AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ISRO: ಇಸ್ರೋ ಮತ್ತೊಂದು ಮೈಲಿಗಲ್ಲು, ಪಿಎಸ್‌ಎಲ್‌ವಿ-ಸಿ55 ರಾಕೆಟ್‌ ಮೂಲಕ ಸಿಂಗಪೂರ್​ನ 2 ಉಪಗ್ರಹಗಳು ಕಕ್ಷೆಗೆ

ಇಸ್ರೋದ ವಾಣಿಜ್ಯ ವಿಭಾಗದ ನ್ಯೂಸ್ಪೇಸ್‌ ಇಂಡಿಯಾ ಲಿಮಿಟೆಡ್ ಯೋಜನೆಯ ಮೂಲಕ ಶ್ರೀಹರಿಕೋಟಾದ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಶನಿವಾರ ಪಿಎಸ್‌ಎಲ್‌ವಿ ಮೂಲಕ ಉಪಗ್ರಹಗಳನ್ನು ಉಡಾವಣೆ ಮಾಡಲಾಗಿದೆ.

ISRO: ಇಸ್ರೋ ಮತ್ತೊಂದು ಮೈಲಿಗಲ್ಲು, ಪಿಎಸ್‌ಎಲ್‌ವಿ-ಸಿ55 ರಾಕೆಟ್‌ ಮೂಲಕ ಸಿಂಗಪೂರ್​ನ 2 ಉಪಗ್ರಹಗಳು ಕಕ್ಷೆಗೆ
ಪಿಎಸ್‌ಎಲ್‌ವಿ-ಸಿ55 ರಾಕೆಟ್‌ ಮೂಲಕ ಸಿಂಗಪೂರ್​ನ 2 ಉಪಗ್ರಹಗಳು ಕಕ್ಷೆಗೆ
ಆಯೇಷಾ ಬಾನು
ಆಯೇಷಾ ಬಾನು|

Updated on:Apr 23, 2023 | 9:02 AM

Share

ಮುಖ್ಯಾಂಶಗಳು

  • ಪಿಎಸ್‌ಎಲ್‌ವಿ-ಸಿ55 ರಾಕೆಟ್‌ ಮೂಲಕ ಸಿಂಗಪೂರ್​ನ 2 ಉಪಗ್ರಹಗಳನ್ನು ಯಶಸ್ವಿಯಾಗಿ ಕಕ್ಷೆಗೆ
  • ಪಿಎಸ್‌ಎಲ್‌ವಿಯ 57 ನೇ ಉಡಾವಣೆ.
  • 22.5 ಗಂಟೆಗಳ ಕೌಂಟ್ ಡೌನ್ ನಲ್ಲಿ 44.4 ಮೀಟರ್ ಎತ್ತರದಲ್ಲಿ ರಾಕೆಟ್ ಮೊದಲ ಲಾಂಚ್ ಪ್ಯಾಡ್ ನಲ್ಲಿ ಯಶಸ್ವಿಯಾಗಿ ಚಿಮ್ಮಿದೆ

ಚೆನ್ನೈ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಮೈಲಿಗಲ್ಲು ಸಾಧಿಸಿದೆ. ಶನಿವಾರ(ಏಪ್ರಿಲ್ 22) ಪಿಎಸ್‌ಎಲ್‌ವಿ-ಸಿ55 ರಾಕೆಟ್‌ ಮೂಲಕ ಸಿಂಗಪೂರ್​ನ 2 ಉಪಗ್ರಹಗಳನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದೆ. ಇಸ್ರೋದ ವಾಣಿಜ್ಯ ವಿಭಾಗದ ನ್ಯೂಸ್ಪೇಸ್‌ ಇಂಡಿಯಾ ಲಿಮಿಟೆಡ್ ಯೋಜನೆಯ ಮೂಲಕ ಶ್ರೀಹರಿಕೋಟಾದ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಶನಿವಾರ ಪಿಎಸ್‌ಎಲ್‌ವಿ ಮೂಲಕ ಉಪಗ್ರಹಗಳನ್ನು ಉಡಾವಣೆ ಮಾಡಲಾಗಿದೆ. ಇದು ಪಿಎಸ್‌ಎಲ್‌ವಿಯ 57 ನೇ ಉಡಾವಣೆ.

22.5 ಗಂಟೆಗಳ ಕೌಂಟ್ ಡೌನ್ ನಲ್ಲಿ 44.4 ಮೀಟರ್ ಎತ್ತರದಲ್ಲಿ ರಾಕೆಟ್ ಮೊದಲ ಲಾಂಚ್ ಪ್ಯಾಡ್ ನಲ್ಲಿ ಯಶಸ್ವಿಯಾಗಿ ಚಿಮ್ಮಿದೆ. ಪಿಎಸ್ಎಲ್​ವಿ ನಿಗದಿತ ಕಕ್ಷೆಗೆ ಎರಡೂ ಉಪಗ್ರಹಗಳನ್ನು ಸೇರಿಸಲಾಗಿದೆ ಎಂದು ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ತಿಳಿಸಿದ್ದಾರೆ. ಇದು ಪಿಎಸ್ಎಲ್ ವಿಯ 57 ನೇ ಮಿಷನ್ ಆಗಿದ್ದು ಇದರಲ್ಲಿ ಯಶಸ್ಸು ಸಾಧಿಸುವ ಮೂಲಕ ತನ್ನ ಹೆಚ್ಚಿನ ವಿಶ್ವಾಸಾರ್ಹತೆ ಮತ್ತು ಅಂತಹ ವರ್ಗದ ವಾಣಿಜ್ಯ ಕಾರ್ಯಾಚರಣೆಗಳಿಗೆ ಅದರ ಸೂಕ್ತತೆಯನ್ನು ಪ್ರದರ್ಶಿಸಿದೆ ಎಂದು ಮಿಷನ್ ಕಂಟ್ರೋಲ್ ಸೆಂಟರ್‌ನಿಂದ ಸೋಮನಾಥ್ ತಿಳಿಸಿದರು.

ಇದನ್ನೂ ಓದಿ: ಇಸ್ರೋದ ಆರ್‌ಎಲ್‌ವಿ-ಟಿಡಿ ಕಾರ್ಯಾಚರಣೆ: ಭವಿಷ್ಯದ ಬಾಹ್ಯಾಕಾಶ ಪ್ರವಾಸಕ್ಕೆ ಮುನ್ನುಡಿಯೇ?

ಇನ್ನು ಪಿಎಸ್‌ಎಲ್‌ವಿ ಕೊಂಡೊಯ್ದ 2 ಉಪಗ್ರಹಗಳ ಪೈಕಿ ಒಂದನ್ನು ಭೂವೀಕ್ಷಣೆಗೆ ಹಾಗೂ ಮತ್ತೊಂದನ್ನು ತಂತ್ರಜ್ಞಾನ ಪ್ರಾತ್ಯಕ್ಷಿಕೆ ಒದಗಿಸಲೆಂದು ಅಭಿವೃದ್ಧಿಪಡಿಸಲಾಗಿದೆ. ಇದು ಮುಂಬರಲಿರುವ ಚಂದ್ರಯಾನ-3 ಹಾಗೂ ಸೌರ ಮಿಷನ್‌ ಆದಿತ್ಯ ಎಲ್‌-1 ಕಾರ್ಯಾಚರಣೆಗಳಿಗೂ ಸಹಕಾರಿಯಾಗಲಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:02 am, Sun, 23 April 23

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್