AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಬಗ್ಗೆ ತಪ್ಪು ಮಾಹಿತಿಗಳನ್ನು ಹಬ್ಬಿಸುವ ಪೋಸ್ಟ್​ಗಳನ್ನು ತೆಗೆದು ಹಾಕಲು ಸಾಮಾಜಿಕ ಮಾಧ್ಯಮಗಳಿಗೆ ಐಟಿ ಸಚಿವಾಲಯ ಸೂಚನೆ

Covid 19: ಈ ವರ್ಷದ ಆರಂಭದಲ್ಲಿ ಅಂದರೆ ಜನವರಿ ಮತ್ತು ಫೆಬ್ರವರಿಯಲ್ಲಿ ರೈತರ ಪ್ರತಿಭಟನೆಯ ಬಗ್ಗೆ ಕೆಲವು ಟ್ವೀಟ್​ಗಳನ್ನು ತೆಗೆದು ಹಾಕಲು ಐಟಿ ಸಚಿವಾಲಯ ಟ್ವಿಟರ್ ಸಂಸ್ಥೆಗೆಹೇಳಿದ್ದರೂ ,ಪ್ರಸ್ತುತ ಸಂಸ್ಥೆ ಅದನ್ನು ನಿರಾಕರಿಸಿತ್ತು.

ಕೊವಿಡ್ ಬಗ್ಗೆ ತಪ್ಪು ಮಾಹಿತಿಗಳನ್ನು ಹಬ್ಬಿಸುವ ಪೋಸ್ಟ್​ಗಳನ್ನು ತೆಗೆದು ಹಾಕಲು ಸಾಮಾಜಿಕ ಮಾಧ್ಯಮಗಳಿಗೆ ಐಟಿ ಸಚಿವಾಲಯ ಸೂಚನೆ
ಟ್ವಿಟ್ಟರ್
ರಶ್ಮಿ ಕಲ್ಲಕಟ್ಟ
|

Updated on: Apr 25, 2021 | 4:12 PM

Share

ದೆಹಲಿ: ಕೊವಿಡ್ 19 ನಿಯಮಾವಳಿ ಬಗ್ಗೆ ತಪ್ಪು ಮಾಹಿತಿ, ಕೋಮು ದ್ವೇಷ ಹಬ್ಬಿಸುವ ಪೋಸ್ಟ್ ಗಳು, ಅನಗತ್ಯ ಮತ್ತು ಹಳೆಯ ಪೋಸ್ಟ್, ವಿಷಯಕ್ಕೆ ಸಂಬಂಧವೇ ಇರದ ಪೋಸ್ಟ್- ಹೀಗೆ ಸುಮಾರು 100 ಪೋಸ್ಟ್​ಗಳು ಸಾಮಾಜಿಕ ಮಾಧ್ಯಮಗಳಿದ್ದು ಇವುಗಳನ್ನು ತೆಗೆದು ಹಾಕುವಂತೆ ಎಲೆಕ್ಟ್ರಾನಿಕ್ಸ್ ಆಂಡ್ ಇನ್ಫಾರ್ಮೇಷನ್ ಟೆಕ್ನಾಲಜಿ (MeitY) ಟ್ವಿಟರ್,ಫೇಸ್​ಬುಕ್ ಮತ್ತು ಇನ್​ಸ್ಟಾಗ್ರಾಂಗೆ ಸೂಚಿಸಿದೆ ಎಂದು ಐಟಿ ಸಚಿವಾಲಯದ ಮೂಲಗಳು ಹೇಳಿವೆ.

ಇಡೀ ದೇಶ ಕೊವಿಡ್ 19 ಸಾಂಕ್ರಾಮಿಕ ರೋಗದ ವಿರುದ್ಧ ಧೈರ್ಯವಾಗಿ ಹೋರಾಟ ನಡೆಸುತ್ತಿರುವಾಗ, ಕೆಲವರು ಭೀತಿ ಉಂಟುಮಾಡಲು ಸಾಮಾಜಿಕ ಮಾಧ್ಯಮವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಈ ಪೋಸ್ಟ್​ಗಳಿಂದಾಗಿ ಸಾಂಕ್ರಾಮಿಕ ಮತ್ತು ಸಾರ್ವಜನಿಕ ಸುವ್ಯವಸ್ಥೆಯ ವಿರುದ್ಧವಾಗಿ ನಡೆಯುವ ಅಡೆತಡೆಗಳನ್ನು ತಡೆಗಟ್ಟಲು ಈ URL ಗಳನ್ನು (uniform resource locator) ತೆಗೆದುಹಾಕುವಂತೆ ಸಚಿವಾಲಯ ಕೇಳಿದೆ ಎಂದು ಐಟಿ ಸಚಿವಾಲಯದ ಉನ್ನತ ಮೂಲಗಳು ತಿಳಿಸಿವೆ.

ಕಳೆದ ಒಂದು ತಿಂಗಳಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಮೂಲಕ ಕೇಂದ್ರ ಸರ್ಕಾರವು ರದ್ದು ಮಾಡಿದ 50 ಕ್ಕೂ ಹೆಚ್ಚು ಟ್ವೀಟ್‌ಗಳನ್ನು ತೆಗೆದು ಹಾಕಿದೆ ಅಥವಾ ನಿರ್ಬಂಧಿಸಿದೆ ಎಂದು ಟ್ವಿಟರ್ ವರದಿ ಮಾಡಿದ ಒಂದು ದಿನದ ನಂತರ ಐಟಿ ಸಚಿವಾಲಯ ಈ ಕ್ರಮ ಕೈಗೊಂಡಿದೆ.

ಜಾಗತಿಕ ಮೈಕ್ರೋ-ಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಈ ಮಾಹಿತಿಯನ್ನು ಲುಮೆನ್ ಡೇಟಾಬೇಸ್‌ಗೆ ಸಲ್ಲಿಸಿದೆ. ಇದು ಸ್ವತಂತ್ರ ಅಧ್ಯಯನ ಯೋಜನೆಯಾಗಿದ್ದು ಅದು ಆನ್‌ಲೈನ್ ವಿಷಯಗಳ ಬಗ್ಗೆ ಅಧ್ಯಯನ ನಡೆಸಿ , ಅವುಗಳನ್ನು ನಿಯಂತ್ರಿಸುತ್ತದೆ.

ಲುಮೆನ್ ಡೇಟಾಬೇಸ್‌ನಲ್ಲಿ ಟ್ವಿಟರ್ ಸಲ್ಲಿಸಿದ ಮಾಹಿತಿಯ ಪ್ರಕಾರ, ಭಾರತದಲ್ಲಿ ಈಗ ನಿರ್ಬಂಧಿಸಲಾಗಿರುವ ಕೆಲವು ಯುಆರ್‌ಎಲ್‌ಗಳು, ಕೊವಿಡ್ -19 ಸಾಂಕ್ರಾಮಿಕ ರೋಗದ ಎರಡನೇ ಅಲೆ ಬಗ್ಗೆ ಮಾಹಿತಿಯನ್ನು ಒಳಗೊಂಡಿವೆ. ಇವುಗಳ ಕೊವಿಡ್ ಪ್ರಕರಣಗಳನ್ನು ಸರ್ಕಾರ ನಿರ್ವಹಿಸುತ್ತಿರುವ ಬಗ್ಗೆ ಟೀಕೆ ಮಾಡಿವೆ. ಮತ್ತೊಂದೆಡೆ, ಇತರ ಕೆಲವು ಪೋಸ್ಟ್‌ಗಳು ಮತ್ತು ಯುಆರ್‌ಎಲ್‌ಗಳು ಛತ್ತೀಸಗಡದಲ್ಲಿ ಇತ್ತೀಚೆಗೆ ನಡೆದ ಮಾವೋವಾದಿಗಳು ನಡೆಸಿದ ದಾಳಿ ಚಿತ್ರಗಳು ಮತ್ತು ವಿಡಿಯೊಗಳನ್ನು ತೋರಿಸುತ್ತಿರುವವಗಳಾಗಿವೆ.ಈ ದಾಳಿಯಲ್ಲಿ ದರಿಂದಾಗಿ 22 ಮಂದಿ ಪೊಲೀಸ್ ಸಿಬ್ಬಂದಿ ಸಾವಿಗೀಡಾಗಿದ್ದರು.

ಪ್ರಮುಖ ದಿನಪತ್ರಿಯೊಂದರ ಪತ್ರಕರ್ತ, ಚಲನಚಿತ್ರ ನಿರ್ಮಾಪಕ, ಸಂಸತ್ ಸದಸ್ಯ, ಶಾಸಕ ಮತ್ತು ನಟರು ಟ್ವೀಟ್ ಮಾಡಿದ್ದು, ಈ ಎಲ್ಲಾ ಟ್ವೀಟ್‌ಗಳನ್ನು ಭಾರತದಲ್ಲಿ ನಿರ್ಬಂಧಿಸಲಾಗಿದೆ ಅಂದರೆ ದೇಶದ ಟ್ವಿಟರ್ ಬಳಕೆದಾರರು ಈ ಟ್ವೀಟ್​ಗಳನ್ನು ನೋಡಲು ಸಾಧ್ಯವಾಗುವುದಿಲ್ಲ.

ಈ ವರ್ಷದ ಆರಂಭದಲ್ಲಿ ಅಂದರೆ ಜನವರಿ ಮತ್ತು ಫೆಬ್ರವರಿಯಲ್ಲಿ ರೈತರ ಪ್ರತಿಭಟನೆಯ ಬಗ್ಗೆ ಕೆಲವು ಟ್ವೀಟ್ ಗಳನ್ನು ತೆಗೆದು ಹಾಕಲು ಐಟಿ ಸಚಿವಾಲಯ ಟ್ವಿಟರ್ ಸಂಸ್ಥೆಗೆ ಹೇಳಿದ್ದರೂ ,ಪ್ರಸ್ತುತ ಸಂಸ್ಥೆ ಅದನ್ನು ನಿರಾಕರಿಸಿತ್ತು.

ಸಚಿವಾಲಯ ಹೇಳಿದರೂ ಟ್ವೀಟ್​ಗಳನ್ನು ಯಾಕೆ ತೆಗೆದು ಹಾಕಿಲ್ಲ ಎಂಬುದಕ್ಕೆ ಟ್ವಿಟರ್ ವಿವರಣೆ ನೀಡಿತ್ತು . ಆದಾಗ್ಯೂ, ಸರ್ಕಾರದ ಆದೇಶಗಳನ್ನು ಧಿಕ್ಕರಿಸಿದ್ದಕ್ಕೆ ಐಟಿ ಸಚಿವಾಲಯ ಕೋಪಗೊಂಡಿತ್ತು. ವೇದಿಕೆಯನ್ನು ಸರಿಯಾಗಿ ನಿರ್ವಹಿಸದೇ ಇದ್ದರೆ ಟ್ವಿಟರ್ ಇಂಡಿಯಾ ಉದ್ಯೋಗಿಗಳನ್ನು ಜೈಲಿಗೆ ಹಾಕುವುದಾಗಿ ಸಚಿವಾಲಯ ಬೆದರಿಕೆಯೊಡ್ಡಿತ್ತು. ಅಷ್ಟರಲ್ಲಿ ತಮ್ಮ ಬಿಗಿಪಟ್ಟನ್ನು ಸಡಿಲಗೊಳಿಸಿದ ಟ್ವಿಟರ್ ಇಂಡಿಯಾ,ಸರ್ಕಾರ ಹೇಳಿದ ಶೇ95 ರಷ್ಟು ಮನವಿಗಳನ್ನು ಪರಿಗಣಿಸಿದ್ದೇವೆ ಎಂದಿತ್ತು.

ಅಂತಹ 257 ಖಾತೆಗಳ ಮೊದಲ ಪಟ್ಟಿಯನ್ನು ಜನವರಿ 31 ರಂದು ಸಚಿವಾಲಯ ಕಳುಹಿಸಿತ್ತು. ಆಮೇಲೆ ಸುಮಾರು 1,200 ಖಾತೆಗಳ ಮತ್ತೊಂದು ಪಟ್ಟಿಯನ್ನು ಕಳುಹಿಸಲಾಗಿತ್ತು. ಐಟಿ ಸಚಿವಾಲಯ ಕಳುಹಿಸಿದ ಎರಡೂ ಪಟ್ಟಿಗಳು ಈ ಟ್ವಿಟ್ಟರ್ ಹ್ಯಾಂಡಲ್‌ಗಳು ರೈತರ ಪ್ರತಿಭಟನೆಯ ಬಗ್ಗೆ ತಪ್ಪು ಮಾಹಿತಿ ಹರಡುತ್ತಿವೆ ಎಂದು ಹೇಳಿಕೊಂಡಿದ್ದು, ಇದು ದೇಶದ ಸಾರ್ವಜನಿಕ ಸುವ್ಯವಸ್ಥೆಯ ಮೇಲೆ ಪರಿಣಾಮ ಬೀರಿ ಸನ್ನಿಹಿತ ಹಿಂಸಾಚಾರಕ್ಕೆ ಪ್ರಚೋದನೆ ನೀಡುತ್ತದೆ ಎಂದು ಹೇಳಿತ್ತು.

ಟ್ವಿಟರ್ ಕೆಲವು ಖಾತೆಗಳನ್ನು ಬ್ಲಾಕ್ ಮಾಡಿ ಅವುಗಳನ್ನು ಅನ್ ಬ್ಲಾಕ್ ಮಾಡಿದ್ದು ಐಟಿ ಸಚಿವಾಲಯವನ್ನು ಕೆರಳಿಸಿತ್ತು. ಸರ್ಕಾರ ತೆಗೆದುಹಾಕಲು ಹೇಳಿರುವ ಮಾಹಿತಿಗಳನ್ನು ತಮ್ಮ ವೇದಿಕೆ ಸಾಧ್ಯವಾದಷ್ಟು ತ್ವರಿತವಾಗಿ ಪರಿಶೀಲಿಸುತ್ತದೆ. ಕಂಪನಿಯ ಮೂಲಭೂತ ಮೌಲ್ಯಗಳು ಮತ್ತು ಸಾರ್ವಜನಿಕ ಸಂಭಾಷಣೆಯನ್ನು ರಕ್ಷಿಸುವ ಬದ್ಧತೆಗೆ ಅನುಗುಣವಾಗಿ ಸೂಕ್ತ ಕ್ರಮ ತೆಗೆದುಕೊಳ್ಳುತ್ತದೆ ಎಂದು ಟ್ವಿಟರ್ ಹೇಳಿತ್ತು .

ಇದನ್ನೂ  ಓದಿ: IPL 2021: ಟ್ವಿಟರ್​ನಲ್ಲಿ ಚೆನ್ನೈ ಸೂಪರ್​ಕಿಂಗ್ಸ್​ ಎಡವಟ್ಟು; Well Payed KKR ಎಂದ ಧೋನಿ ಟೀಂ!

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!