AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ISRO: ಇಸ್ರೋದಿಂದ ಸಿಂಗಾಪುರದ 7 ಉಪಗ್ರಹಗಳ ಉಡಾವಣೆ ಯಶಸ್ವಿ

ಸಿಂಗಾಪುರದ ಏಳು ಉಪಗ್ರಹಗಳನ್ನು ಇಸ್ರೋ ಪಿಎಸ್​ಎಲ್‌ವಿ- ಸಿ56 ರಾಕೆಟ್ ಮೂಲಕ ಇಂದು ಬೆಳಿಗ್ಗೆ 6.30ಕ್ಕೆ ಆಂದ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡಿದೆ.​

ISRO: ಇಸ್ರೋದಿಂದ ಸಿಂಗಾಪುರದ 7 ಉಪಗ್ರಹಗಳ ಉಡಾವಣೆ ಯಶಸ್ವಿ
ನಭಕ್ಕೆ ಹಾರಿದ 7 ಉಪಗ್ರಹಗಳು
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Jul 30, 2023 | 7:47 AM

Share

ಶ್ರೀಹರಿಕೋಟಾ ಜು.30: ಇತ್ತೀಚಿಗಷ್ಟೆ ಚಂದ್ರಯಾನ-3 (Chandrayaan-3) ನೌಕೆಯನ್ನು ಯಶಸ್ವಿಯಾಗಿ ಉಡಾವಣೆ ಮಾಡುವ ಮೂಲಕ ಭಾರತೀಯ ಬಾಹ್ಯಾಕಾಶ ಸಂಸ್ಥೆ (ISRO) ವಿಶೇಷ ಸಾಧನೆ ಮಾಡಿತ್ತು. ಇದೀಗ ಇಸ್ರೋ ಸಿಂಗಾಪುರದ ಏಳು ಉಪಗ್ರಹಗಳನ್ನು (Seven Singaporean Satellites) ಪಿಎಸ್​ಎಲ್‌ವಿ- ಸಿ56 ರಾಕೆಟ್ ಮೂಲಕ ಇಂದು (ಜು.30) ಬೆಳಿಗ್ಗೆ 6.30ಕ್ಕೆ ಆಂದ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡಿದೆ.

ನಭಕ್ಕೆ ಹಾರಿದ ಏಳು ಉಪಗ್ರಹಗಳಲ್ಲಿ ಇಸ್ರೇಲ್​​ ವಿಜ್ಞಾನಿಗಳು ಸಿದ್ಧಪಡಿಸಿರುವ ಡಿಎಸ್​​-ಸಿಂಥೆಟಿಕ್​ ಅಪೆರ್ಚರ್​ ಏರೋಸ್ಪೇಸ್​​ ಎಂಬ ಉಪಗ್ರಹ 360 ಕೇಜಿ ತೂಕವಿದ್ದು, ಇದು ಎಂತಹ ಹವಾಮಾನವಿದ್ದಾಗಲೂ ಚಿತ್ರಗಳನ್ನು ತೆಗೆಯುವ ಸಾಮರ್ಥ್ಯ ಹೊಂದಿದೆ. ಇದರೊಂದಿಗೆ ಸಿಂಗಾಪುರ ರಕ್ಷಣಾ ಇಲಾಖೆ ತಯಾರಿಸಿರುವ ಮೂರು ಉಪಗ್ರಹಗಳು ನಭಕ್ಕೆ ಹಾರಿವೆ. ಇದರಲ್ಲಿ ಸ್ವಯಂಚಾಲಿತ ಕಾರ್ ಚಾಲನೆಗೆ ಸಹಾಯ ಒದಗಿಸುವ ಉಪಗ್ರಹಗವಿದೆ.

ಇದನ್ನುಓದಿ: ISRO Satellite Launch: ಚಂದ್ರಯಾನ 3ರ ಬಳಿಕ ಇಸ್ರೋದಿಂದ ಮತ್ತೊಂದು ಸಾಧನೆ, ಒಂದೇ ಬಾರಿಗೆ 6 ಉಪಗ್ರಹಗಳ ಉಡಾವಣೆ

ಇನ್ನು ಇಸ್ರೋದ ನ್ಯೂಸ್ಪೇಸ್ ಇಂಡಿಯಾ ಯೋಜನೆಯಡಿ ಈ ಉಪಗ್ರಹಗಳ ಉಡಾವಣೆಯಾಗಿದ್ದು, ಈ ಯೋಜನೆಯಡಿ ಖಾಸಗಿಯವರಿಗೂ ಉಪಗ್ರಹ ಉಡಾವಣೆಗೆ ಅವಕಾಶ ನೀಡಲಾಗಿದೆ. ವೆಲೊಕ್ಸ್​​-ಎಮ್, ಆರ್ಕೇಡ್​​ ಅಟ್ಮಾಸ್ಫಿಯರಿಕ್​ ಕಪ್ಲಿಂಗ್​ ಆಂಡ್​ ಡೈನಾಮಿಕ್ಸ್​ ಎಕ್ಸಪ್ಲೋರರ್​ (ARCADE), ಸ್ಕೂಬ್​-2, ಗೆಲೇಸಿಯ-2, ಒಆರ್​ಬಿ12-ಸ್ಟ್ರೈಡರ್, ನೂಲಯನ್​ ಎಂಬ ಹೆಸರಿನ ಉಪಗ್ರಹಗಳನ್ನು ಪಿಎಸ್​ಎಲ್‌ವಿ- ಸಿ56 ರಾಕೆಟ್ ಹೊತ್ತೊಯ್ದಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:44 am, Sun, 30 July 23

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್