AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chandrayaan-3: ಮಹತ್ವದ ಮೈಲುಗಲ್ಲಿನತ್ತ ಇಸ್ರೋ: ನೌಕೆಯಿಂದ ಬೇರ್ಪಟ್ಟ ಲ್ಯಾಂಡರ್​

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಚಂದ್ರಯಾನ-3 ಲ್ಯಾಂಡಿಂಗ್​​ಗೆ ಮಹತ್ವದ ಹೆಜ್ಜೆ ಹಾಕುವ ಸನಿಹದಲ್ಲಿದೆ. ಇಂದು ಇಸ್ರೋ ಮಧ್ಯಾಹ್ನ 1 ಗಂಟೆಗೆ ಚಂದ್ರಯಾನ-3 ಮಿಷನ್‌ನ ಪ್ರೊಪಲ್ಷನ್ ಮಾಡ್ಯೂಲ್‌ನಿಂದ ವಿಕ್ರಮ್ ಲ್ಯಾಂಡರ್​​ನ್ನು ಯಶಸ್ವಿಯಾಗಿ ಬೇರ್ಪಡಿಸಲಾಗಿದೆ.

Chandrayaan-3: ಮಹತ್ವದ ಮೈಲುಗಲ್ಲಿನತ್ತ ಇಸ್ರೋ: ನೌಕೆಯಿಂದ ಬೇರ್ಪಟ್ಟ ಲ್ಯಾಂಡರ್​
ಅಕ್ಷಯ್​ ಪಲ್ಲಮಜಲು​​
|

Updated on:Aug 17, 2023 | 2:53 PM

Share

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯು ಚಂದ್ರಯಾನ-3 (Chandrayaan-3) ಲ್ಯಾಂಡಿಂಗ್​​ನಲ್ಲಿ ಮಹತ್ವದ ಹೆಜ್ಜೆ ಹಾಕುವ ಸನಿಹದಲ್ಲಿದೆ. ಇಂದು ಇಸ್ರೋ ಮಧ್ಯಾಹ್ನ 1 ಗಂಟೆಗೆ ಚಂದ್ರಯಾನ-3 ಮಿಷನ್‌ನ ಪ್ರೊಪಲ್ಷನ್ ಮಾಡ್ಯೂಲ್‌ನಿಂದ ವಿಕ್ರಮ್ ಲ್ಯಾಂಡರ್​​ನ್ನು ಯಶಸ್ವಿಯಾಗಿ ಬೇರ್ಪಡಿಸಲಾಗಿದೆ. ಭಾರತೀಯ ಬಾಹ್ಯಾಕಾಶ ಸಂಸ್ಥಾಪಕ ವಿಕ್ರಮ್ ಸಾರಾಭಾಯ್ ಅವರ ಹೆಸರಿನಿಂದ ಸೂಚಿಸಲಾಗಿದ್ದ ಲ್ಯಾಂಡರ್ ಪ್ರಗ್ಯಾನ್ ರೋವರ್​​ನ್ನು ಹೊತ್ತೊಯ್ಯುವ ಲ್ಯಾಂಡರ್​​ನ್ನು ಪ್ರೊಪಲ್ಷನ್ ಮಾಡ್ಯೂಲ್‌ನಿಂದ ಬೇರ್ಪಡಿಸುವ ಮೂಲಕ ನಿರ್ಣಾಯಕ ಮೈಲಿಗಲ್ಲನ್ನು ಸಾಧಿಸಿದೆ ಎಂದು ಇಸ್ರೋ ಟ್ವಿಟರ್​​ ಮೂಲಕ ತಿಳಿಸಿದೆ. ಇನ್ನು ಚಂದ್ರಯಾನ-3 ಮಿಷನ್​​ನ್ನು ಬೆಂಗಳೂರಿನ ಇಸ್ರೋ ಟೆಲಿಮೆಟ್ರಿ, ಟ್ರ್ಯಾಕಿಂಗ್​ ಆ್ಯಂಡ್​​ ಕಮಾಂಡ್​​ ನೆಟ್​ವರ್ಕ್​​ ಗಮನಿಸುತ್ತಿರುತ್ತದೆ.

ಇಸ್ರೋ ಈಗಾಗಲೇ ಲ್ಯಾಂಡಿಂಗ್ ಪ್ರದೇಶವನ್ನು ವಿಸ್ತರಿಸಿದ್ದು, ಚಂದ್ರಯಾನ-2 ಸಮಯದಲ್ಲಿ 500 ಚದರ ಮೀಟರ್ ಪ್ರದೇಶವನ್ನು ಗುರುತಿಸಲಾಗಿತ್ತು. ಇದೀಗ ಅದರ ಬದಲಿಗೆ 4 X 2.4 ಕಿಮೀ ಪ್ರದೇಶವನ್ನು ಹೊಂದಿರುವ ಸ್ಥಳವನ್ನು ಆಯ್ಕೆ ಮಾಡಿದೆ. ಲ್ಯಾಂಡಿಂಗ್ ಮಾಡುವ ಪ್ರಯತ್ನಕ್ಕೆ ಹೆಚ್ಚಿನ ನಮ್ಯತೆಯನ್ನು ಒದಗಿಸುವ ನಿಟ್ಟಿನಲ್ಲಿ ಈ ನಿರ್ಧಾರವನ್ನು ಮಾಡಲಾಗಿದೆ ಎಂದು ಇಸ್ರೋ ಹೇಳಿದೆ.

ಇದನ್ನೂ ಓದಿ: ಚಂದ್ರನ ಮೊದಲ ಚಿತ್ರಗಳನ್ನು ಸೆರೆಹಿಡಿದ ಚಂದ್ರಯಾನ-3

ವಿಕ್ರಮ್ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್​​ನ್ನು ಆಗಸ್ಟ್ 23 ರಂದು ಚಂದ್ರನ ಮೇಲ್ಮೈಯಲ್ಲಿ ಇಳಿಯುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ. ಇನ್ನು ರಷ್ಯಾ ಕೂಡ ಈ ಚಂದ್ರನತ್ತ ಲೂನಾ -25 ಮಿಷನ್‌ ಕಳುಹಿಸಿದೆ. ಅದಕ್ಕಿಂತ ಎರಡು ದಿನಗಳ ಮೊದಲ ಚಂದ್ರನಲ್ಲಿ ನಮ್ಮ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಇಳಿಯಬಹುದು ಎಂದು ಇಸ್ರೋ ಹೇಳಿದೆ. ಚಂದ್ರಯಾನ -3 ಉಡಾವಣೆಯ ನಂತರ ರಷ್ಯಾದ ಲೂನಾ -25 ಮಿಷನ್‌ ಉಡಾವಣೆಯಾಗಿರುವುದು. ಜತೆಗೆ ಲ್ಯಾಂಡಿಂಗ್​​ ಪ್ರದೇಶದಲ್ಲೂ ಬದಲಾವಣೆ ಇದೆ ಎಂದು ಹೇಳಿದೆ. ಇದರಿಂದ ಎರಡು ಮಿಷನ್​​ ನಡುವೆ ಯಾವುದೇ ಘರ್ಷಣೆ ನಡೆಯುವ ಸಾಧ್ಯತೆ ಇಲ್ಲ ಎಂದು ಹೇಳಿದೆ.

ಇಸ್ರೋ ಹಂಚಿಕೊಂಡ ಟ್ವೀಟ್​​

ಚಂದ್ರಯಾನ-3 ಮಿಷನ್ ಚಂದ್ರನ ಮೇಲ್ಮೈಯಲ್ಲಿ ಸುರಕ್ಷಿತ ಮತ್ತು ಮೃದುವಾದ ಲ್ಯಾಂಡಿಂಗ್ ಆಗುವ ಗುರಿಯನ್ನು ಹೊಂದಿದೆ ಮತ್ತು ಸ್ಥಳದಲ್ಲಿ ವೈಜ್ಞಾನಿಕ ಪ್ರಯೋಗಗಳನ್ನು ಕಾರ್ಯಗತಗೊಳಿಸಲಾಗಿದೆ ಎಂದು ಇಸ್ರೋ ಹೇಳಿದೆ. ಇನ್ನು ಚಂದ್ರಯಾನ -2ನಿಂದ ಅನೇಕ ವಿಚಾರಗಳನ್ನು ಕಲಿತ್ತಿದ್ದೇವೆ, ಹಾಗಾಗಿ ಇಲ್ಲಿ ತುಂಬಾ ಎಚ್ಚರಿಕೆ ಮಾರ್ಗವನ್ನು ತೆಗೆದುಕೊಳ್ಳಲಾಗಿದೆ ಎಂದು ಇಸ್ರೋ ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:49 pm, Thu, 17 August 23

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ