AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ISRO Satellite Launch: ಚಂದ್ರಯಾನ 3ರ ಬಳಿಕ ಇಸ್ರೋದಿಂದ ಮತ್ತೊಂದು ಸಾಧನೆ, ಒಂದೇ ಬಾರಿಗೆ 6 ಉಪಗ್ರಹಗಳ ಉಡಾವಣೆ

ಚಂದ್ರಯಾನ-3(Chandrayaan 3)  ಉಡಾವಣೆ ಬಳಿಕ ಬಾಹ್ಯಾಕಾಶದಲ್ಲಿ ಮತ್ತೊಂದು ಮಹತ್ವದ ಸಾಧನೆ ಮಾಡಲು ಇಸ್ರೋ ಸಿದ್ಧತೆ ನಡೆಸಿದೆ. ಇಸ್ರೋ ಜುಲೈ 30ರಂದು ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (PSLV-C56) ಅನ್ನು ಬಾಹ್ಯಾಕಾಶಕ್ಕೆ ಕಳುಹಿಸಲಿದೆ.

ISRO Satellite Launch: ಚಂದ್ರಯಾನ 3ರ ಬಳಿಕ ಇಸ್ರೋದಿಂದ ಮತ್ತೊಂದು ಸಾಧನೆ, ಒಂದೇ ಬಾರಿಗೆ 6 ಉಪಗ್ರಹಗಳ ಉಡಾವಣೆ
ಉಪಗ್ರಹ
ನಯನಾ ರಾಜೀವ್
|

Updated on: Jul 25, 2023 | 9:20 AM

Share

ಚಂದ್ರಯಾನ-3(Chandrayaan 3)  ಉಡಾವಣೆ ಬಳಿಕ ಬಾಹ್ಯಾಕಾಶದಲ್ಲಿ ಮತ್ತೊಂದು ಮಹತ್ವದ ಸಾಧನೆ ಮಾಡಲು ಇಸ್ರೋ ಸಿದ್ಧತೆ ನಡೆಸಿದೆ. ಇಸ್ರೋ ಜುಲೈ 30ರಂದು ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (PSLV-C56) ಅನ್ನು ಬಾಹ್ಯಾಕಾಶಕ್ಕೆ ಕಳುಹಿಸಲಿದೆ. ಈ ಕಾರ್ಯಾಚರಣೆಗೆ ಇಸ್ರೋ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಇದರೊಂದಿಗೆ 6 ಉಪಗ್ರಹಗಳನ್ನೂ ಉಡಾವಣೆ ಮಾಡಲಾಗುವುದು ಎಂದು ಇಸ್ರೋ ತಿಳಿಸಿದೆ.

ಸಿಂಗಾಪುರದ DS-SAR ಉಪಗ್ರಹವನ್ನು ಹೊತ್ತ PSLV-C56 ಜುಲೈ 30 ರಂದು ಇಸ್ರೋದ ಶ್ರೀಹರಿಕೋಟಾ ಬಾಹ್ಯಾಕಾಶ ನಿಲ್ದಾಣದಿಂದ ಉಡಾವಣೆಯಾಗಲಿದೆ. ಇದರೊಂದಿಗೆ ಆರು ಸಹ-ಪ್ರಯಾಣಿಕ ಉಪಗ್ರಹಗಳು ಸಹ ಇರುತ್ತವೆ. ಈ ಎಲ್ಲಾ ಉಪಗ್ರಹಗಳನ್ನು ಬೆಳಗ್ಗೆ 6.30ಕ್ಕೆ ಉಡಾವಣೆ ಮಾಡಲಾಗುವುದು ಎಂದು ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ.

ಇದು DS-SAR ಉಪಗ್ರಹದೊಂದಿಗೆ ಸಮಭಾಜಕ ಕಕ್ಷೆಯ ಸಮೀಪದಲ್ಲಿ 6 ಸಹ-ಪ್ರಯಾಣಿಕರನ್ನು ಒಯ್ಯುತ್ತದೆ. ISRO ಪ್ರಕಾರ, DS-SAR ಮಿಷನ್ PSLV-C55 ಮಿಷನ್‌ನಂತೆಯೇ ಇರುತ್ತದೆ, ಇದನ್ನು ಏಪ್ರಿಲ್ 2023 ರಲ್ಲಿ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು. ಇದು DS-SAR ಅನ್ನು ಉಡಾವಣೆ ಮಾಡಲಿದ್ದು, ಈ ಕ್ಷಿಪಣಿಯ ತೂಕ 360 ಕೆಜಿ. ಈ ಕ್ಷಿಪಣಿಯನ್ನು ಡಿಎಸ್‌ಟಿಎ ಮತ್ತು ಎಸ್‌ಟಿ ಎಂಜಿನಿಯರಿಂಗ್‌ ಜಂಟಿಯಾಗಿ ಅಭಿವೃದ್ಧಿಪಡಿಸಿವೆ.

ಸಿಂಗಾಪುರ್ ಡಿಫೆನ್ಸ್ ಸೈನ್ಸ್ ಟೆಕ್ನಾಲಜಿ ಏಜೆನ್ಸಿ (DSTA) ಮತ್ತು ST ಇಂಜಿನಿಯರಿಂಗ್ ನಡುವಿನ ಪಾಲುದಾರಿಕೆಯ ಅಡಿಯಲ್ಲಿ DS-SAR ಉಪಗ್ರಹವನ್ನು ಅಭಿವೃದ್ಧಿಪಡಿಸಲಾಗಿದೆ.

ಇದರ ಜೊತೆಗೆ, ST ಇಂಜಿನಿಯರಿಂಗ್ ತನ್ನ ವಾಣಿಜ್ಯ ಗ್ರಾಹಕರಿಗೆ ಬಹು-ಮಾದರಿ ಮತ್ತು ಹೆಚ್ಚಿನ ರೆಸ್ಪಾನ್ಸಿವಿಟಿ ಚಿತ್ರಣ ಮತ್ತು ಜಿಯೋಸ್ಪೇಷಿಯಲ್ ಸೇವೆಗಳಿಗಾಗಿ ಇದನ್ನು ಬಳಸುತ್ತದೆ. DS-SAR ಇಸ್ರೇಲ್ ಏರೋಸ್ಪೇಸ್ ಇಂಡಸ್ಟ್ರೀಸ್ (IAI) ಅಭಿವೃದ್ಧಿಪಡಿಸಿದ ಸಿಂಥೆಟಿಕ್ ಅಪರ್ಚರ್ ರಾಡಾರ್ (SAR) ಪೇಲೋಡ್ ಅನ್ನು ಹೊಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ