AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪೊಲೀಸರ ಗಡ್ಡದ ವಿಷಯದಲ್ಲಿ ನಾವು ಹಸ್ತಕ್ಷೇಪ ಮಾಡೋಲ್ಲ, ಅದು ಸಾಂವಿಧಾನಿಕ ಹಕ್ಕಲ್ಲ‘- ಅಲಹಾಬಾದ್​ ಹೈಕೋರ್ಟ್​

ಗಡ್ಡ ಬಿಟ್ಟರೆ ತಪ್ಪೇನು? ನನಗೆ ಸಂವಿಧಾನ ನೀಡಿದ ಧಾರ್ಮಿಕ ಸ್ವಾತಂತ್ರ್ಯ ಮತ್ತು ಇಸ್ಲಾಂ ತತ್ವಗಳ ಆಧಾರದ ಮೇಲೆ ಗಡ್ಡ ಉಳಿಸಿಕೊಂಡಿದ್ದೇನೆ ಎಂದು ಕಾನ್​ಸ್ಟೆಬಲ್​ ವಾದಿಸಿದ್ದರು.

‘ಪೊಲೀಸರ ಗಡ್ಡದ ವಿಷಯದಲ್ಲಿ ನಾವು ಹಸ್ತಕ್ಷೇಪ ಮಾಡೋಲ್ಲ, ಅದು ಸಾಂವಿಧಾನಿಕ ಹಕ್ಕಲ್ಲ‘- ಅಲಹಾಬಾದ್​ ಹೈಕೋರ್ಟ್​
ಅಲಹಾಬಾದ್​ ಹೈಕೋರ್ಟ್​
TV9 Web
| Edited By: |

Updated on:Aug 24, 2021 | 12:36 PM

Share

ಲಖನೌ: ಪೊಲೀಸ್​ ಪಡೆ (Police Force)ಯಲ್ಲಿ ಕೆಲಸ ಮಾಡುವವರು ಗಡ್ಡವನ್ನು ಹೊಂದಲು ಸಂವಿಧಾನದಲ್ಲಿ ಹಕ್ಕು ನೀಡಿಲ್ಲ ಎಂದು ಅಲಹಬಾದ್​ ಹೈಕೋರ್ಟ್(Allahabad High Court)​​ನ ಲಖನೌ ಪೀಠ ಆದೇಶ ನೀಡಿದೆ. ಈ ಮೂಲಕ, ಪೊಲೀಸ್​ ಕೆಲಸದಲ್ಲಿ ಇದ್ದವರು ಗಡ್ಡ ತೆಗೆದಿರಬೇಕು ಎಂಬ ನಿಯಮವನ್ನು ನಿಷೇಧಿಸುವಂತೆ ರಿಟ್​ ಅರ್ಜಿ ಸಲ್ಲಿಸಿದ್ದ ಉತ್ತರ ಪ್ರದೇಶ ಪೊಲಿಸ್​ ಕಾನ್​ಸ್ಟೆಬಲ್​ವೊಬ್ಬರ ಅರ್ಜಿಯನ್ನು ವಜಾಗೊಳಿಸಿದೆ. ಹಾಗೇ, ಈ ಗಡ್ಡದ ವಿಷಯದಲ್ಲಿ ನಾವು ಹಸ್ತಕ್ಷೇಪ ಮಾಡುವುದೂ ಇಲ್ಲ ಎಂದು ಸ್ಪಷ್ಟವಾಗಿ ತಿಳಿಸಿದೆ.

ಪ್ರಕರಣದ ವಿವರ ಹೀಗಿದೆ.. ಪೊಲೀಸ್ ಪಡೆಯಲ್ಲಿ ಇರುವವರೂ ಗಡ್ಡ ಬಿಡಲು ಅವಕಾಶ ಕೊಡಬೇಕು ಎಂದು ಅರ್ಜಿ ಸಲ್ಲಿಸಿದ್ದ ಕಾನ್​ಸ್ಟೆಬಲ್​ ಹೆಸರು ಮೊಹಮ್ಮದ್​ ಫಾರ್ಮನ್​​. ಇವರು ಎರಡು ಅರ್ಜಿ ಸಲ್ಲಿಸಿದ್ದರು. ಒಂದು, 2020ರ ಅಕ್ಟೋಬರ್​ನಲ್ಲಿ, ಉತ್ತರ ಪ್ರದೇಶದ ಡಿಜಿಪಿ ಹೊರಡಿಸಿದ್ದ ಮಾರ್ಗಸೂಚಿಗಳ ಸುತ್ತೋಲೆ ವಿರುದ್ಧ ಮತ್ತು ಇನ್ನೊಂದು, 2020ರ ನವೆಂಬರ್​ನಲ್ಲಿ ಅಯೋಧ್ಯೆ ಡಿಐಜಿ ತಮ್ಮನ್ನು ಅಮಾನತು ಮಾಡಿದ್ದರ ವಿರುದ್ಧ. ಆದರೆ ಕೋರ್ಟ್ ಇದೀಗ ಎರಡೂ ಅರ್ಜಿಗಳನ್ನು ವಜಾಗೊಳಿಸಿ, ತಮಗೆ ಸಂಬಂಧವಿಲ್ಲ ಎಂದಿದೆ.

2020ರ ಅಕ್ಟೋಬರ್​ನಲ್ಲಿ ಉತ್ತರ ಪ್ರದೇಶ ಡಿಜಿಪಿ ಒಂದು ಸುತ್ತೋಲೆ ಹೊರಡಿಸಿದ್ದರು. ಅದರಲ್ಲಿ, ಉತ್ತರಪ್ರದೇಶ ಪೊಲೀಸ್​ ಪಡೆಯಲ್ಲಿ ಕರ್ತವ್ಯದಲ್ಲಿರುವ ಪ್ರತಿಯೊಬ್ಬರೂ ಶಿಸ್ತು ಪಾಲನೆ ಮಾಡಬೇಕು. ಸಮವಸ್ತ್ರಗಳನ್ನು ಸರಿಯಾಗಿ ಧರಿಸಬೇಕು. ಸರಿಯಾಗಿ ಶೇವ್​ ಮಾಡಿ, ಲಕ್ಷಣವಾಗಿ ಕಾಣಿಸಿಕೊಳ್ಳಬೇಕು ಎಂದು ಉಲ್ಲೇಖಿಸಲಾಗಿತ್ತು. ಆದರೆ ಹೊಸ ಮಾರ್ಗಸೂಚಿಯ ನಿಯಮಗಳನ್ನು ಸರಿಯಾಗಿ ಪಾಲಿಸದ ಕಾನ್​ಸ್ಟೆಬಲ್​ ಮೊಹಮ್ಮದ್​ ಫಾರ್ಮನ್ ಗಡ್ಡವನ್ನು ಬೆಳೆಸಿದ್ದರು. ಅದನ್ನು ತೆಗೆಯುವಂತೆ ಸೂಚಿಸಿದ್ದರು, ಶೇವ್​ ಮಾಡಿರಲಿಲ್ಲ. ಶಿಸ್ತು ಪಾಲನೆ ಮಾಡದ ಹಿನ್ನೆಲೆಯಲ್ಲಿ, ಅಯೋಧ್ಯೆಯ ಡಿಐಜಿ, 2020ರ ನವೆಂಬರ್​ 5ರಂದು ಮೊಹಮ್ಮದ್​ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದರು.

ಆದರೆ ಗಡ್ಡ ಬಿಟ್ಟರೆ ತಪ್ಪೇನು? ನನಗೆ ಸಂವಿಧಾನ ನೀಡಿದ ಧಾರ್ಮಿಕ ಸ್ವಾತಂತ್ರ್ಯ ಮತ್ತು ಇಸ್ಲಾಂ ತತ್ವಗಳ ಆಧಾರದ ಮೇಲೆ ಗಡ್ಡ ಉಳಿಸಿಕೊಂಡಿದ್ದೇನೆ ಎಂದು ಕಾನ್​ಸ್ಟೆಬಲ್​ ವಾದಿಸಿದ್ದರು. ಇದಕ್ಕೆ ವಿರುದ್ಧವಾಗಿ  ವಾದಿಸಿದ್ದ ಪಬ್ಲಿಕ್ ಪ್ರಾಸಿಕ್ಯೂಟರ್​, ಇಲಾಖೆಯ ನಿಯಮಗಳ ಪಾಲನೆ ಬಗ್ಗೆ ಕೋರ್ಟ್​ನಲ್ಲಿ ಮಾತನಾಡಿದ್ದರು.  ವಿಚಾರಣೆ ನಡೆಸಿದ ಹೈಕೋರ್ಟ್​, ಅಕ್ಟೋಬರ್​ನಲ್ಲಿ ಪೊಲೀಸ್​ ಇಲಾಖೆ ಹೊರಡಿಸಿದ ಮಾರ್ಗಸೂಚಿ, ಇಲಾಖೆಯಲ್ಲಿ ಶಿಸ್ತು ಕಾಯ್ದುಕೊಳ್ಳುವ ಸುತ್ತೋಲೆಯಾಗಿದ್ದು, ಅದರ ಪಾಲನೆ ಅಗತ್ಯ ಎಂದಿದೆ.

ಇದನ್ನೂ ಓದಿ: Covid Vaccine: 12 ವರ್ಷ ಮೇಲ್ಪಟ್ಟವರಿಗೆ ಶೀಘ್ರದಲ್ಲೇ ಕೊವಿಡ್ ಲಸಿಕೆ; ಆರೋಗ್ಯ ಸಮಸ್ಯೆ ಇರುವ ಮಕ್ಕಳಿಗೆ ಮೊದಲ ಆದ್ಯತೆ

ರಾಗಿಣಿ ಹಾಗೂ ಸಂಜನಾ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ FSL ವರದಿ ನೋಡಿ ಸಮಾಧಾನವಾಗಿದೆ: ಇಂದ್ರಜಿತ್ ಲಂಕೇಶ್

Published On - 12:36 pm, Tue, 24 August 21

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು