AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ISRO: ಇಸ್ರೋ ಮತ್ತೊಂದು ಮೈಲಿಗಲ್ಲು, ಪಿಎಸ್‌ಎಲ್‌ವಿ-ಸಿ55 ರಾಕೆಟ್‌ ಮೂಲಕ ಸಿಂಗಪೂರ್​ನ 2 ಉಪಗ್ರಹಗಳು ಕಕ್ಷೆಗೆ

ಇಸ್ರೋದ ವಾಣಿಜ್ಯ ವಿಭಾಗದ ನ್ಯೂಸ್ಪೇಸ್‌ ಇಂಡಿಯಾ ಲಿಮಿಟೆಡ್ ಯೋಜನೆಯ ಮೂಲಕ ಶ್ರೀಹರಿಕೋಟಾದ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಶನಿವಾರ ಪಿಎಸ್‌ಎಲ್‌ವಿ ಮೂಲಕ ಉಪಗ್ರಹಗಳನ್ನು ಉಡಾವಣೆ ಮಾಡಲಾಗಿದೆ.

ISRO: ಇಸ್ರೋ ಮತ್ತೊಂದು ಮೈಲಿಗಲ್ಲು, ಪಿಎಸ್‌ಎಲ್‌ವಿ-ಸಿ55 ರಾಕೆಟ್‌ ಮೂಲಕ ಸಿಂಗಪೂರ್​ನ 2 ಉಪಗ್ರಹಗಳು ಕಕ್ಷೆಗೆ
ಪಿಎಸ್‌ಎಲ್‌ವಿ-ಸಿ55 ರಾಕೆಟ್‌ ಮೂಲಕ ಸಿಂಗಪೂರ್​ನ 2 ಉಪಗ್ರಹಗಳು ಕಕ್ಷೆಗೆ
ಆಯೇಷಾ ಬಾನು
|

Updated on:Apr 23, 2023 | 9:02 AM

Share

ಚೆನ್ನೈ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಮೈಲಿಗಲ್ಲು ಸಾಧಿಸಿದೆ. ಶನಿವಾರ(ಏಪ್ರಿಲ್ 22) ಪಿಎಸ್‌ಎಲ್‌ವಿ-ಸಿ55 ರಾಕೆಟ್‌ ಮೂಲಕ ಸಿಂಗಪೂರ್​ನ 2 ಉಪಗ್ರಹಗಳನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದೆ. ಇಸ್ರೋದ ವಾಣಿಜ್ಯ ವಿಭಾಗದ ನ್ಯೂಸ್ಪೇಸ್‌ ಇಂಡಿಯಾ ಲಿಮಿಟೆಡ್ ಯೋಜನೆಯ ಮೂಲಕ ಶ್ರೀಹರಿಕೋಟಾದ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಶನಿವಾರ ಪಿಎಸ್‌ಎಲ್‌ವಿ ಮೂಲಕ ಉಪಗ್ರಹಗಳನ್ನು ಉಡಾವಣೆ ಮಾಡಲಾಗಿದೆ. ಇದು ಪಿಎಸ್‌ಎಲ್‌ವಿಯ 57 ನೇ ಉಡಾವಣೆ.

22.5 ಗಂಟೆಗಳ ಕೌಂಟ್ ಡೌನ್ ನಲ್ಲಿ 44.4 ಮೀಟರ್ ಎತ್ತರದಲ್ಲಿ ರಾಕೆಟ್ ಮೊದಲ ಲಾಂಚ್ ಪ್ಯಾಡ್ ನಲ್ಲಿ ಯಶಸ್ವಿಯಾಗಿ ಚಿಮ್ಮಿದೆ. ಪಿಎಸ್ಎಲ್​ವಿ ನಿಗದಿತ ಕಕ್ಷೆಗೆ ಎರಡೂ ಉಪಗ್ರಹಗಳನ್ನು ಸೇರಿಸಲಾಗಿದೆ ಎಂದು ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ತಿಳಿಸಿದ್ದಾರೆ. ಇದು ಪಿಎಸ್ಎಲ್ ವಿಯ 57 ನೇ ಮಿಷನ್ ಆಗಿದ್ದು ಇದರಲ್ಲಿ ಯಶಸ್ಸು ಸಾಧಿಸುವ ಮೂಲಕ ತನ್ನ ಹೆಚ್ಚಿನ ವಿಶ್ವಾಸಾರ್ಹತೆ ಮತ್ತು ಅಂತಹ ವರ್ಗದ ವಾಣಿಜ್ಯ ಕಾರ್ಯಾಚರಣೆಗಳಿಗೆ ಅದರ ಸೂಕ್ತತೆಯನ್ನು ಪ್ರದರ್ಶಿಸಿದೆ ಎಂದು ಮಿಷನ್ ಕಂಟ್ರೋಲ್ ಸೆಂಟರ್‌ನಿಂದ ಸೋಮನಾಥ್ ತಿಳಿಸಿದರು.

ಇದನ್ನೂ ಓದಿ: ಇಸ್ರೋದ ಆರ್‌ಎಲ್‌ವಿ-ಟಿಡಿ ಕಾರ್ಯಾಚರಣೆ: ಭವಿಷ್ಯದ ಬಾಹ್ಯಾಕಾಶ ಪ್ರವಾಸಕ್ಕೆ ಮುನ್ನುಡಿಯೇ?

ಇನ್ನು ಪಿಎಸ್‌ಎಲ್‌ವಿ ಕೊಂಡೊಯ್ದ 2 ಉಪಗ್ರಹಗಳ ಪೈಕಿ ಒಂದನ್ನು ಭೂವೀಕ್ಷಣೆಗೆ ಹಾಗೂ ಮತ್ತೊಂದನ್ನು ತಂತ್ರಜ್ಞಾನ ಪ್ರಾತ್ಯಕ್ಷಿಕೆ ಒದಗಿಸಲೆಂದು ಅಭಿವೃದ್ಧಿಪಡಿಸಲಾಗಿದೆ. ಇದು ಮುಂಬರಲಿರುವ ಚಂದ್ರಯಾನ-3 ಹಾಗೂ ಸೌರ ಮಿಷನ್‌ ಆದಿತ್ಯ ಎಲ್‌-1 ಕಾರ್ಯಾಚರಣೆಗಳಿಗೂ ಸಹಕಾರಿಯಾಗಲಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:02 am, Sun, 23 April 23

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!