AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಭೂ ವೀಕ್ಷಣಾ ಉಪಗ್ರಹ ಸೇರಿ 3 ಉಪಗ್ರಹಗಳನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ ಇಸ್ರೋ

ಎಲ್ಲ ಮೂರೂ ಉಪಗ್ರಹಗಳನ್ನೂ ಯಶಸ್ವಿಯಾಗಿ ಆಯಾ ಸ್ಥಳಗಳಲ್ಲಿ ನಿಯೋಜಿಸಲಾಗಿದೆ ಎಂದು ಉಡಾವಣಾ ನಿರ್ದೇಶಕರು ಘೋಷಿಸಿದರು.

Video: ಭೂ ವೀಕ್ಷಣಾ ಉಪಗ್ರಹ ಸೇರಿ 3 ಉಪಗ್ರಹಗಳನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ ಇಸ್ರೋ
ನಭಕ್ಕೆ ಏರಿದ ಭೂ ವೀಕ್ಷಣಾ ಉಪಗ್ರಹ
TV9 Web
| Edited By: |

Updated on:Feb 14, 2022 | 8:45 AM

Share

ಭಾರತದ ಬಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆ (ಇಸ್ರೋ-ISRO) ಈ ವರ್ಷದ ಮೊದಲ ಭೂ ವೀಕ್ಷಣಾ ಉಪಗ್ರಹವನ್ನು(ಇಒಎಸ್​ 04) ಇಂದು ಮುಂಜಾನೆ ಯಶಸ್ವಿಯಾಗಿ ಉಡಾವಣೆ ಮಾಡಿತು. ಶ್ರೀಹರಿಕೋಟಾದ ಸತೀಶ್​ ಧವನ್​ ಉಡ್ಡಯನ ಕೇಂದ್ರದ ಮೊದಲ ಉಡ್ಡಯನ ನೆಲೆಯಿಂದ ಪೋಲಾರ್​ ಉಪಗ್ರಹ ಉಡಾವಣಾ ವಾಹಕ (PSLV C52)ದ ಮೂಲಕ ಇಒಎಸ್​-04 ಮತ್ತು ಇತರ ಎರಡು ಉಪಗ್ರಹಗಳನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಲಾಗಿದ್ದು, ಈ ಬಗ್ಗೆ ಇಸ್ರೋ ಟ್ವೀಟ್ ಮಾಡಿದೆ.

ಇಂದು ಇಒಎಸ್​-04 ಭೂ ವೀಕ್ಷಣಾ ಉಪಗ್ರಹದೊಟ್ಟಿಗೆ ನಭಕ್ಕೆ ಏರಿದ ಉಪಗ್ರಹಗಳು  INSPIRESat ಮತ್ತು INSAT-2DT. ಇದರಲ್ಲಿ INSPIRESat  ಎಂಬುದು ವಿದ್ಯಾರ್ಥಿಗಳು ತಯಾರಿಸಿದ ಉಪಗ್ರಹವಾಗಿದ್ದರೆ, INSAT-2DT ಒಂದು ಡಬ್​ ಮಾಡಲಾದ ಬಾಹ್ಯಾಕಾಶ ನೌಕೆ. ಇಒಎಸ್​-04 ಭೂ ವೀಕ್ಷಣಾ ಉಪಗ್ರಹ 1710 ಕೆಜಿ ತೂಕವಿದ್ದು, ಇದನ್ನು ಪಿಎಸ್​ಎಲ್​ವಿ ಸಿ52ವಾಹಕವು 529 ಕಿಮೀ ಕಕ್ಷೆಯ ಸೂರ್ಯ-ಸಿಂಕ್ರೊನಸ್ ಧ್ರುವೀಯ ಕಕ್ಷೆಗೆ ಸೇರಿಸಿದೆ. ಇಒಎಸ್​-04 ಒಂದು ರಾಡಾರ್​ ಇಮೇಜಿಂಗ್ ಉಪಗ್ರಹವಾಗಿದ್ದು, ಯಾವುದೇ ರೀತಿಯ ವಾತಾವರಣವಿದ್ದರೂ, ಕೃಷಿ, ಅರಣ್ಯ, ತೋಟಗಾರಿಕೆ, ಮಣ್ಣಿನ ತೇವಾಂಶ, ಜಲವಿಜ್ಞಾನ, ಪ್ರವಾಹ ನಕ್ಷೆ ಅಪ್ಲಿಕೇಶನ್​​ಗಳಿಗೆ ಅತ್ಯುತ್ತಮ ಗುಣಮಟ್ಟದ ಫೋಟೋಗಳನ್ನು ಒದಗಿಸುವಂತೆ ವಿನ್ಯಾಸಗೊಳಿಸಲಾಗಿದೆ.

ಇಂದು ಭೂವೀಕ್ಷಣಾ ಉಪಗ್ರಹ 04 ಸೇರಿ ಒಟ್ಟು ಮೂರು ಉಪಗ್ರಹಗಳು ನಭಕ್ಕೆ ಏರುತ್ತಿದ್ದಂತೆ ಉಡ್ಡಯನ ಕೇಂದ್ರದಲ್ಲಿದ್ದವರೆಲ್ಲ ಹರ್ಷೋದ್ಘಾರ ಮಾಡಿದ್ದಾರೆ. ಎಲ್ಲ ಮೂರೂ ಉಪಗ್ರಹಗಳನ್ನೂ ಯಶಸ್ವಿಯಾಗಿ ಆಯಾ ಸ್ಥಳಗಳಲ್ಲಿ ನಿಯೋಜಿಸಲಾಗಿದೆ ಎಂದು ಉಡಾವಣಾ ನಿರ್ದೇಶಕರು ಘೋಷಿಸಿದರು. ನಂತರ, ಪಿಎಸ್​ಎಲ್​​ವಿ ಸಿ 52ರ ಮಿಷನ್​​ ಯಶಸ್ವಿಯಾಗಿದೆ ಎಂದು ಇಸ್ರೋ ಮುಖ್ಯಸ್ಥ ಎಸ್​.ಸೋಮನಾಥ್​ ತಿಳಿಸಿದ್ದಾರೆ.

ಇದನ್ನೂ ಓದಿ: ಜಯನಗರ: ಕದ್ದ ಬೈಕಿನಲ್ಲೇ ಹೋಟೆಲಿಂದ ಎರಡೂವರೆ ಲಕ್ಷ ಹಣವನ್ನೂ ಕದ್ದು ಪರಾರಿಯಾದರು ಕಿರಾತಕರು!

Published On - 8:40 am, Mon, 14 February 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ