AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gaganyaan Mission Test Flight: ಮಾನವಸಹಿತ ಗಗನಯಾನ​ದ ಮೊದಲ ಹಾರಾಟ ಪರೀಕ್ಷೆ ತಾತ್ಕಾಲಿಕ ಸ್ಥಗಿತ

ಇಸ್ರೋ ಮಹಾತ್ವಾಕಾಂಕ್ಷೆಯ ಗಗನಯಾನ ನೌಕೆಯ ಸುರಕ್ಷತಾ ಪ್ರಯೋಗ ಪರೀಕ್ಷಾ ವಾಹಕದ ಉಡಾವಣೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಈ ಪ್ರಯೋಗವು ನೌಕೆಯ ಸುರಕತೆ ಹಾಗೂ ತುರ್ತು ಸಂದರ್ಭಗಳಲ್ಲಿ ಗಗನ ಯಾತ್ರಿಕರು ಸುರಕ್ಷಿತವಾಗಿ ಲ್ಯಾಂಡಿಂಗ್ ಆಗುವ ಕುರಿತು ಇಸ್ರೋ ಕೈಗೊಂಡಿದ್ದ ಪ್ರಯೋಗ. ಸದ್ಯ ಕೆಲವು ಸಮಸ್ಯೆಗಳು ಎದುರಾದ ಕಾರಣ ಪ್ರಯೋಗವನ್ನು ನಿಲ್ಲಿಸಲಾಗಿದೆ.

Gaganyaan Mission Test Flight: ಮಾನವಸಹಿತ ಗಗನಯಾನ​ದ ಮೊದಲ ಹಾರಾಟ ಪರೀಕ್ಷೆ ತಾತ್ಕಾಲಿಕ ಸ್ಥಗಿತ
ಗಗನಯಾನ
ಆಯೇಷಾ ಬಾನು
|

Updated on:Oct 21, 2023 | 9:56 AM

Share

ನಮ್ಮ ಹೆಮ್ಮೆಯ ಇಸ್ರೋ (ISRO) ಅ.21ರ ಶನಿವಾರ ಬೆಳಗ್ಗೆ 8.45ಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್​ ಧವನ್​​ ಬಾಹ್ಯಾಕಾಶ ಕೇಂದ್ರದಿಂದ ಗಗನಯಾನ ಯೋಜನೆಯ ಪರೀಕ್ಷಾ ವಾಹಕದ ಉಡಾವಣೆಯನ್ನು ಯಶಸ್ವಿಯಾಗಿ ನೆರವೇರಿಸಬೇಕಿತ್ತು (Gaganyaan Mission Test Flight). ಆದರೆ ತಾಂತ್ರಿಕ ಸಮಸ್ಯೆಯಿಂದ ಗಗನಯಾನ ಪರೀಕ್ಷಾ ಉಡಾವಣೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಆದಷ್ಟು ಬೇಗ ತಾಂತ್ರಿಕ ಸಮಸ್ಯೆಯನ್ನು ಪರಿಶೀಲಿಸಿ ಮತ್ತೊಮ್ಮೆ ಗಗನಯಾನ ಯೋಜನೆಯ ಪರೀಕ್ಷಾ ವಾಹಕದ ಉಡಾವಣೆಯನ್ನು ಕೈಗೊಳ್ಳುವುದಾಗಿ ಇಸ್ರೋ ಅಧ್ಯಕ್ಷ ಸ್ವಾಮಿನಾಥನ್ ತಿಳಿಸಿದ್ದಾರೆ.

ಇನ್ನು ಉಡಾವಣೆ ಸ್ಥಗಿತಕ್ಕೆ ಕಾರಣವೇನು ಎಂಬುದನ್ನು ಪತ್ತೆ ಮಾಡಿ ದೋಷವನ್ನು ಸರಿಪಡಿಸಲಾಗಿದ್ದು ಇಂದು ಬೆಳಗ್ಗೆ 10 ಗಂಟೆಗೆ ಗಗನಯಾನ ಯೋಜನೆಯ ಪರೀಕ್ಷಾ ವಾಹಕದ ಉಡಾವಣೆಯನ್ನು ಶೆಡ್ಯೂಲ್ ಮಾಡಲಾಗಿದೆ ಎಂದು ಇಸ್ರೋ ಟ್ವೀಟ್ ಮೂಲಕ ತಿಳಿಸಿದೆ.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಾಗಿರುವ ಇಸ್ರೋ ಇಂದು ಗಗನಯಾನ ನೌಕೆಯ ಸುರಕ್ಷತಾ ಪ್ರಯೋಗ ನಡೆಸಲು ತಯಾರಿ ನಡೆಸಿತ್ತು. ಬೆಳಗ್ಗೆ 8 ಗಂಟೆಗೆ ಪರೀಕ್ಷಾ ವಾಹಕದ ಉಡಾವಣೆಯಾಗಬೇಕಿತ್ತು. ಆದರೆ ಕೆಲವು ಸಮಸ್ಯೆಗಳಿಂದಾಗಿ ಉಡಾವಣೆ ಸಮಯದಲ್ಲಿ ವ್ಯತ್ಯಾಸವಾಗಿತ್ತು. ಕೊನೆಗೆ 8.45ಕ್ಕೆ ಗಗನಯಾನ ನೌಕೆಯ ಸುರಕ್ಷತಾ ಪ್ರಯೋಗ ನಡೆಸಲು ಇಸ್ರೋ ಸಮಯವನ್ನು ಶೆಡ್ಯೂಲ್ ಮಾಡಿತ್ತು. ಆದ್ರೆ ಉಡಾವಣೆಗೆ 5 ಸೆಕೆಂಡ್​ಗೆ​​ ಮುನ್ನಾ ನೌಕೆ ಉಡಾವಣೆ ಸ್ಥಗಿತಗೊಂಡಿದೆ. ಹವಾಮಾನ ವೈಪರೀತ್ಯ, ತಾಂತ್ರಿಕ ಕಾರಣದಿಂದ ಮಾನವಸಹಿತ ಗಗನಯಾನ ಯೋಜನೆಯ ನೌಕೆ ಪ್ರಯೋಗ ಸ್ಥಗಿತಗೊಂಡಿದೆ ಎಂದು ಇಸ್ರೋ ಮುಖ್ಯಸ್ಥ ಸೋಮನಾಥ್ ಮಾಹಿತಿ ನೀಡಿದ್ದಾರೆ.

ಪ್ರಯೋಗ ಯಶಸ್ವಿಯಾಗಿದ್ದರೆ ಈ ಪ್ರಯೋಗದಿಂದ ನೌಕೆಯ ಸುರಕತೆ ಹಾಗೂ ತುರ್ತು ಸಂದರ್ಭಗಳಲ್ಲಿ ಗಗನ ಯಾತ್ರಿಕರು ಸುರಕ್ಷಿತವಾಗಿ ಲ್ಯಾಂಡಿಂಗ್ ಆಗುವ ಕುರಿತು ಇಸ್ರೋ ಅಧ್ಯಯನ ನಡೆಸಲು ಸಹಾಯವಾಗುತ್ತಿತ್ತು. ನೌಕೆಯನ್ನು ಭೂಮಿಯಿಂದ 17 ಕಿ.ಮೀ. ಎತ್ತರಕ್ಕೆ ಉಡಾವಣೆ ಮಾಡಿ, ಅಲ್ಲಿಂದ ಸಮುದ್ರಕ್ಕೆ ಬೀಳಿಸಲು ಇಸ್ರೋ ತಯಾರಿ ಮಾಡಿಕೊಂಡಿತ್ತು. ಆದರೆ ಈಗ ಈ ಯೋಜನೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.

ಇದನ್ನೂ ಓದಿ: ಗಗನಯಾನ ಯೋಜನೆಯೆಡೆಗೆ ಮೊದಲ ಹೆಜ್ಜೆ: ಮೊದಲ ಅಭಿವೃದ್ಧಿ ಪರೀಕ್ಷಾ ಯೋಜನೆ ಟಿವಿ-ಡಿ1ಗೆ ಭಾರತ ಸನ್ನದ್ಧ

ಗಗನಯಾನ ಪರೀಕ್ಷಾರ್ಥ ಹಾರಾಟ ಏಕೆ?

ಮುಂದಿನ ದಿನಗಳಲ್ಲಿ ಮಾನವ ಸಹಿತ ಗಗನಯಾನ ಕೈಗೊಂಡಾಗ ಯಾವುದೇ ಸಮಸ್ಯೆಗಳಾಗದಂತೆ ಸುರಕ್ಷಿತವಾಗಿ ಯೋಜನೆ ಯಶಸ್ವಿಯಾಗಲು ಈ ಪರಿಕ್ಷಾ ಹಾರಾಟ ನಡೆಸಲು ಇಸ್ರೋ ಮುಂದಾಗಿತ್ತು. ಈ ಮೂಲಕ ಮಾನವ ಸಹಿತ ಗಗನಯಾನದ ವೇಳೆ ಎದುರಾಗಬಹುದಾದ ವೈಫಲ್ಯಗಳನ್ನು ಅಧ್ಯಯನ ಮಾಡುವ ಸಲುವಾಗಿ ಇಸ್ರೊ ರಾಕೇಟ್ ಉಡ್ಡಯನ ಮಾಡಲು ತಯಾರಿ ನಡೆಸಿತ್ತು. ಚಂದ್ರಯಾನ–3 ಯೋಜನೆಯ ಸಂದರ್ಭದಲ್ಲೂ ಇಸ್ರೋ ಇಂಥದ್ದೊಂದು ಪರೀಕ್ಷಾರ್ಥ ಪ್ರಯೋಗವನ್ನು ನಡೆಸಿತ್ತು. ಅದು ಇಸ್ರೊಗೆ ಯಶಸ್ಸು ತಂದುಕೊಟ್ಟಿತ್ತು. ಇದರ ಫಲವಾಗಿ ವಿಕ್ರಂ ಲ್ಯಾಂಡರ್‌ ಸುರಕ್ಷಿತವಾಗಿ ಚಂದ್ರನ ದಕ್ಷಿಣ ಧ್ರುವದ ಸಮೀಪ ಇಳಿಯಲು ಸಾಧ್ಯವಾಗಿತ್ತು. ಹೀಗಾಗಿ ಗಗನಯಾನ ಯೋಜನೆಯಲ್ಲಿ ಗಗನಯಾತ್ರಿಗಳ ಸುರಕ್ಷತೆಗಾಗಿ ಈ ಪ್ರಯೋಗ ನಡೆಯಬೇಕಿತ್ತು. ಇದನ್ನು ಅಧ್ಯಯನ ಮಾಡಿ ಮುಂದೆ ಮಾನವ ಸಹಿತ ಗಗನಯಾನದ ವೇಳೆ ಉಂಟಾಗುವ ಸಮಸ್ಯೆಗಳ ಬಗ್ಗೆ ವಿಜ್ಞಾನಿಗಳು ಲೆಕ್ಕಾಚಾರ ಹಾಕುತ್ತಿದ್ದರು.

ದೇಶದ ಸುದ್ದಿಗಳಿಗಾಗಿ ಇದರ ಮೇಲೆ ಕ್ಲಿಕ್ ಮಾಡಿ

Published On - 8:56 am, Sat, 21 October 23

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ