AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ISRO: ಇಸ್ರೋದಿಂದ ಸಿಂಗಾಪುರದ 7 ಉಪಗ್ರಹಗಳ ಉಡಾವಣೆ ಯಶಸ್ವಿ

ಸಿಂಗಾಪುರದ ಏಳು ಉಪಗ್ರಹಗಳನ್ನು ಇಸ್ರೋ ಪಿಎಸ್​ಎಲ್‌ವಿ- ಸಿ56 ರಾಕೆಟ್ ಮೂಲಕ ಇಂದು ಬೆಳಿಗ್ಗೆ 6.30ಕ್ಕೆ ಆಂದ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡಿದೆ.​

ISRO: ಇಸ್ರೋದಿಂದ ಸಿಂಗಾಪುರದ 7 ಉಪಗ್ರಹಗಳ ಉಡಾವಣೆ ಯಶಸ್ವಿ
ನಭಕ್ಕೆ ಹಾರಿದ 7 ಉಪಗ್ರಹಗಳು
ವಿವೇಕ ಬಿರಾದಾರ
|

Updated on:Jul 30, 2023 | 7:47 AM

Share

ಶ್ರೀಹರಿಕೋಟಾ ಜು.30: ಇತ್ತೀಚಿಗಷ್ಟೆ ಚಂದ್ರಯಾನ-3 (Chandrayaan-3) ನೌಕೆಯನ್ನು ಯಶಸ್ವಿಯಾಗಿ ಉಡಾವಣೆ ಮಾಡುವ ಮೂಲಕ ಭಾರತೀಯ ಬಾಹ್ಯಾಕಾಶ ಸಂಸ್ಥೆ (ISRO) ವಿಶೇಷ ಸಾಧನೆ ಮಾಡಿತ್ತು. ಇದೀಗ ಇಸ್ರೋ ಸಿಂಗಾಪುರದ ಏಳು ಉಪಗ್ರಹಗಳನ್ನು (Seven Singaporean Satellites) ಪಿಎಸ್​ಎಲ್‌ವಿ- ಸಿ56 ರಾಕೆಟ್ ಮೂಲಕ ಇಂದು (ಜು.30) ಬೆಳಿಗ್ಗೆ 6.30ಕ್ಕೆ ಆಂದ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡಿದೆ.

ನಭಕ್ಕೆ ಹಾರಿದ ಏಳು ಉಪಗ್ರಹಗಳಲ್ಲಿ ಇಸ್ರೇಲ್​​ ವಿಜ್ಞಾನಿಗಳು ಸಿದ್ಧಪಡಿಸಿರುವ ಡಿಎಸ್​​-ಸಿಂಥೆಟಿಕ್​ ಅಪೆರ್ಚರ್​ ಏರೋಸ್ಪೇಸ್​​ ಎಂಬ ಉಪಗ್ರಹ 360 ಕೇಜಿ ತೂಕವಿದ್ದು, ಇದು ಎಂತಹ ಹವಾಮಾನವಿದ್ದಾಗಲೂ ಚಿತ್ರಗಳನ್ನು ತೆಗೆಯುವ ಸಾಮರ್ಥ್ಯ ಹೊಂದಿದೆ. ಇದರೊಂದಿಗೆ ಸಿಂಗಾಪುರ ರಕ್ಷಣಾ ಇಲಾಖೆ ತಯಾರಿಸಿರುವ ಮೂರು ಉಪಗ್ರಹಗಳು ನಭಕ್ಕೆ ಹಾರಿವೆ. ಇದರಲ್ಲಿ ಸ್ವಯಂಚಾಲಿತ ಕಾರ್ ಚಾಲನೆಗೆ ಸಹಾಯ ಒದಗಿಸುವ ಉಪಗ್ರಹಗವಿದೆ.

ಇದನ್ನುಓದಿ: ISRO Satellite Launch: ಚಂದ್ರಯಾನ 3ರ ಬಳಿಕ ಇಸ್ರೋದಿಂದ ಮತ್ತೊಂದು ಸಾಧನೆ, ಒಂದೇ ಬಾರಿಗೆ 6 ಉಪಗ್ರಹಗಳ ಉಡಾವಣೆ

ಇನ್ನು ಇಸ್ರೋದ ನ್ಯೂಸ್ಪೇಸ್ ಇಂಡಿಯಾ ಯೋಜನೆಯಡಿ ಈ ಉಪಗ್ರಹಗಳ ಉಡಾವಣೆಯಾಗಿದ್ದು, ಈ ಯೋಜನೆಯಡಿ ಖಾಸಗಿಯವರಿಗೂ ಉಪಗ್ರಹ ಉಡಾವಣೆಗೆ ಅವಕಾಶ ನೀಡಲಾಗಿದೆ. ವೆಲೊಕ್ಸ್​​-ಎಮ್, ಆರ್ಕೇಡ್​​ ಅಟ್ಮಾಸ್ಫಿಯರಿಕ್​ ಕಪ್ಲಿಂಗ್​ ಆಂಡ್​ ಡೈನಾಮಿಕ್ಸ್​ ಎಕ್ಸಪ್ಲೋರರ್​ (ARCADE), ಸ್ಕೂಬ್​-2, ಗೆಲೇಸಿಯ-2, ಒಆರ್​ಬಿ12-ಸ್ಟ್ರೈಡರ್, ನೂಲಯನ್​ ಎಂಬ ಹೆಸರಿನ ಉಪಗ್ರಹಗಳನ್ನು ಪಿಎಸ್​ಎಲ್‌ವಿ- ಸಿ56 ರಾಕೆಟ್ ಹೊತ್ತೊಯ್ದಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:44 am, Sun, 30 July 23

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ