AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಕ್ಷೆ ಸೇರಿತು CMS-01 ಉಪಗ್ರಹ: ಕೃಷಿ, ಅರಣ್ಯ ಮತ್ತು ವಿಪತ್ತು ನಿರ್ವಹಣೆ ಕ್ಷೇತ್ರಗಳಲ್ಲಿ ಸಂವಹನ ಸುಧಾರಿಸುವ ನಿರೀಕ್ಷೆ

ಅಂಡಮಾನ್ ನಿಕೋಬಾರ್, ಲಕ್ಷದ್ವೀಪಗಳನ್ನು ಒಳಗೊಂಡ ದೇಶದ ದೂರದ ಭೂಭಾಗಗಳಿಗೆ ಕೃಷಿ, ಅರಣ್ಯ ಮತ್ತು ವಿಪತ್ತು ನಿರ್ವಹಣೆ ಕ್ಷೇತ್ರಗಳಲ್ಲಿ ಸಂವಹನ ಸೇವೆ ಒದಗಿಸಲಿದೆ.

ಕಕ್ಷೆ ಸೇರಿತು CMS-01 ಉಪಗ್ರಹ: ಕೃಷಿ, ಅರಣ್ಯ ಮತ್ತು ವಿಪತ್ತು ನಿರ್ವಹಣೆ ಕ್ಷೇತ್ರಗಳಲ್ಲಿ ಸಂವಹನ ಸುಧಾರಿಸುವ ನಿರೀಕ್ಷೆ
CMS-01 ಉಪಗ್ರಹ ಹೊತ್ತ ರಾಕೆಟ್ ಶ್ರೀಹರಿಕೋಟಾದಿಂದ ನಭಕ್ಕೆ ಜಿಗಿದ ಕ್ಷಣ
guruganesh bhat
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Dec 17, 2020 | 6:27 PM

Share

ಶ್ರೀಹರಿಕೋಟಾ: ಭಾರತವು ಸಂವಹನ ಸುಧಾರಣೆಗೆ ಸಂಬಂಧಿಸಿದ ಉಪಗ್ರಹವೊಂದನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಸ್ರೋ CMS-01 ಉಪಗ್ರಹವನ್ನು ಇಂದು ಮಧ್ಯಾಹ್ನ ಯಶಸ್ವಿಯಾಗಿ ಉಡಾಯಿಸಿತು. ಕೊರೊನಾ ಪಿಡುಗಿನ ನಂತರ ಇಸ್ರೋ ಉಡಾಯಿಸಿದ ಎರಡನೇ ಉಪಗ್ರಹ ಇದು.

ಜಿಸ್ಯಾಟ್ ಮತ್ತು ಇನ್​ಸ್ಯಾಟ್​ ನಂತರ CMS ಉಪಗ್ರಹ ಸರಣಿಯ ಯೋಜನೆಯನ್ನು ಇಸ್ರೋ ಕೈಗೆತ್ತಿಕೊಂಡಿದೆ. ಅಂಡಮಾನ್ ನಿಕೋಬಾರ್, ಲಕ್ಷದ್ವೀಪಗಳನ್ನು ಒಳಗೊಂಡ ದೇಶದ ದೂರದ ಭೂಭಾಗಗಳಿಗೆ ಕೃಷಿ, ಅರಣ್ಯ ಮತ್ತು ವಿಪತ್ತು ನಿರ್ವಹಣೆ ಕ್ಷೇತ್ರಗಳಲ್ಲಿ ಸಂವಹನ ಸೇವೆ ಒದಗಿಸಲಿದೆ. ಸಂವಹನ ಸುಧಾರಣೆಗೆ ಮೀಸಲಾದ 42ನೇ ಉಪಗ್ರವಾದ CMS-01, ಈ ಸರಣಿಯ ಮೊದಲ ಉಪಗ್ರಹವಾಗಿದೆ.

PSLV-C50 ರಾಕೆಟ್​ ಈ ಉಪಗ್ರಹವನ್ನು ಅಂತರಿಕ್ಷಕ್ಕೆ ಹೊತ್ತೊಯ್ದಿತು. 2011ರಲ್ಲಿ ಉಡಾವಣೆಗೊಂಡ GSAT-12 ಉಪಗ್ರಹದ ಕೆಲಸಗಳನ್ನು CMS-01 ಇನ್ನು ಮುಂದೆ ನಿರ್ವಹಿಸಲಿದೆ. ಇದು PSLV-C50 ರಾಕೆಟ್​ ಹೊತ್ತೊಯ್ದ 52ನೇ ಉಪಗ್ರಹ. ದೇಶದ ಸಂವಹನ ವ್ಯವಸ್ಥೆಯಲ್ಲಿ ಬದಲಾವಣೆಯ ಗಾಳಿ ಬೀಸುವ ನಿರೀಕ್ಷೆಯನ್ನು ಇಸ್ರೋ ವ್ಯಕ್ತಪಡಿಸಿದೆ.

PSLV-ಸಿ-49 ರಾಕೆಟ್​ ಮೂಲಕ 10 ಉಪಗ್ರಹಗಳನ್ನು ಕಕ್ಷೆಗೆ‌ ಸೇರಿಸಿದ ISRO

Published On - 6:25 pm, Thu, 17 December 20

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್