AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ISRO: ಇಸ್ರೋ ಮತ್ತೊಂದು ಮೈಲಿಗಲ್ಲು, ಪಿಎಸ್‌ಎಲ್‌ವಿ-ಸಿ55 ರಾಕೆಟ್‌ ಮೂಲಕ ಸಿಂಗಪೂರ್​ನ 2 ಉಪಗ್ರಹಗಳು ಕಕ್ಷೆಗೆ

ಇಸ್ರೋದ ವಾಣಿಜ್ಯ ವಿಭಾಗದ ನ್ಯೂಸ್ಪೇಸ್‌ ಇಂಡಿಯಾ ಲಿಮಿಟೆಡ್ ಯೋಜನೆಯ ಮೂಲಕ ಶ್ರೀಹರಿಕೋಟಾದ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಶನಿವಾರ ಪಿಎಸ್‌ಎಲ್‌ವಿ ಮೂಲಕ ಉಪಗ್ರಹಗಳನ್ನು ಉಡಾವಣೆ ಮಾಡಲಾಗಿದೆ.

ISRO: ಇಸ್ರೋ ಮತ್ತೊಂದು ಮೈಲಿಗಲ್ಲು, ಪಿಎಸ್‌ಎಲ್‌ವಿ-ಸಿ55 ರಾಕೆಟ್‌ ಮೂಲಕ ಸಿಂಗಪೂರ್​ನ 2 ಉಪಗ್ರಹಗಳು ಕಕ್ಷೆಗೆ
ಪಿಎಸ್‌ಎಲ್‌ವಿ-ಸಿ55 ರಾಕೆಟ್‌ ಮೂಲಕ ಸಿಂಗಪೂರ್​ನ 2 ಉಪಗ್ರಹಗಳು ಕಕ್ಷೆಗೆ
ಆಯೇಷಾ ಬಾನು
ಆಯೇಷಾ ಬಾನು|

Updated on:Apr 23, 2023 | 9:02 AM

Share

ಮುಖ್ಯಾಂಶಗಳು

  • ಪಿಎಸ್‌ಎಲ್‌ವಿ-ಸಿ55 ರಾಕೆಟ್‌ ಮೂಲಕ ಸಿಂಗಪೂರ್​ನ 2 ಉಪಗ್ರಹಗಳನ್ನು ಯಶಸ್ವಿಯಾಗಿ ಕಕ್ಷೆಗೆ
  • ಪಿಎಸ್‌ಎಲ್‌ವಿಯ 57 ನೇ ಉಡಾವಣೆ.
  • 22.5 ಗಂಟೆಗಳ ಕೌಂಟ್ ಡೌನ್ ನಲ್ಲಿ 44.4 ಮೀಟರ್ ಎತ್ತರದಲ್ಲಿ ರಾಕೆಟ್ ಮೊದಲ ಲಾಂಚ್ ಪ್ಯಾಡ್ ನಲ್ಲಿ ಯಶಸ್ವಿಯಾಗಿ ಚಿಮ್ಮಿದೆ

ಚೆನ್ನೈ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಮೈಲಿಗಲ್ಲು ಸಾಧಿಸಿದೆ. ಶನಿವಾರ(ಏಪ್ರಿಲ್ 22) ಪಿಎಸ್‌ಎಲ್‌ವಿ-ಸಿ55 ರಾಕೆಟ್‌ ಮೂಲಕ ಸಿಂಗಪೂರ್​ನ 2 ಉಪಗ್ರಹಗಳನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದೆ. ಇಸ್ರೋದ ವಾಣಿಜ್ಯ ವಿಭಾಗದ ನ್ಯೂಸ್ಪೇಸ್‌ ಇಂಡಿಯಾ ಲಿಮಿಟೆಡ್ ಯೋಜನೆಯ ಮೂಲಕ ಶ್ರೀಹರಿಕೋಟಾದ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಶನಿವಾರ ಪಿಎಸ್‌ಎಲ್‌ವಿ ಮೂಲಕ ಉಪಗ್ರಹಗಳನ್ನು ಉಡಾವಣೆ ಮಾಡಲಾಗಿದೆ. ಇದು ಪಿಎಸ್‌ಎಲ್‌ವಿಯ 57 ನೇ ಉಡಾವಣೆ.

22.5 ಗಂಟೆಗಳ ಕೌಂಟ್ ಡೌನ್ ನಲ್ಲಿ 44.4 ಮೀಟರ್ ಎತ್ತರದಲ್ಲಿ ರಾಕೆಟ್ ಮೊದಲ ಲಾಂಚ್ ಪ್ಯಾಡ್ ನಲ್ಲಿ ಯಶಸ್ವಿಯಾಗಿ ಚಿಮ್ಮಿದೆ. ಪಿಎಸ್ಎಲ್​ವಿ ನಿಗದಿತ ಕಕ್ಷೆಗೆ ಎರಡೂ ಉಪಗ್ರಹಗಳನ್ನು ಸೇರಿಸಲಾಗಿದೆ ಎಂದು ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ತಿಳಿಸಿದ್ದಾರೆ. ಇದು ಪಿಎಸ್ಎಲ್ ವಿಯ 57 ನೇ ಮಿಷನ್ ಆಗಿದ್ದು ಇದರಲ್ಲಿ ಯಶಸ್ಸು ಸಾಧಿಸುವ ಮೂಲಕ ತನ್ನ ಹೆಚ್ಚಿನ ವಿಶ್ವಾಸಾರ್ಹತೆ ಮತ್ತು ಅಂತಹ ವರ್ಗದ ವಾಣಿಜ್ಯ ಕಾರ್ಯಾಚರಣೆಗಳಿಗೆ ಅದರ ಸೂಕ್ತತೆಯನ್ನು ಪ್ರದರ್ಶಿಸಿದೆ ಎಂದು ಮಿಷನ್ ಕಂಟ್ರೋಲ್ ಸೆಂಟರ್‌ನಿಂದ ಸೋಮನಾಥ್ ತಿಳಿಸಿದರು.

ಇದನ್ನೂ ಓದಿ: ಇಸ್ರೋದ ಆರ್‌ಎಲ್‌ವಿ-ಟಿಡಿ ಕಾರ್ಯಾಚರಣೆ: ಭವಿಷ್ಯದ ಬಾಹ್ಯಾಕಾಶ ಪ್ರವಾಸಕ್ಕೆ ಮುನ್ನುಡಿಯೇ?

ಇನ್ನು ಪಿಎಸ್‌ಎಲ್‌ವಿ ಕೊಂಡೊಯ್ದ 2 ಉಪಗ್ರಹಗಳ ಪೈಕಿ ಒಂದನ್ನು ಭೂವೀಕ್ಷಣೆಗೆ ಹಾಗೂ ಮತ್ತೊಂದನ್ನು ತಂತ್ರಜ್ಞಾನ ಪ್ರಾತ್ಯಕ್ಷಿಕೆ ಒದಗಿಸಲೆಂದು ಅಭಿವೃದ್ಧಿಪಡಿಸಲಾಗಿದೆ. ಇದು ಮುಂಬರಲಿರುವ ಚಂದ್ರಯಾನ-3 ಹಾಗೂ ಸೌರ ಮಿಷನ್‌ ಆದಿತ್ಯ ಎಲ್‌-1 ಕಾರ್ಯಾಚರಣೆಗಳಿಗೂ ಸಹಕಾರಿಯಾಗಲಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:02 am, Sun, 23 April 23

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ