AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ ಚರ್ಚ್‌ ಮೇಲೆ ಐಟಿ ದಾಳಿ: ಸಿಕ್ಕ ಹಣವೆಷ್ಟು, ಚರ್ಚ್​ ವ್ಯವಹಾರಗಳೇನು?

ಕೇರಳ: ಆದಾಯ ತೆರಿಗೆ ಇಲಾಖೆಯು ಮಧ್ಯ ಕೇರಳದ ತಿರುವಳ್ಳದಲ್ಲಿರುವ ಬಿಲೀವರ್ಸ್ ಈಸ್ಟರ್ನ್ ಚರ್ಚ್‌ ಮೇಲೆ ಇತ್ತೀಚೆಗೆ ದಾಳಿ ನಡೆಸಿದೆ. ವರದಿಗಳ ಪ್ರಕಾರ, ಐ-ಟಿ ಇಲಾಖೆಯು ಒಂದು ದೊಡ್ಡ ಆರ್ಥಿಕ ಹಗರಣವನ್ನು ಪತ್ತೆಹಚ್ಚಿದ್ದು, ಸುಮಾರು 8 ಕೋಟಿ ಹಣವನ್ನು ವಶಪಡಿಸಿಕೊಂಡಿದೆ. ಈ ಚರ್ಚ್ ಅನ್ನು ಸುವಾರ್ತಾಬೋಧಕ ಕೆ.ಪಿ. ಯೋಹನ್ನನ್ (Evangelist KP Yohannan) ಮುನ್ನಡೆಸುತ್ತಿದ್ದಾರೆ. ಮತ್ತು ಧಾರ್ಮಿಕ ಮತಾಂತರಕ್ಕಾಗಿ ದಾನವಾಗಿ ಸಂಗ್ರಹಿಸಿದ ಹಣವನ್ನು ಬೇರೆ ಚಟುವಟಿಕೆಗಳಿಗೆ ಬಳಸುತ್ತಿದ್ದಾರೆ ಎಂಬುದೂ ಪತ್ತೆಯಾಗಿದೆ. ಚಾರಿಟಿ ಫಂಡ್‌ಗಳನ್ನು ಬಳಸಿಕೊಂಡು ಸುವಾರ್ತಾಬೋಧಕ ಚಟುವಟಿಕೆಗಳನ್ನು (Evangelical […]

ಕೇರಳ ಚರ್ಚ್‌ ಮೇಲೆ ಐಟಿ ದಾಳಿ: ಸಿಕ್ಕ ಹಣವೆಷ್ಟು, ಚರ್ಚ್​ ವ್ಯವಹಾರಗಳೇನು?
ಪೃಥ್ವಿಶಂಕರ
|

Updated on:Nov 10, 2020 | 12:29 PM

Share

ಕೇರಳ: ಆದಾಯ ತೆರಿಗೆ ಇಲಾಖೆಯು ಮಧ್ಯ ಕೇರಳದ ತಿರುವಳ್ಳದಲ್ಲಿರುವ ಬಿಲೀವರ್ಸ್ ಈಸ್ಟರ್ನ್ ಚರ್ಚ್‌ ಮೇಲೆ ಇತ್ತೀಚೆಗೆ ದಾಳಿ ನಡೆಸಿದೆ. ವರದಿಗಳ ಪ್ರಕಾರ, ಐ-ಟಿ ಇಲಾಖೆಯು ಒಂದು ದೊಡ್ಡ ಆರ್ಥಿಕ ಹಗರಣವನ್ನು ಪತ್ತೆಹಚ್ಚಿದ್ದು, ಸುಮಾರು 8 ಕೋಟಿ ಹಣವನ್ನು ವಶಪಡಿಸಿಕೊಂಡಿದೆ.

ಈ ಚರ್ಚ್ ಅನ್ನು ಸುವಾರ್ತಾಬೋಧಕ ಕೆ.ಪಿ. ಯೋಹನ್ನನ್ (Evangelist KP Yohannan) ಮುನ್ನಡೆಸುತ್ತಿದ್ದಾರೆ. ಮತ್ತು ಧಾರ್ಮಿಕ ಮತಾಂತರಕ್ಕಾಗಿ ದಾನವಾಗಿ ಸಂಗ್ರಹಿಸಿದ ಹಣವನ್ನು ಬೇರೆ ಚಟುವಟಿಕೆಗಳಿಗೆ ಬಳಸುತ್ತಿದ್ದಾರೆ ಎಂಬುದೂ ಪತ್ತೆಯಾಗಿದೆ. ಚಾರಿಟಿ ಫಂಡ್‌ಗಳನ್ನು ಬಳಸಿಕೊಂಡು ಸುವಾರ್ತಾಬೋಧಕ ಚಟುವಟಿಕೆಗಳನ್ನು (Evangelical Activities) ನಡೆಸಿದ್ದಕ್ಕಾಗಿ ಈ ಹಿಂದೆ ಕೇಂದ್ರ ಗೃಹ ಸಚಿವಾಲಯವು ಬಿಲೀವರ್ಸ್ ಈಸ್ಟರ್ನ್ ಚರ್ಚ್‌ನ ಎಫ್‌ಸಿಆರ್‌ಎ ಪರವಾನಗಿಯನ್ನು ರದ್ದುಗೊಳಿಸಿತ್ತು.

7 ವರ್ಷಗಳಲ್ಲಿ 7,000 ಕೋಟಿ ದೇಣಿಗೆ.. ಕೆಲವು ವರದಿಗಳ ಪ್ರಕಾರ, Believers Eastern Church ಕಳೆದ 7 ವರ್ಷಗಳಲ್ಲಿ 7,000 ಕೋಟಿ ಹಣವನ್ನು ದೇಣಿಗೆಯಾಗಿ ಪಡೆದುಕೊಂಡಿರುವುದು ತಿಳಿದುಬಂದಿದೆ. ಚರ್ಚ್ ಈ ಹಣವನ್ನು ರಿಯಲ್ ಎಸ್ಟೇಟ್ ವ್ಯವಹಾರ ಮತ್ತು ಸಂಸ್ಥೆಗಳ ನಿರ್ಮಾಣದಲ್ಲಿ ಬಳಸಿಕೊಂಡಿದೆ ಎಂದು ವರದಿಯಾಗಿದೆ. ವಾಸ್ತವವಾಗಿ, ಬಿಲೀವರ್ಸ್ ಚರ್ಚ್​ನ ಪರವಾನಗಿ ರದ್ದಾದ ನಂತರವೂ ಸಹ ವಿವಿಧ ಟ್ರಸ್ಟ್‌ಗಳಿಂದ ಹಣವನ್ನು ಪಡೆಯುವುದನ್ನು ಮುಂದುವರೆಸಿದೆ ಎಂದು ವರದಿಯಾಗಿದೆ.

Published On - 12:27 pm, Tue, 10 November 20

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!