AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ವರ್ಷ ಹಿಂದೆ ದೋಸೆ-ಚಟ್ನಿಯಲ್ಲಿ ವಿಷ ಬೆರೆಸಿ ಹತ್ಯೆಗೆ ಯತ್ನ! ಇಸ್ರೊ ವಿಜ್ಞಾನಿ ತಪನ್ ಮಿಶ್ರಾ ಹೇಳೋದೇನು?

ಮೇ 3, 2017ರಂದು ನನಗೆ ದೋಸೆ ಮತ್ತು ಚಟ್ನಿಯಲ್ಲಿ ಮಾರಕ ಪ್ರಮಾಣದ ವಿಷ ನೀಡಲಾಗಿತ್ತು ಎಂದು ಇಸ್ರೊ ವಿಜ್ಞಾನಿ ತಪನ್ ಮಿಶ್ರಾ ಆರೋಪಿಸಿದ್ದು, ಕೇಂದ್ರ ಸರ್ಕಾರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

3 ವರ್ಷ ಹಿಂದೆ ದೋಸೆ-ಚಟ್ನಿಯಲ್ಲಿ ವಿಷ ಬೆರೆಸಿ ಹತ್ಯೆಗೆ ಯತ್ನ! ಇಸ್ರೊ ವಿಜ್ಞಾನಿ ತಪನ್ ಮಿಶ್ರಾ ಹೇಳೋದೇನು?
ತಪನ್ ಮಿಶ್ರಾ (ಕೃಪೆ sac.gov.in)
Follow us
ರಶ್ಮಿ ಕಲ್ಲಕಟ್ಟ
| Updated By: ಸಾಧು ಶ್ರೀನಾಥ್​

Updated on: Jan 06, 2021 | 12:17 PM

ಬೆಂಗಳೂರು: ಮೂರು ವರ್ಷಗಳ ಹಿಂದೆ ನನಗೆ ಆಹಾರದಲ್ಲಿ ವಿಷ ಬೆರೆಸಿ ನೀಡಲಾಗಿತ್ತು, ನನ್ನ ಹತ್ಯೆಗೆ ಯತ್ನ ನಡೆದಿತ್ತು ಎಂದು ಇಸ್ರೋ ವಿಜ್ಞಾನಿ ತಪನ್ ಮಿಶ್ರಾ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿರುವ ಇಸ್ರೊ ಪ್ರಧಾನ ಕಚೇರಿಯಲ್ಲಿ ಮಾತನಾಡಿದ ತಪನ್ ಮಿಶ್ರಾ, ಮೇ 3, 2017ರಂದು ನನಗೆ ದೋಸೆ ಮತ್ತು ಚಟ್ನಿಯಲ್ಲಿ ಮಾರಕ ಪ್ರಮಾಣದ ವಿಷ ನೀಡಲಾಗಿತ್ತು ಎಂದು ಹೇಳಿದ್ದಾರೆ. ಪ್ರಸ್ತುತ ಮಿಶ್ರಾ ಅವರು ಇಸ್ರೋದಲ್ಲಿ ಹಿರಿಯ ಸಲಹೆಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಹಿಂದೆ ಅವರು ಅಹಮದಾಬಾದ್ ಮೂಲದ ಅಪ್ಲಿಕೇಷನ್ ಸೆಂಟರ್ ಆಫ್ ಇಂಡಿಯನ್ ಸ್ಪೇಸ್ ರಿಸರ್ಚ್ ಆರ್ಗನೈಸೇಷನ್ ಕೇಂದ್ರದಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.

‘Long Kept Secret’ ಎಂಬ ಶೀರ್ಷಿಕೆ ನೀಡಿ ಫೇಸ್​​ಬುಕ್​​ನಲ್ಲಿ ಈ ಘಟನೆ ಬಗ್ಗೆ ಬರೆದಿರುವ ಮಿಶ್ರಾ ಜುಲೈ 2017ರಲ್ಲಿ ಭದ್ರತಾ ಸಿಬ್ಬಂದಿಯೊಬ್ಬರು ಆರ್ಸೆನಿಕ್ ವಿಷದ ಕುರಿತು ಎಚ್ಚರಿಸಿದ್ದರು. ಇದಕ್ಕೆ ವೈದ್ಯರು ನಿಖರವಾದ ಪರಿಹಾರ ನೀಡಿದ್ದಾರೆ ಎಂದಿದ್ದಾರೆ.

ತೀವ್ರ ಉಸಿರಾಟದ ತೊಂದರೆ, ಚರ್ಮ ರೋಗ ಮತ್ತು ಫಂಗಸ್ ಸೋಂಕು ಮೊದಲಾದ ಆರೋಗ್ಯ ಸಮಸ್ಯೆಗಳಿಂದ ನಾನು ಬಳಲಿದ್ದೆ ಎಂದು ಹೇಳಿದ ಮಿಶ್ರಾ ಆರ್ಸೆನಿಕ್ ವಿಷ ಸೇವನೆಯಿಂದಾಗಿ ಉಂಟಾದ ಸಮಸ್ಯೆಗಳಿಗೆ ನವದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವ ದಾಖಲೆಯನ್ನೂ ತಮ್ಮ ಫೇಸ್​​ಬುಕ್​​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ಬಗ್ಗೆ ಕೇಂದ್ರ ಸರ್ಕಾರ ತನಿಖೆ ಮಾಡಬೇಕು ಎಂದು ಪಿಟಿಐ ಸುದ್ದಿಸಂಸ್ಥೆ ಜತೆ ಮಾತನಾಡಿದ ಮಿಶ್ರಾ ಒತ್ತಾಯಿಸಿದ್ದಾರೆ.  ಮಿಶ್ರಾ ಅವರ ಆರೋಪದ ಬಗ್ಗೆ ಇಸ್ರೊ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಕೀರ್ತಿಶನಿಯಿಂದ ದೂರವಿದ್ದ ವಿಜ್ಞಾನಿ ಪ್ರೊ.ರೊದ್ದಂ ನರಸಿಂಹ

‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ