AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚರಾಜ್ಯ ಚುನಾವಣೆ: ಭಾನುವಾರ ದಿನಾಂಕ ಘೋಷಣೆ ಸಾಧ್ಯತೆ

ಕೇಂದ್ರ ಚುನಾವಣಾ ಆಯೋಗವು (Election Commission of India)ಭಾನುವಾರದಂದು (ಅ.6) ಪಂಚರಾಜ್ಯಗಳಾದ ರಾಜಸ್ಥಾನ, ಮಧ್ಯಪ್ರದೇಶ, ತೆಲಂಗಾಣ ಹಾಗೂ ಮೀಜೋರಾಂ ಛತ್ತೀಸಗಢ್​​ನಲ್ಲಿ ಚುನಾವಣೆ ನಡೆಸುವ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಪಂಚರಾಜ್ಯ ಚುನಾವಣೆ: ಭಾನುವಾರ ದಿನಾಂಕ ಘೋಷಣೆ ಸಾಧ್ಯತೆ
ಸಾಂದರ್ಭಿಕ ಚಿತ್ರ
Digi Tech Desk
| Edited By: |

Updated on:Oct 06, 2023 | 12:09 PM

Share

ದೆಹಲಿ, ಅ.6: ಕೇಂದ್ರ ಚುನಾವಣಾ ಆಯೋಗವು (Election Commission of India)ಭಾನುವಾರದಂದು (ಅ.6) ಪಂಚರಾಜ್ಯಗಳಾದ ರಾಜಸ್ಥಾನ, ಮಧ್ಯಪ್ರದೇಶ, ತೆಲಂಗಾಣ ಹಾಗೂ ಮೀಜೋರಾಂ, ಛತ್ತೀಸಗಢ್​​ನಲ್ಲಿ ಚುನಾವಣೆ ನಡೆಸುವ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ನಾಲ್ಕು ರಾಜ್ಯಗಳಲ್ಲಿ ಒಂದೇ ಹಂತದ ಮತದಾನ ನಡೆಸುವ ಸಾಧ್ಯತೆ ಇದೆ. ರಾಜಸ್ಥಾನ, ಮಧ್ಯಪ್ರದೇಶ, ತೆಲಂಗಾಣ ಹಾಗೂ ಮೀಜೋರಾಂ ರಾಜ್ಯದಲ್ಲಿ ಒಂದೇ ಹಂತದಲ್ಲಿ ಮತದಾನ ಮತ್ತು ಛತ್ತೀಸಗಢ್​ದಲ್ಲಿ ಎರಡು ಹಂತದ ಮತದಾನ ನಡೆಯುವ ಸಾಧ್ಯತೆ ಎಂದು ಮೂಲಗಳು ಹೇಳಿವೆ.

ಕೇಂದ್ರ ಚುನಾವಣಾ ಆಯೋಗವು ಇಂದು ಮಹತ್ವದ ಸಭೆಯನ್ನು ಕರೆದಿದೆ. ಪಂಚ ರಾಜ್ಯಗಳ ಚುನಾವಣಾ ವೇಳಾಪಟ್ಟಿಯನ್ನು ಅಂತಿಮಗೊಳಿಸುವುದು ಸಭೆಯ ಕಾರ್ಯಸೂಚಿಯಾಗಿದೆ. ಈಗಾಗಲೇ ಚುನಾವಣಾ ಆಯೋಗವು ತನ್ನ ಅಧಿಕಾರಿಗಳು ಈ ಐದು ರಾಜ್ಯಗಳಿಗೆ ಕಳುಹಿಸಲಾಗಿದೆ.

ಚುನಾವಣಾ ಆಯೋಗ ಮಧ್ಯಪ್ರದೇಶ, ಮಿಜೋರಾಂ, ರಾಜಸ್ಥಾನ ಮತ್ತು ಛತ್ತೀಸ್‌ಗಢಕ್ಕೆ ಭೇಟಿ ನೀಡಿವೆ. ಗುರುವಾರದಂದು ಅಂದರೆ ಇಂದು ತೆಲಂಗಾಣಕ್ಕೆ ಭೇಟಿ ನೀಡಲಿದೆ. ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ಕೆಲವು ವರದಿಗಳು ತಿಳಿಸಿದೆ.

ಇದನ್ನೂ ಓದಿ: ಒಂದು ರಾಷ್ಟ್ರ ಒಂದು ಚುನಾವಣೆ ಕುರಿತು ಮೌನಮುರಿದ ರಾಹುಲ್ ಗಾಂಧಿ

ಛತ್ತೀಸ್‌ಗಢ ಹೊರತುಪಡಿಸಿ, ಮತ್ತೆ ಎಲ್ಲಾ ರಾಜ್ಯಗಳಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಇನ್ನು ಭದ್ರತಾ ಕಾರಣಗಳಿಂದಾಗಿ, ಛತ್ತೀಸ್‌ಗಢ ಎರಡು ಹಂತಗಳಲ್ಲಿ ವಿಧಾನಸಭೆ ಚುನಾವಣೆಯನ್ನು ನಡೆಸಲಾಗುವುದು. ಈ ಐದು ರಾಜ್ಯಗಳ ವಿಧಾಸಭೆ ಅವಧಿ ಜನವರಿಯಲ್ಲಿ ಕೊನೆಗೊಳ್ಳಲಿದೆ.

ಪ್ರಸ್ತುತ ಛತ್ತೀಸ್‌ಗಢ ಮತ್ತು ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರವಿದ್ದು, ತೆಲಂಗಾಣದಲ್ಲಿ ಕೆಸಿಆರ್ ಅವರ ಬಿಆರ್‌ಎಸ್ ಅಧಿಕಾರದಲ್ಲಿದೆ. ಮಿಜೋರಾಂನಲ್ಲಿ ಮಿಜೋ ನ್ಯಾಶನಲ್ ಫ್ರಂಟ್‌ನ ಝೋರಂತಂಗ ಸರ್ಕಾರ ಇದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:50 am, Fri, 6 October 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್