AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ISRO: ಇಸ್ರೋ ಮತ್ತೊಂದು ಮೈಲಿಗಲ್ಲು, ಪಿಎಸ್‌ಎಲ್‌ವಿ-ಸಿ55 ರಾಕೆಟ್‌ ಮೂಲಕ ಸಿಂಗಪೂರ್​ನ 2 ಉಪಗ್ರಹಗಳು ಕಕ್ಷೆಗೆ

ಇಸ್ರೋದ ವಾಣಿಜ್ಯ ವಿಭಾಗದ ನ್ಯೂಸ್ಪೇಸ್‌ ಇಂಡಿಯಾ ಲಿಮಿಟೆಡ್ ಯೋಜನೆಯ ಮೂಲಕ ಶ್ರೀಹರಿಕೋಟಾದ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಶನಿವಾರ ಪಿಎಸ್‌ಎಲ್‌ವಿ ಮೂಲಕ ಉಪಗ್ರಹಗಳನ್ನು ಉಡಾವಣೆ ಮಾಡಲಾಗಿದೆ.

ISRO: ಇಸ್ರೋ ಮತ್ತೊಂದು ಮೈಲಿಗಲ್ಲು, ಪಿಎಸ್‌ಎಲ್‌ವಿ-ಸಿ55 ರಾಕೆಟ್‌ ಮೂಲಕ ಸಿಂಗಪೂರ್​ನ 2 ಉಪಗ್ರಹಗಳು ಕಕ್ಷೆಗೆ
ಪಿಎಸ್‌ಎಲ್‌ವಿ-ಸಿ55 ರಾಕೆಟ್‌ ಮೂಲಕ ಸಿಂಗಪೂರ್​ನ 2 ಉಪಗ್ರಹಗಳು ಕಕ್ಷೆಗೆ
ಆಯೇಷಾ ಬಾನು
|

Updated on:Apr 23, 2023 | 9:02 AM

Share

ಚೆನ್ನೈ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಮೈಲಿಗಲ್ಲು ಸಾಧಿಸಿದೆ. ಶನಿವಾರ(ಏಪ್ರಿಲ್ 22) ಪಿಎಸ್‌ಎಲ್‌ವಿ-ಸಿ55 ರಾಕೆಟ್‌ ಮೂಲಕ ಸಿಂಗಪೂರ್​ನ 2 ಉಪಗ್ರಹಗಳನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದೆ. ಇಸ್ರೋದ ವಾಣಿಜ್ಯ ವಿಭಾಗದ ನ್ಯೂಸ್ಪೇಸ್‌ ಇಂಡಿಯಾ ಲಿಮಿಟೆಡ್ ಯೋಜನೆಯ ಮೂಲಕ ಶ್ರೀಹರಿಕೋಟಾದ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಶನಿವಾರ ಪಿಎಸ್‌ಎಲ್‌ವಿ ಮೂಲಕ ಉಪಗ್ರಹಗಳನ್ನು ಉಡಾವಣೆ ಮಾಡಲಾಗಿದೆ. ಇದು ಪಿಎಸ್‌ಎಲ್‌ವಿಯ 57 ನೇ ಉಡಾವಣೆ.

22.5 ಗಂಟೆಗಳ ಕೌಂಟ್ ಡೌನ್ ನಲ್ಲಿ 44.4 ಮೀಟರ್ ಎತ್ತರದಲ್ಲಿ ರಾಕೆಟ್ ಮೊದಲ ಲಾಂಚ್ ಪ್ಯಾಡ್ ನಲ್ಲಿ ಯಶಸ್ವಿಯಾಗಿ ಚಿಮ್ಮಿದೆ. ಪಿಎಸ್ಎಲ್​ವಿ ನಿಗದಿತ ಕಕ್ಷೆಗೆ ಎರಡೂ ಉಪಗ್ರಹಗಳನ್ನು ಸೇರಿಸಲಾಗಿದೆ ಎಂದು ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ತಿಳಿಸಿದ್ದಾರೆ. ಇದು ಪಿಎಸ್ಎಲ್ ವಿಯ 57 ನೇ ಮಿಷನ್ ಆಗಿದ್ದು ಇದರಲ್ಲಿ ಯಶಸ್ಸು ಸಾಧಿಸುವ ಮೂಲಕ ತನ್ನ ಹೆಚ್ಚಿನ ವಿಶ್ವಾಸಾರ್ಹತೆ ಮತ್ತು ಅಂತಹ ವರ್ಗದ ವಾಣಿಜ್ಯ ಕಾರ್ಯಾಚರಣೆಗಳಿಗೆ ಅದರ ಸೂಕ್ತತೆಯನ್ನು ಪ್ರದರ್ಶಿಸಿದೆ ಎಂದು ಮಿಷನ್ ಕಂಟ್ರೋಲ್ ಸೆಂಟರ್‌ನಿಂದ ಸೋಮನಾಥ್ ತಿಳಿಸಿದರು.

ಇದನ್ನೂ ಓದಿ: ಇಸ್ರೋದ ಆರ್‌ಎಲ್‌ವಿ-ಟಿಡಿ ಕಾರ್ಯಾಚರಣೆ: ಭವಿಷ್ಯದ ಬಾಹ್ಯಾಕಾಶ ಪ್ರವಾಸಕ್ಕೆ ಮುನ್ನುಡಿಯೇ?

ಇನ್ನು ಪಿಎಸ್‌ಎಲ್‌ವಿ ಕೊಂಡೊಯ್ದ 2 ಉಪಗ್ರಹಗಳ ಪೈಕಿ ಒಂದನ್ನು ಭೂವೀಕ್ಷಣೆಗೆ ಹಾಗೂ ಮತ್ತೊಂದನ್ನು ತಂತ್ರಜ್ಞಾನ ಪ್ರಾತ್ಯಕ್ಷಿಕೆ ಒದಗಿಸಲೆಂದು ಅಭಿವೃದ್ಧಿಪಡಿಸಲಾಗಿದೆ. ಇದು ಮುಂಬರಲಿರುವ ಚಂದ್ರಯಾನ-3 ಹಾಗೂ ಸೌರ ಮಿಷನ್‌ ಆದಿತ್ಯ ಎಲ್‌-1 ಕಾರ್ಯಾಚರಣೆಗಳಿಗೂ ಸಹಕಾರಿಯಾಗಲಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:02 am, Sun, 23 April 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!