AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಕ್ಷೆ ಸೇರಿತು CMS-01 ಉಪಗ್ರಹ: ಕೃಷಿ, ಅರಣ್ಯ ಮತ್ತು ವಿಪತ್ತು ನಿರ್ವಹಣೆ ಕ್ಷೇತ್ರಗಳಲ್ಲಿ ಸಂವಹನ ಸುಧಾರಿಸುವ ನಿರೀಕ್ಷೆ

ಅಂಡಮಾನ್ ನಿಕೋಬಾರ್, ಲಕ್ಷದ್ವೀಪಗಳನ್ನು ಒಳಗೊಂಡ ದೇಶದ ದೂರದ ಭೂಭಾಗಗಳಿಗೆ ಕೃಷಿ, ಅರಣ್ಯ ಮತ್ತು ವಿಪತ್ತು ನಿರ್ವಹಣೆ ಕ್ಷೇತ್ರಗಳಲ್ಲಿ ಸಂವಹನ ಸೇವೆ ಒದಗಿಸಲಿದೆ.

ಕಕ್ಷೆ ಸೇರಿತು CMS-01 ಉಪಗ್ರಹ: ಕೃಷಿ, ಅರಣ್ಯ ಮತ್ತು ವಿಪತ್ತು ನಿರ್ವಹಣೆ ಕ್ಷೇತ್ರಗಳಲ್ಲಿ ಸಂವಹನ ಸುಧಾರಿಸುವ ನಿರೀಕ್ಷೆ
CMS-01 ಉಪಗ್ರಹ ಹೊತ್ತ ರಾಕೆಟ್ ಶ್ರೀಹರಿಕೋಟಾದಿಂದ ನಭಕ್ಕೆ ಜಿಗಿದ ಕ್ಷಣ
guruganesh bhat
| Edited By: |

Updated on:Dec 17, 2020 | 6:27 PM

Share

ಶ್ರೀಹರಿಕೋಟಾ: ಭಾರತವು ಸಂವಹನ ಸುಧಾರಣೆಗೆ ಸಂಬಂಧಿಸಿದ ಉಪಗ್ರಹವೊಂದನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಸ್ರೋ CMS-01 ಉಪಗ್ರಹವನ್ನು ಇಂದು ಮಧ್ಯಾಹ್ನ ಯಶಸ್ವಿಯಾಗಿ ಉಡಾಯಿಸಿತು. ಕೊರೊನಾ ಪಿಡುಗಿನ ನಂತರ ಇಸ್ರೋ ಉಡಾಯಿಸಿದ ಎರಡನೇ ಉಪಗ್ರಹ ಇದು.

ಜಿಸ್ಯಾಟ್ ಮತ್ತು ಇನ್​ಸ್ಯಾಟ್​ ನಂತರ CMS ಉಪಗ್ರಹ ಸರಣಿಯ ಯೋಜನೆಯನ್ನು ಇಸ್ರೋ ಕೈಗೆತ್ತಿಕೊಂಡಿದೆ. ಅಂಡಮಾನ್ ನಿಕೋಬಾರ್, ಲಕ್ಷದ್ವೀಪಗಳನ್ನು ಒಳಗೊಂಡ ದೇಶದ ದೂರದ ಭೂಭಾಗಗಳಿಗೆ ಕೃಷಿ, ಅರಣ್ಯ ಮತ್ತು ವಿಪತ್ತು ನಿರ್ವಹಣೆ ಕ್ಷೇತ್ರಗಳಲ್ಲಿ ಸಂವಹನ ಸೇವೆ ಒದಗಿಸಲಿದೆ. ಸಂವಹನ ಸುಧಾರಣೆಗೆ ಮೀಸಲಾದ 42ನೇ ಉಪಗ್ರವಾದ CMS-01, ಈ ಸರಣಿಯ ಮೊದಲ ಉಪಗ್ರಹವಾಗಿದೆ.

PSLV-C50 ರಾಕೆಟ್​ ಈ ಉಪಗ್ರಹವನ್ನು ಅಂತರಿಕ್ಷಕ್ಕೆ ಹೊತ್ತೊಯ್ದಿತು. 2011ರಲ್ಲಿ ಉಡಾವಣೆಗೊಂಡ GSAT-12 ಉಪಗ್ರಹದ ಕೆಲಸಗಳನ್ನು CMS-01 ಇನ್ನು ಮುಂದೆ ನಿರ್ವಹಿಸಲಿದೆ. ಇದು PSLV-C50 ರಾಕೆಟ್​ ಹೊತ್ತೊಯ್ದ 52ನೇ ಉಪಗ್ರಹ. ದೇಶದ ಸಂವಹನ ವ್ಯವಸ್ಥೆಯಲ್ಲಿ ಬದಲಾವಣೆಯ ಗಾಳಿ ಬೀಸುವ ನಿರೀಕ್ಷೆಯನ್ನು ಇಸ್ರೋ ವ್ಯಕ್ತಪಡಿಸಿದೆ.

PSLV-ಸಿ-49 ರಾಕೆಟ್​ ಮೂಲಕ 10 ಉಪಗ್ರಹಗಳನ್ನು ಕಕ್ಷೆಗೆ‌ ಸೇರಿಸಿದ ISRO

Published On - 6:25 pm, Thu, 17 December 20

Follow Us
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು