AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ISRO: ಇಸ್ರೋದಿಂದ ಸಿಂಗಾಪುರದ 7 ಉಪಗ್ರಹಗಳ ಉಡಾವಣೆ ಯಶಸ್ವಿ

ಸಿಂಗಾಪುರದ ಏಳು ಉಪಗ್ರಹಗಳನ್ನು ಇಸ್ರೋ ಪಿಎಸ್​ಎಲ್‌ವಿ- ಸಿ56 ರಾಕೆಟ್ ಮೂಲಕ ಇಂದು ಬೆಳಿಗ್ಗೆ 6.30ಕ್ಕೆ ಆಂದ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡಿದೆ.​

ISRO: ಇಸ್ರೋದಿಂದ ಸಿಂಗಾಪುರದ 7 ಉಪಗ್ರಹಗಳ ಉಡಾವಣೆ ಯಶಸ್ವಿ
ನಭಕ್ಕೆ ಹಾರಿದ 7 ಉಪಗ್ರಹಗಳು
ವಿವೇಕ ಬಿರಾದಾರ
|

Updated on:Jul 30, 2023 | 7:47 AM

Share

ಶ್ರೀಹರಿಕೋಟಾ ಜು.30: ಇತ್ತೀಚಿಗಷ್ಟೆ ಚಂದ್ರಯಾನ-3 (Chandrayaan-3) ನೌಕೆಯನ್ನು ಯಶಸ್ವಿಯಾಗಿ ಉಡಾವಣೆ ಮಾಡುವ ಮೂಲಕ ಭಾರತೀಯ ಬಾಹ್ಯಾಕಾಶ ಸಂಸ್ಥೆ (ISRO) ವಿಶೇಷ ಸಾಧನೆ ಮಾಡಿತ್ತು. ಇದೀಗ ಇಸ್ರೋ ಸಿಂಗಾಪುರದ ಏಳು ಉಪಗ್ರಹಗಳನ್ನು (Seven Singaporean Satellites) ಪಿಎಸ್​ಎಲ್‌ವಿ- ಸಿ56 ರಾಕೆಟ್ ಮೂಲಕ ಇಂದು (ಜು.30) ಬೆಳಿಗ್ಗೆ 6.30ಕ್ಕೆ ಆಂದ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡಿದೆ.

ನಭಕ್ಕೆ ಹಾರಿದ ಏಳು ಉಪಗ್ರಹಗಳಲ್ಲಿ ಇಸ್ರೇಲ್​​ ವಿಜ್ಞಾನಿಗಳು ಸಿದ್ಧಪಡಿಸಿರುವ ಡಿಎಸ್​​-ಸಿಂಥೆಟಿಕ್​ ಅಪೆರ್ಚರ್​ ಏರೋಸ್ಪೇಸ್​​ ಎಂಬ ಉಪಗ್ರಹ 360 ಕೇಜಿ ತೂಕವಿದ್ದು, ಇದು ಎಂತಹ ಹವಾಮಾನವಿದ್ದಾಗಲೂ ಚಿತ್ರಗಳನ್ನು ತೆಗೆಯುವ ಸಾಮರ್ಥ್ಯ ಹೊಂದಿದೆ. ಇದರೊಂದಿಗೆ ಸಿಂಗಾಪುರ ರಕ್ಷಣಾ ಇಲಾಖೆ ತಯಾರಿಸಿರುವ ಮೂರು ಉಪಗ್ರಹಗಳು ನಭಕ್ಕೆ ಹಾರಿವೆ. ಇದರಲ್ಲಿ ಸ್ವಯಂಚಾಲಿತ ಕಾರ್ ಚಾಲನೆಗೆ ಸಹಾಯ ಒದಗಿಸುವ ಉಪಗ್ರಹಗವಿದೆ.

ಇದನ್ನುಓದಿ: ISRO Satellite Launch: ಚಂದ್ರಯಾನ 3ರ ಬಳಿಕ ಇಸ್ರೋದಿಂದ ಮತ್ತೊಂದು ಸಾಧನೆ, ಒಂದೇ ಬಾರಿಗೆ 6 ಉಪಗ್ರಹಗಳ ಉಡಾವಣೆ

ಇನ್ನು ಇಸ್ರೋದ ನ್ಯೂಸ್ಪೇಸ್ ಇಂಡಿಯಾ ಯೋಜನೆಯಡಿ ಈ ಉಪಗ್ರಹಗಳ ಉಡಾವಣೆಯಾಗಿದ್ದು, ಈ ಯೋಜನೆಯಡಿ ಖಾಸಗಿಯವರಿಗೂ ಉಪಗ್ರಹ ಉಡಾವಣೆಗೆ ಅವಕಾಶ ನೀಡಲಾಗಿದೆ. ವೆಲೊಕ್ಸ್​​-ಎಮ್, ಆರ್ಕೇಡ್​​ ಅಟ್ಮಾಸ್ಫಿಯರಿಕ್​ ಕಪ್ಲಿಂಗ್​ ಆಂಡ್​ ಡೈನಾಮಿಕ್ಸ್​ ಎಕ್ಸಪ್ಲೋರರ್​ (ARCADE), ಸ್ಕೂಬ್​-2, ಗೆಲೇಸಿಯ-2, ಒಆರ್​ಬಿ12-ಸ್ಟ್ರೈಡರ್, ನೂಲಯನ್​ ಎಂಬ ಹೆಸರಿನ ಉಪಗ್ರಹಗಳನ್ನು ಪಿಎಸ್​ಎಲ್‌ವಿ- ಸಿ56 ರಾಕೆಟ್ ಹೊತ್ತೊಯ್ದಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:44 am, Sun, 30 July 23

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್