AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೋ ಐತಿಹಾಸಿಕ ಸಾಧನೆ: ವಿದ್ಯಾರ್ಥಿಗಳು ರೂಪಿಸಿದ ಉಪಗ್ರಹ ಹೊತ್ತು ನಭಕ್ಕೆ ಚಿಮ್ಮಿದ ಎಸ್​ಎಸ್​ಎಲ್​ವಿ

AzaadiSAT ಮೂಲಕ ತಲಾ 50 ಗ್ರಾಂ ತೂಕದ 750 ಪೇಲೋಡ್​ಗಳನ್ನು (ಸಣ್ಣ ಉಪಗ್ರಹಗಳು) ಕಕ್ಷೆಗೆ ಸೇರಿಸಲು ಇಸ್ರೋ ಮುಂದಾಗಿದೆ.

ಇಸ್ರೋ ಐತಿಹಾಸಿಕ ಸಾಧನೆ: ವಿದ್ಯಾರ್ಥಿಗಳು ರೂಪಿಸಿದ ಉಪಗ್ರಹ ಹೊತ್ತು ನಭಕ್ಕೆ ಚಿಮ್ಮಿದ ಎಸ್​ಎಸ್​ಎಲ್​ವಿ
ಎಸ್​ಎಸ್​ಎಲ್​ವಿ ಉಡ್ಡಯನ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Aug 07, 2022 | 11:48 AM

Share

ಬೆಂಗಳೂರು: ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದ ಉಪಗ್ರಹ ಉಡಾವಣೆ ಕೇಂದ್ರದಿಂದ ಎಸ್​ಎಸ್​ಎಲ್​ವಿ-ಡಿ1 (SSLV-D1) ಉಪಗ್ರಹ ಉಡ್ಡಯನ ವಾಹನವು ಭಾನುವಾರ (ಆಗಸ್ಟ್ 7) ಬೆಳಿಗ್ಗೆ 9:18ರ ಪೂರ್ವ ನಿಗದಿತ ಸಮಯದಲ್ಲಿ ನಭಕ್ಕೆ ಚಿಮ್ಮಿತು. AzaadiSAT ಮೂಲಕ ತಲಾ 75 ಶಾಲೆಗಳ ವಿದ್ಯಾರ್ಥಿಗಳು ರೂಪಿಸಿರುವ 50 ಗ್ರಾಂ ತೂಕದ 750 ಪೇಲೋಡ್​ಗಳನ್ನು (ಸಣ್ಣ ಉಪಗ್ರಹಗಳು) ಕಕ್ಷೆಗೆ ಸೇರಿಸಲು ಇಸ್ರೋ ಮುಂದಾಗಿದೆ. ಇಸ್ರೋ ರೂಪಿಸಿರುವ EOS-02 ಭೂ ನಿಗಾ ಉಪಗ್ರಹ ಮತ್ತು ಇಸ್ರೋ ಮಾರ್ಗದರ್ಶನದಲ್ಲಿ ದೇಶದ ವಿವಿಧೆಡೆಯ ಗ್ರಾಮೀಣ ವಿದ್ಯಾರ್ಥಿನಿಯರು ರೂಪಿಸಿರುವ ಪುಟ್ಟ ಉಪಗ್ರಹಗಳು (ಪೇಲೋಡ್) ಈ ಬಾಹ್ಯಾಕಾಶ ವಾಹನದ ಮೂಲಕ ಅಂತರಿಕ್ಷದ ಭೂ ಕಕ್ಷೆ ಸೇರಲಿವೆ.

SSLV-D1/EOS-02 ಯೋಜನೆಯ ಕೌಂಟ್​ಡೌನ್ ಭಾನುವಾರ ನಸುಕಿನ 02:26ಕ್ಕೆ ಆರಂಭವಾಗಿತ್ತು. ಕೊನೆಯ ಹಂತದ ಪ್ರಕ್ರಿಯೆ ಮತ್ತು ಪರಿಶೀಲನೆಗಳು ಮುಗಿದ ನಂತರ ಬೆಳಿಗ್ಗೆ 09:18ಕ್ಕೆ ಉಪಗ್ರಹ ಹೊತ್ತ ರಾಕೆಟ್​ ಆಗಸಕ್ಕೆ ನೆಗೆಯಿತು.

ಇಸ್ರೋದ ಭೂ-ಕೇಂದ್ರಗಳಲ್ಲಿ ರೂಪಿಸಿರುವ ‘ಸ್ಪೇಸ್ ಕಿಡ್ಸ್ ಇಂಡಿಯಾ’ (Space Kidz India) ವ್ಯವಸ್ಥೆಯ ಈ ಉಪಗ್ರಹಗಳು ರವಾನಿಸುವ ದತ್ತಾಂಶಗಳನ್ನು ಸ್ವೀಕರಿಸಲಿದೆ. ಈ ಸಣ್ಣ ಉಪಗ್ರಹಗಳಲ್ಲಿ ದೂರದ ಸಿಗ್ನಲ್​ಗಳನ್ನು ಗ್ರಹಿಸುವ / ರವಾನಿಸುವ ಪ್ರಬಲ ಟ್ರಾನ್ಸ್​ಪಾಂಡರ್​ ಮತ್ತು ಸೆಲ್ಫಿ ಕ್ಯಾಮೆರಾಗಳಿವೆ. ಇದೇ ಎಸ್​ಎಸ್​ಎಲ್​ವಿಯಲ್ಲಿ EOS-02 ಭೂ ನಿಗಾ ಉಪಗ್ರಹವೂ ಇದೆ. ಇದು ಕೃಷಿ, ಅರಣ್ಯ ಮತ್ತು ವಿಪತ್ತು ನಿರ್ವಹಣೆಗೆ ನೆರವಾಗಲಿದೆ.

ಇಸ್ರೋದ ಈ ಪ್ರಯತ್ನ ಯಶಸ್ವಿಯಾದರೆ ಮುಂದಿನ ದಿನಗಳಲ್ಲಿ ಬಾಹ್ಯಾಕಾಶ ಸಂಸ್ಥೆಯು 10ರಿಂದ 500 ಕೆಜಿ ತೂಗುವ ಮಿನಿ, ನ್ಯಾನೊ ಮತ್ತು ಮೈಕ್ರೊ ಉಪಗ್ರಹಗಳನ್ನು ಕಕ್ಷೆಗೆ ಸೇರಿಸುವ ಪ್ರಯತ್ನಗಳನ್ನು ಆರಂಭಿಸಲಿದೆ. ಆರ್ಥಿಕವಾಗಿಯೂ ಇದು ಲಾಭದಾಯಕವಾಗಲಿದೆ.

Published On - 9:42 am, Sun, 7 August 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?