Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಕ್ಷೆ ಸೇರಿತು CMS-01 ಉಪಗ್ರಹ: ಕೃಷಿ, ಅರಣ್ಯ ಮತ್ತು ವಿಪತ್ತು ನಿರ್ವಹಣೆ ಕ್ಷೇತ್ರಗಳಲ್ಲಿ ಸಂವಹನ ಸುಧಾರಿಸುವ ನಿರೀಕ್ಷೆ

ಅಂಡಮಾನ್ ನಿಕೋಬಾರ್, ಲಕ್ಷದ್ವೀಪಗಳನ್ನು ಒಳಗೊಂಡ ದೇಶದ ದೂರದ ಭೂಭಾಗಗಳಿಗೆ ಕೃಷಿ, ಅರಣ್ಯ ಮತ್ತು ವಿಪತ್ತು ನಿರ್ವಹಣೆ ಕ್ಷೇತ್ರಗಳಲ್ಲಿ ಸಂವಹನ ಸೇವೆ ಒದಗಿಸಲಿದೆ.

ಕಕ್ಷೆ ಸೇರಿತು CMS-01 ಉಪಗ್ರಹ: ಕೃಷಿ, ಅರಣ್ಯ ಮತ್ತು ವಿಪತ್ತು ನಿರ್ವಹಣೆ ಕ್ಷೇತ್ರಗಳಲ್ಲಿ ಸಂವಹನ ಸುಧಾರಿಸುವ ನಿರೀಕ್ಷೆ
CMS-01 ಉಪಗ್ರಹ ಹೊತ್ತ ರಾಕೆಟ್ ಶ್ರೀಹರಿಕೋಟಾದಿಂದ ನಭಕ್ಕೆ ಜಿಗಿದ ಕ್ಷಣ
Follow us
guruganesh bhat
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Dec 17, 2020 | 6:27 PM

ಶ್ರೀಹರಿಕೋಟಾ: ಭಾರತವು ಸಂವಹನ ಸುಧಾರಣೆಗೆ ಸಂಬಂಧಿಸಿದ ಉಪಗ್ರಹವೊಂದನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಸ್ರೋ CMS-01 ಉಪಗ್ರಹವನ್ನು ಇಂದು ಮಧ್ಯಾಹ್ನ ಯಶಸ್ವಿಯಾಗಿ ಉಡಾಯಿಸಿತು. ಕೊರೊನಾ ಪಿಡುಗಿನ ನಂತರ ಇಸ್ರೋ ಉಡಾಯಿಸಿದ ಎರಡನೇ ಉಪಗ್ರಹ ಇದು.

ಜಿಸ್ಯಾಟ್ ಮತ್ತು ಇನ್​ಸ್ಯಾಟ್​ ನಂತರ CMS ಉಪಗ್ರಹ ಸರಣಿಯ ಯೋಜನೆಯನ್ನು ಇಸ್ರೋ ಕೈಗೆತ್ತಿಕೊಂಡಿದೆ. ಅಂಡಮಾನ್ ನಿಕೋಬಾರ್, ಲಕ್ಷದ್ವೀಪಗಳನ್ನು ಒಳಗೊಂಡ ದೇಶದ ದೂರದ ಭೂಭಾಗಗಳಿಗೆ ಕೃಷಿ, ಅರಣ್ಯ ಮತ್ತು ವಿಪತ್ತು ನಿರ್ವಹಣೆ ಕ್ಷೇತ್ರಗಳಲ್ಲಿ ಸಂವಹನ ಸೇವೆ ಒದಗಿಸಲಿದೆ. ಸಂವಹನ ಸುಧಾರಣೆಗೆ ಮೀಸಲಾದ 42ನೇ ಉಪಗ್ರವಾದ CMS-01, ಈ ಸರಣಿಯ ಮೊದಲ ಉಪಗ್ರಹವಾಗಿದೆ.

PSLV-C50 ರಾಕೆಟ್​ ಈ ಉಪಗ್ರಹವನ್ನು ಅಂತರಿಕ್ಷಕ್ಕೆ ಹೊತ್ತೊಯ್ದಿತು. 2011ರಲ್ಲಿ ಉಡಾವಣೆಗೊಂಡ GSAT-12 ಉಪಗ್ರಹದ ಕೆಲಸಗಳನ್ನು CMS-01 ಇನ್ನು ಮುಂದೆ ನಿರ್ವಹಿಸಲಿದೆ. ಇದು PSLV-C50 ರಾಕೆಟ್​ ಹೊತ್ತೊಯ್ದ 52ನೇ ಉಪಗ್ರಹ. ದೇಶದ ಸಂವಹನ ವ್ಯವಸ್ಥೆಯಲ್ಲಿ ಬದಲಾವಣೆಯ ಗಾಳಿ ಬೀಸುವ ನಿರೀಕ್ಷೆಯನ್ನು ಇಸ್ರೋ ವ್ಯಕ್ತಪಡಿಸಿದೆ.

PSLV-ಸಿ-49 ರಾಕೆಟ್​ ಮೂಲಕ 10 ಉಪಗ್ರಹಗಳನ್ನು ಕಕ್ಷೆಗೆ‌ ಸೇರಿಸಿದ ISRO

Published On - 6:25 pm, Thu, 17 December 20

ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ