AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2022ರ ಮೊದಲ ಉಡ್ಡಯನಕ್ಕೆ ಕ್ಷಣಗಣನೆ; ಫೆ.14ರ ಮುಂಜಾನೆ ಇಸ್ರೋದಿಂದ ಭೂ ವೀಕ್ಷಣಾ ಉಪಗ್ರಹ ಉಡಾವಣೆ

ನಾಳೆ ಮುಂಜಾನೆ ಇಒಎಸ್​-04 ಉಪಗ್ರಹದೊಟ್ಟಿಗೆ ಉಡಾವಣೆಗೊಳ್ಳಲಿರುವ ಇನ್ನೆರಡು ಉಪಗ್ರಹಗಳು INSPIREsat-1 (IS-1) ಮತ್ತು INS-2TD. ಇವೆರಡೂ ಕೂಡ ಬೇರೆಬೇರೆ ಇನ್​ಸ್ಟಿಟ್ಯೂಶನ್​ಗಳ ವಿದ್ಯಾರ್ಥಿಗಳಿಂದ ನಿರ್ಮಿತವಾದ ಉಪಗ್ರಹಗಳಾಗಿವೆ.

2022ರ ಮೊದಲ ಉಡ್ಡಯನಕ್ಕೆ ಕ್ಷಣಗಣನೆ; ಫೆ.14ರ ಮುಂಜಾನೆ ಇಸ್ರೋದಿಂದ ಭೂ ವೀಕ್ಷಣಾ ಉಪಗ್ರಹ ಉಡಾವಣೆ
ಪ್ರಾತಿನಿಧಿಕ ಚಿತ್ರ
TV9 Web
| Updated By: Lakshmi Hegde|

Updated on:Feb 13, 2022 | 6:59 PM

Share

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನಡೆಸಲಿರುವ 2022ರ ಮೊದಲ ಉಡಾವಣೆಗೆ ಇನ್ನು ಕೆಲವೇ ತಾಸುಗಳು ಬಾಕಿ ಇದೆ.  ಇಸ್ರೋ ನಾಳೆ (ಫೆ.14) ಮುಂಜಾನೆ 5.59ಗಂಟೆಗೆ ಈ ವರ್ಷದ ಮೊದಲ ಭೂ ವೀಕ್ಷಣಾ ಉಪಗ್ರಹ-04 (EOS-04)ನ್ನು ಉಡಾವಣೆ ಮಾಡಲಿದೆ.  ಶ್ರೀಹರಿಕೋಟಾದ ಸತೀಶ್​ ಧವನ್​ ಬಾಹ್ಯಾಕಾಶ ಕೇಂದ್ರದ ಮೊದಲ ಉಡ್ಡಯನ ನೆಲೆಯಿಂದ ಈ ಉಡಾವಣೆ ನಡೆಯಲಿದ್ದು, ಇಒಎಸ್​-04 ಉಪಗ್ರಹವನ್ನು ಪೋಲಾರ್ ಉಪಗ್ರಹ ಉಡಾವಣಾ ವಾಹಕ (PSLV-C52) ಹೊತ್ತೊಯ್ಯಲಿದೆ.  ಅಂದಹಾಗೇ, ಇಒಎಸ್​-04 ರಾಡಾಡ್​ ಇಮೇಜ್​ ಉಪಗ್ರಹದೊಂದಿಗೆ ಇನ್ನೆರಡು ಉಪಗ್ರಹಗಳೂ ಕೂಡ ನಭಕ್ಕೆ ಏರಲಿವೆ.  

ನಾಳೆ ಮುಂಜಾನೆ ಇಒಎಸ್​-04 ಉಪಗ್ರಹದೊಟ್ಟಿಗೆ ಉಡಾವಣೆಗೊಳ್ಳಲಿರುವ ಇನ್ನೆರಡು ಉಪಗ್ರಹಗಳು INSPIREsat-1 (IS-1) ಮತ್ತು INS-2TD. ಇವೆರಡೂ ಕೂಡ ಬೇರೆಬೇರೆ ಇನ್​ಸ್ಟಿಟ್ಯೂಶನ್​ಗಳ ವಿದ್ಯಾರ್ಥಿಗಳಿಂದ ನಿರ್ಮಿತವಾದ ಉಪಗ್ರಹಗಳಾಗಿವೆ. ಪಿಎಸ್​ಎಲ್​ವಿ ಸಿ52 ಎಂಬುದು, ಪಿಎಸ್​ಎಲ್​ವಿ ಸರಣಿಯ 54ನೇ ಉಡಾವಣೆಯಾಗಿದೆ. ನಾಳೆ ಉಡ್ಡಯನಗೊಳ್ಳುವ ಇಒಎಸ್​-04 ಭೂ ವೀಕ್ಷಣಾ ಉಪಗ್ರಹ 1710 ಕೆಜಿ ತೂಕವಿದ್ದು, ಇದನ್ನು ಪಿಎಸ್​ಎಲ್​ವಿ ಸಿ52ವಾಹಕವು 529 ಕಿಮೀ ಕಕ್ಷೆಯ ಸೂರ್ಯ-ಸಿಂಕ್ರೊನಸ್ ಧ್ರುವೀಯ ಕಕ್ಷೆಗೆ ಸೇರಿಸುತ್ತದೆ.

ಇಒಎಸ್​-04 ಒಂದು ರಾಡಾರ್​ ಇಮೇಜಿಂಗ್ ಉಪಗ್ರಹವಾಗಿದ್ದು, ಯಾವುದೇ ರೀತಿಯ ವಾತಾವರಣವಿದ್ದರೂ, ಕೃಷಿ, ಅರಣ್ಯ, ತೋಟಗಾರಿಕೆ, ಮಣ್ಣಿನ ತೇವಾಂಶ, ಜಲವಿಜ್ಞಾನ, ಪ್ರವಾಹ ನಕ್ಷೆ ಅಪ್ಲಿಕೇಶನ್​​ಗಳಿಗೆ ಅತ್ಯುತ್ತಮ ಗುಣಮಟ್ಟದ ಫೋಟೋಗಳನ್ನು ಒದಗಿಸುವಂತೆ ವಿನ್ಯಾಸಗೊಳಿಸಲಾಗಿದೆ. ನಾಳೆ ಈ ಉಪಗ್ರಹ ಉಡಾವಣೆಯಾಗುವ ಬಗ್ಗೆ ಇಸ್ರೋ ಕೂಡ ಟ್ವೀಟ್ ಮಾಡಿ ತಿಳಿಸಿದೆ.

ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರದ ವೈನ್ ಮಾರಾಟ ನೀತಿ ವಿರುದ್ಧ ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ ರದ್ದು

Published On - 6:36 pm, Sun, 13 February 22

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ