AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Setu: ರಾಮ ಸೇತು ಇಲ್ಲ ಎಂದಿದ್ದ ಕಾಂಗ್ರೆಸ್​​​, ಸೇತುವೆಯ ವಿವರವಾದ ನಕ್ಷೆ ತಯಾರಿಸಿದ ಇಸ್ರೋ ವಿಜ್ಞಾನಿಗಳು

ಶ್ರೀರಾಮನು ಕಾಲದಲ್ಲಿ ನಿರ್ಮಾಣವಾದ ರಾಮ ಸೇತುವೆಯೇ ಇಲ್ಲ ಎನ್ನುವ ಅನೇಕರ ವಾದವಾಗಿದೆ. ಈಗಾಗಲೇ ವಿವಾದಗಳಿಂದಲೇ ಸುದ್ದಿಯಾಗಿದ್ದ ರಾಮಸೇತುವೆ ಇದೀಗ ಮತ್ತೊಮ್ಮೆ ಮುನ್ನಲೆಗೆ ಬಂದಿದೆ. ಅಮೆರಿಕದ ಉಪಗ್ರಹದ ದತ್ತಾಂಶಗಳನ್ನು ಬಳಸಿಕೊಂಡು ಇಸ್ರೋ ವಿಜ್ಞಾನಿಗಳು ರಾಮಸೇತುವಿನ ಅತ್ಯಂತ ವಿವರವಾದ ನಕ್ಷೆಯನ್ನು ಸಿದ್ಧಪಡಿಸಿದ್ದಾರೆ.

Ram Setu: ರಾಮ ಸೇತು ಇಲ್ಲ ಎಂದಿದ್ದ ಕಾಂಗ್ರೆಸ್​​​, ಸೇತುವೆಯ ವಿವರವಾದ ನಕ್ಷೆ ತಯಾರಿಸಿದ ಇಸ್ರೋ ವಿಜ್ಞಾನಿಗಳು
ರಾಮ ಸೇತುವೆಯ ವಿವರವಾದ ನಕ್ಷೆ
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on: Jul 09, 2024 | 4:34 PM

Share

ರಾಮ ಸೇತುವೆ ಹೆಸರು ಕೇಳಿದ ಕೂಡಲೇ ಭಕ್ತಿ ಭಾವವು ಉಕ್ಕಿ ಹರಿಯುತ್ತದೆ. ಸೀತೆಯನ್ನು ಲಂಕೆಯಿಂದ ಕರೆದುಕೊಂಡು ಬರಲು ಸಮುದ್ರದ ಮಧ್ಯೆ ಸೇತುವೆ ಕಟ್ಟಿ, ಅದರ ಮೂಲಕವೇ ಶ್ರೀರಾಮ ಹಾಗೂ ಸೇನೆ ಲಂಕೆಗೆ ಹೋಗಿತ್ತು ಎನ್ನುವ ಪ್ರತೀತಿ ಇದೆ. ಆದರೆ ರಾಮ ಸೇತು ಬಗ್ಗೆ ಕಾಂಗ್ರೆಸ್​​​ ನೇತೃತ್ವದ ಯುಪಿಎ ಸರಕಾರದ ಅವಧಿಯಲ್ಲಿ ಬಹಳಷ್ಟು ವಾದ ವಿವಾದಗಳು ನಡೆದಿದ್ದವು. ಯುಪಿಎ ಸರಕಾರ ರಾಮ ಸೇತು ಅನ್ನುವುದಿಲ್ಲ. ಅದು ರಾಮ ಕಟ್ಟಿದ ಸೇತುವೆ ಅನ್ನುವುದಕ್ಕೆ ಪುರಾವೆ ಇಲ್ಲ ಎಂದು ಹೇಳಿತ್ತು. ಇದನ್ನು ಬಿಜೆಪಿ ಚುನಾವಣಾ ಅಸ್ತ್ರವನ್ನಾಗಿಸಿಕೊಂಡಿತ್ತು. ಆದರೆ ಇದೀಗ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು ರಾಮಸೇತುವೆಯ ವಿವರವಾದ ನಕ್ಷೆಯನ್ನು ತಯಾರಿಸಿದ್ದಾರೆ.

ಇದೇ ಮೊದಲ ಬಾರಿಗೆ 29 ಕಿ.ಮೀ. ಉದ್ದದ ಸೇತುವೆಯ ಸಮುದ್ರದಡಿಯ ನಕ್ಷೆಯನ್ನು ಇಷ್ಟೊಂದು ನಿಖರವಾಗಿ ಸಿದ್ಧಪಡಿಸಲಾಗಿದೆಯಂತೆ. ಈ ಸೇತುವೆಯ ಬಗ್ಗೆ ಇರುವ ಈ ವಿವಾದಗಳನ್ನು ಬಗೆಹರಿಸಲು ಈ ನಕ್ಷೆಯಿಂದ ಸಾಧ್ಯ ಎನ್ನಲಾಗಿದೆ. ಅದಲ್ಲದೇ ನಕ್ಷೆಯಲ್ಲಿ ಈ ಸೇತುವೆಯು ಸಮುದ್ರದ ತಳದಿಂದ ಎಂಟು ಮೀ.ನಷ್ಟು ಎತ್ತರದಲ್ಲಿದೆ ತಿಳಿಸಲಾಗಿದೆ. ‘ನಾಸಾದ ಐಸಿಇಸ್ಯಾಟ್ 2 ಉಪಗ್ರಹದ ದತ್ತಾಂಶಗಳನ್ನು ಬಳಸಿಕೊಂಡು ನಕ್ಷೆ ಸಿದ್ಧಪಡಿಸಲಾಗಿದೆ. ಈ ನಕ್ಷೆಯಿಂದ ರಾಮಸೇತು ಮತ್ತು ಈ ಸೇತುವೆಯ ಉಗಮದ ಬಗ್ಗೆ ಇನ್ನಷ್ಟು ತಿಳಿಯಲು ಇದು ನೆರವಾಗಲಿದೆ’ ಎಂದು ಇಸ್ರೊದ ನ್ಯಾಷನಲ್‌ ರಿಮೋಟ್ ಸೆನ್ಸಿಂಗ್ ಸೆಂಟರ್‌ನ ವಿಜ್ಞಾನಿಗಳು ತಿಳಿಸಿದ್ದಾರೆ.

ರಾಮ ಸೇತುವೆ ಇರುವುದೆಲ್ಲಿ?

ಭಾರತ ಮತ್ತು ಶ್ರೀಲಂಕಾದ ಮಧ್ಯೆ ಸಮುದ್ರದಲ್ಲಿ ಸುಮಾರು 36 ಕಿಮೀ ಪ್ರದೇಶದಲ್ಲಿರುವುದೇ ರಾಮಾಯಣ ಕಾಲದ ಈ ರಾಮಸೇತು. ಆಳವಿಲ್ಲದ ಸಮುದ್ರದಿಂದ ಸುತ್ತುವರಿಯಲ್ಪಟ್ಟ ಚಿಪ್ಪಿನಂಥ ಮರಳುಗಲ್ಲುಗಳನ್ನು ಒಳಗೊಂಡಿದ್ದು, ಕಿರಿದಾದ ಹಾಗೂ ಅರ್ಧ ಮುಳುಗಿರುವ ಒಡ್ದಾಗಿದೆ. ಈ ಪ್ರದೇಶದ ಕೆಲವು ಕಡೆಗಳಲ್ಲಿ ನೀರಿನ ಆಳ 30 ಅಡಿ ಗಳಷ್ಟಿದ್ದು, ಇಲ್ಲಿ ಸಣ್ಣ ಸಣ್ಣ ದ್ವೀಪಗಳನ್ನು ಕಾಣಬಹುದು. ಅದಲ್ಲದೇ ಈ ರಾಮ ಸೇತುವನ್ನು ಆಡಮ್ಸ್ ಸೇತುವೆ ಎಂದು ಕರೆಯಲಾಗುತ್ತದೆ.

ರಾಮ ಸೇತುವೆ ಇಲ್ಲವೆಂದಿದ್ದ ಫಾಲಿ ಎಸ್ ನಾರಿಮನ್

ಕಳೆದ ಕೆಲವು ವರ್ಷಗಳ ಹಿಂದೆ ರಾಮ ಸೇತು ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟಿಗೆ ಸಲ್ಲಿಸಿದ ಹೇಳಿಕೆಯಲ್ಲಿ ಹಿರಿಯ ವಕೀಲ ಫಾಲಿ ಎಸ್ ನಾರಿಮನ್, ‘ರಾಮ ಸೇತು ಎಲ್ಲಿದೆ? ಅಲ್ಲಿ ಸೇತುವೆಯೇ ಇಲ್ಲವೆಂದ ಮೇಲೆ, ಅದನ್ನು ನಾಶ ಮಾಡೋದು ಎಲ್ಲಿಂದ? ಇದು ಅತಿಮಾನುಷ ಶಕ್ತಿಯ ನಿರ್ಮಾಣವಾಗಿದ್ದು, ಆತನೇ ಅದನ್ನು ನಾಶಗೊಳಿಸಿರಬಹುದು. ಆ ಕಾರಣದಿಂದಲೇ ಶತಮಾನಗಳಿಂದಲೂ ಈ ಸೇತುವೆಯ ಉಲ್ಲೇಖ ಎಲ್ಲಿಯೂ ಇಲ್ಲ ಎಂದಿದ್ದರು.

ಇದನ್ನೂ ಓದಿ: ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ ನೋಡಿ

ರಾಮ ಸೇತು ಬಗ್ಗೆ ಖಡಕ್ ಉತ್ತರ ನೀಡಿದ್ದ ಕೇಂದ್ರ ಸರ್ಕಾರ

2022 ರಲ್ಲಿ ರಾಜ್ಯ ಸಭೆಯಲ್ಲಿ ರಾಮ ಸೇತುವೆಯ ಬಗ್ಗೆ ಕೇಂದ್ರ ಸರ್ಕಾರವು ಖಡಕ್ ಉತ್ತರವನ್ನು ನೀಡಿತ್ತು. ಹೌದು, ಹರ್ಯಾಣದ ಸ್ವತಂತ್ರ ಸಂಸದ ಕಾರ್ತಿಕೇಯ ಶರ್ಮಾರವರು ರಾಮಸೇತು ಬಗ್ಗೆ ಮಾತನಾಡಿ, ‘ಈ ಹಿಂದಿನ ಸರ್ಕಾರ ರಾಮ ಸೇತು ಬಗ್ಗೆ ನಿರ್ಲಕ್ಷ್ಯ ವಹಿಸಿತ್ತು. ಆದರೆ ಈಗಿನ ಸರ್ಕಾರವು ದೇಶದ ಗತಕಾಲದ ಚರಿತ್ರೆಗೆ ಸಾಕ್ಷಿಯಾಗಿರುವ ರಾಮ ಸೇತು ಬಗ್ಗೆ ವೈಜ್ಞಾನಿಕ ಸಂಶೋಧನೆಗೆ ಮುಂದಾಗಿದೆಯೇ’ ಎಂದು ವ್ಯಂಗ್ಯವಾಗಿಯೇ ಪ್ರಶ್ನಿಸಿದ್ದರು.

ಸಂಸದರ ಪ್ರಶ್ನೆಗೆ ಬಾಹ್ಯಾಕಾಶ ಖಾತೆಯ ರಾಜ್ಯ ಸಚಿವ ಜೀತೇಂದ್ರ ಸಿಂಗ್ ಉತ್ತರಿಸಿದ್ದು, ’18 ಸಾವಿರ ವರ್ಷಗಳ ಹಿಂದೆ ನಿರ್ಮಾಣವಾಗಿರುವ ಸೇತುವೆಯ ಬಗ್ಗೆ ಈಗ ಖಚಿತವಾಗಿ ಹೇಳಲು ಸಾಧ್ಯವಿಲ್ಲ. ಆ ಸೇತುವೆಯು ಸುಮಾರು 56 ಕಿಲೋಮೀಟರ್‌ಗಳಷ್ಟು ಉದ್ದವಾಗಿದ್ದು, ಇದನ್ನು ಕಂಡುಹಿಡಿಯಲು ನಮಗೆ ಕೆಲವು ಮಿತಿಗಳಿವೆ. ಸ್ವಲ್ಪ ಮಟ್ಟಿಗೆ ಬಾಹ್ಯಾಕಾಶ ತಂತ್ರಜ್ಞಾನದ ಮೂಲಕ ತುಣುಕುಗಳು, ಕೆಲವು ರೀತಿಯ ಸುಣ್ಣದ ಕಲ್ಲುಗಳನ್ನು ಕಂಡುಹಿಡಿಯಲು ಸಾಧ್ಯವಾಗಿದೆ ಎಂದಿದ್ದರು.

ಇದನ್ನು ಅವಶೇಷಗಳು ಅಥವಾ ಸೇತುವೆಯ ಭಾಗಗಳೇ ಎಂದು ನಿಖರವಾಗಿ ಹೇಳಲು ಸಾಧ್ಯವಿಲ್ಲ. ಅಲ್ಲಿ ಅಸ್ತಿತ್ವದಲ್ಲಿದ್ದ ರಚನೆಯನ್ನು ನಿಖರವಾಗಿ ಗುರುತಿಸುವುದು ಕಷ್ಟವಾಗಿದೆ ಆದರೆ ಆ ರಚನೆಗಳು ಅಸ್ತಿತ್ವದಲ್ಲಿವೆ ಎಂಬುದಕ್ಕೆ ನೇರ ಅಥವಾ ಪರೋಕ್ಷವಾಗಿ ಇದು ಸೂಚನೆಗಳಿವೆ. ಬಾಹ್ಯಾಕಾಶ ಇಲಾಖೆ ರಾಮಸೇತು ಬಗ್ಗೆ ಈಗಾಗಲೇ ಅಧ್ಯಯನದಲ್ಲಿ ತೊಡಗಿಸಿಕೊಂಡಿದೆ ಎಂದು ಸಂಸದರೊಂದಿಗೆ ಹೇಳುವುದಕ್ಕೆ ಬಹಳ ಸಂತೋಷವಾಗಿದೆ’ ಎಂದು ಉತ್ತರಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್