Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ವರ್ಷ ಹಿಂದೆ ದೋಸೆ-ಚಟ್ನಿಯಲ್ಲಿ ವಿಷ ಬೆರೆಸಿ ಹತ್ಯೆಗೆ ಯತ್ನ! ಇಸ್ರೊ ವಿಜ್ಞಾನಿ ತಪನ್ ಮಿಶ್ರಾ ಹೇಳೋದೇನು?

ಮೇ 3, 2017ರಂದು ನನಗೆ ದೋಸೆ ಮತ್ತು ಚಟ್ನಿಯಲ್ಲಿ ಮಾರಕ ಪ್ರಮಾಣದ ವಿಷ ನೀಡಲಾಗಿತ್ತು ಎಂದು ಇಸ್ರೊ ವಿಜ್ಞಾನಿ ತಪನ್ ಮಿಶ್ರಾ ಆರೋಪಿಸಿದ್ದು, ಕೇಂದ್ರ ಸರ್ಕಾರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

3 ವರ್ಷ ಹಿಂದೆ ದೋಸೆ-ಚಟ್ನಿಯಲ್ಲಿ ವಿಷ ಬೆರೆಸಿ ಹತ್ಯೆಗೆ ಯತ್ನ! ಇಸ್ರೊ ವಿಜ್ಞಾನಿ ತಪನ್ ಮಿಶ್ರಾ ಹೇಳೋದೇನು?
ತಪನ್ ಮಿಶ್ರಾ (ಕೃಪೆ sac.gov.in)
Follow us
ರಶ್ಮಿ ಕಲ್ಲಕಟ್ಟ
| Updated By: ಸಾಧು ಶ್ರೀನಾಥ್​

Updated on: Jan 06, 2021 | 12:17 PM

ಬೆಂಗಳೂರು: ಮೂರು ವರ್ಷಗಳ ಹಿಂದೆ ನನಗೆ ಆಹಾರದಲ್ಲಿ ವಿಷ ಬೆರೆಸಿ ನೀಡಲಾಗಿತ್ತು, ನನ್ನ ಹತ್ಯೆಗೆ ಯತ್ನ ನಡೆದಿತ್ತು ಎಂದು ಇಸ್ರೋ ವಿಜ್ಞಾನಿ ತಪನ್ ಮಿಶ್ರಾ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿರುವ ಇಸ್ರೊ ಪ್ರಧಾನ ಕಚೇರಿಯಲ್ಲಿ ಮಾತನಾಡಿದ ತಪನ್ ಮಿಶ್ರಾ, ಮೇ 3, 2017ರಂದು ನನಗೆ ದೋಸೆ ಮತ್ತು ಚಟ್ನಿಯಲ್ಲಿ ಮಾರಕ ಪ್ರಮಾಣದ ವಿಷ ನೀಡಲಾಗಿತ್ತು ಎಂದು ಹೇಳಿದ್ದಾರೆ. ಪ್ರಸ್ತುತ ಮಿಶ್ರಾ ಅವರು ಇಸ್ರೋದಲ್ಲಿ ಹಿರಿಯ ಸಲಹೆಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಹಿಂದೆ ಅವರು ಅಹಮದಾಬಾದ್ ಮೂಲದ ಅಪ್ಲಿಕೇಷನ್ ಸೆಂಟರ್ ಆಫ್ ಇಂಡಿಯನ್ ಸ್ಪೇಸ್ ರಿಸರ್ಚ್ ಆರ್ಗನೈಸೇಷನ್ ಕೇಂದ್ರದಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.

‘Long Kept Secret’ ಎಂಬ ಶೀರ್ಷಿಕೆ ನೀಡಿ ಫೇಸ್​​ಬುಕ್​​ನಲ್ಲಿ ಈ ಘಟನೆ ಬಗ್ಗೆ ಬರೆದಿರುವ ಮಿಶ್ರಾ ಜುಲೈ 2017ರಲ್ಲಿ ಭದ್ರತಾ ಸಿಬ್ಬಂದಿಯೊಬ್ಬರು ಆರ್ಸೆನಿಕ್ ವಿಷದ ಕುರಿತು ಎಚ್ಚರಿಸಿದ್ದರು. ಇದಕ್ಕೆ ವೈದ್ಯರು ನಿಖರವಾದ ಪರಿಹಾರ ನೀಡಿದ್ದಾರೆ ಎಂದಿದ್ದಾರೆ.

ತೀವ್ರ ಉಸಿರಾಟದ ತೊಂದರೆ, ಚರ್ಮ ರೋಗ ಮತ್ತು ಫಂಗಸ್ ಸೋಂಕು ಮೊದಲಾದ ಆರೋಗ್ಯ ಸಮಸ್ಯೆಗಳಿಂದ ನಾನು ಬಳಲಿದ್ದೆ ಎಂದು ಹೇಳಿದ ಮಿಶ್ರಾ ಆರ್ಸೆನಿಕ್ ವಿಷ ಸೇವನೆಯಿಂದಾಗಿ ಉಂಟಾದ ಸಮಸ್ಯೆಗಳಿಗೆ ನವದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವ ದಾಖಲೆಯನ್ನೂ ತಮ್ಮ ಫೇಸ್​​ಬುಕ್​​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ಬಗ್ಗೆ ಕೇಂದ್ರ ಸರ್ಕಾರ ತನಿಖೆ ಮಾಡಬೇಕು ಎಂದು ಪಿಟಿಐ ಸುದ್ದಿಸಂಸ್ಥೆ ಜತೆ ಮಾತನಾಡಿದ ಮಿಶ್ರಾ ಒತ್ತಾಯಿಸಿದ್ದಾರೆ.  ಮಿಶ್ರಾ ಅವರ ಆರೋಪದ ಬಗ್ಗೆ ಇಸ್ರೊ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಕೀರ್ತಿಶನಿಯಿಂದ ದೂರವಿದ್ದ ವಿಜ್ಞಾನಿ ಪ್ರೊ.ರೊದ್ದಂ ನರಸಿಂಹ

ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ