AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2022ರ ಮೊದಲ ಉಡ್ಡಯನಕ್ಕೆ ಕ್ಷಣಗಣನೆ; ಫೆ.14ರ ಮುಂಜಾನೆ ಇಸ್ರೋದಿಂದ ಭೂ ವೀಕ್ಷಣಾ ಉಪಗ್ರಹ ಉಡಾವಣೆ

ನಾಳೆ ಮುಂಜಾನೆ ಇಒಎಸ್​-04 ಉಪಗ್ರಹದೊಟ್ಟಿಗೆ ಉಡಾವಣೆಗೊಳ್ಳಲಿರುವ ಇನ್ನೆರಡು ಉಪಗ್ರಹಗಳು INSPIREsat-1 (IS-1) ಮತ್ತು INS-2TD. ಇವೆರಡೂ ಕೂಡ ಬೇರೆಬೇರೆ ಇನ್​ಸ್ಟಿಟ್ಯೂಶನ್​ಗಳ ವಿದ್ಯಾರ್ಥಿಗಳಿಂದ ನಿರ್ಮಿತವಾದ ಉಪಗ್ರಹಗಳಾಗಿವೆ.

2022ರ ಮೊದಲ ಉಡ್ಡಯನಕ್ಕೆ ಕ್ಷಣಗಣನೆ; ಫೆ.14ರ ಮುಂಜಾನೆ ಇಸ್ರೋದಿಂದ ಭೂ ವೀಕ್ಷಣಾ ಉಪಗ್ರಹ ಉಡಾವಣೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Feb 13, 2022 | 6:59 PM

Share

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನಡೆಸಲಿರುವ 2022ರ ಮೊದಲ ಉಡಾವಣೆಗೆ ಇನ್ನು ಕೆಲವೇ ತಾಸುಗಳು ಬಾಕಿ ಇದೆ.  ಇಸ್ರೋ ನಾಳೆ (ಫೆ.14) ಮುಂಜಾನೆ 5.59ಗಂಟೆಗೆ ಈ ವರ್ಷದ ಮೊದಲ ಭೂ ವೀಕ್ಷಣಾ ಉಪಗ್ರಹ-04 (EOS-04)ನ್ನು ಉಡಾವಣೆ ಮಾಡಲಿದೆ.  ಶ್ರೀಹರಿಕೋಟಾದ ಸತೀಶ್​ ಧವನ್​ ಬಾಹ್ಯಾಕಾಶ ಕೇಂದ್ರದ ಮೊದಲ ಉಡ್ಡಯನ ನೆಲೆಯಿಂದ ಈ ಉಡಾವಣೆ ನಡೆಯಲಿದ್ದು, ಇಒಎಸ್​-04 ಉಪಗ್ರಹವನ್ನು ಪೋಲಾರ್ ಉಪಗ್ರಹ ಉಡಾವಣಾ ವಾಹಕ (PSLV-C52) ಹೊತ್ತೊಯ್ಯಲಿದೆ.  ಅಂದಹಾಗೇ, ಇಒಎಸ್​-04 ರಾಡಾಡ್​ ಇಮೇಜ್​ ಉಪಗ್ರಹದೊಂದಿಗೆ ಇನ್ನೆರಡು ಉಪಗ್ರಹಗಳೂ ಕೂಡ ನಭಕ್ಕೆ ಏರಲಿವೆ.  

ನಾಳೆ ಮುಂಜಾನೆ ಇಒಎಸ್​-04 ಉಪಗ್ರಹದೊಟ್ಟಿಗೆ ಉಡಾವಣೆಗೊಳ್ಳಲಿರುವ ಇನ್ನೆರಡು ಉಪಗ್ರಹಗಳು INSPIREsat-1 (IS-1) ಮತ್ತು INS-2TD. ಇವೆರಡೂ ಕೂಡ ಬೇರೆಬೇರೆ ಇನ್​ಸ್ಟಿಟ್ಯೂಶನ್​ಗಳ ವಿದ್ಯಾರ್ಥಿಗಳಿಂದ ನಿರ್ಮಿತವಾದ ಉಪಗ್ರಹಗಳಾಗಿವೆ. ಪಿಎಸ್​ಎಲ್​ವಿ ಸಿ52 ಎಂಬುದು, ಪಿಎಸ್​ಎಲ್​ವಿ ಸರಣಿಯ 54ನೇ ಉಡಾವಣೆಯಾಗಿದೆ. ನಾಳೆ ಉಡ್ಡಯನಗೊಳ್ಳುವ ಇಒಎಸ್​-04 ಭೂ ವೀಕ್ಷಣಾ ಉಪಗ್ರಹ 1710 ಕೆಜಿ ತೂಕವಿದ್ದು, ಇದನ್ನು ಪಿಎಸ್​ಎಲ್​ವಿ ಸಿ52ವಾಹಕವು 529 ಕಿಮೀ ಕಕ್ಷೆಯ ಸೂರ್ಯ-ಸಿಂಕ್ರೊನಸ್ ಧ್ರುವೀಯ ಕಕ್ಷೆಗೆ ಸೇರಿಸುತ್ತದೆ.

ಇಒಎಸ್​-04 ಒಂದು ರಾಡಾರ್​ ಇಮೇಜಿಂಗ್ ಉಪಗ್ರಹವಾಗಿದ್ದು, ಯಾವುದೇ ರೀತಿಯ ವಾತಾವರಣವಿದ್ದರೂ, ಕೃಷಿ, ಅರಣ್ಯ, ತೋಟಗಾರಿಕೆ, ಮಣ್ಣಿನ ತೇವಾಂಶ, ಜಲವಿಜ್ಞಾನ, ಪ್ರವಾಹ ನಕ್ಷೆ ಅಪ್ಲಿಕೇಶನ್​​ಗಳಿಗೆ ಅತ್ಯುತ್ತಮ ಗುಣಮಟ್ಟದ ಫೋಟೋಗಳನ್ನು ಒದಗಿಸುವಂತೆ ವಿನ್ಯಾಸಗೊಳಿಸಲಾಗಿದೆ. ನಾಳೆ ಈ ಉಪಗ್ರಹ ಉಡಾವಣೆಯಾಗುವ ಬಗ್ಗೆ ಇಸ್ರೋ ಕೂಡ ಟ್ವೀಟ್ ಮಾಡಿ ತಿಳಿಸಿದೆ.

ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರದ ವೈನ್ ಮಾರಾಟ ನೀತಿ ವಿರುದ್ಧ ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ ರದ್ದು

Published On - 6:36 pm, Sun, 13 February 22

Follow Us
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ