನ್ನು ಬರೆದಿದೆ. ಈ ಮೂಲಕ ಭಾರತ ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡಿಂಗ್ ಮಾಡಿದ ಏಕೈಕ ದೇಶವಾಯಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:23 pm, Fri, 1 September 23

Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Follow Us