ಕಲ್ಕಿ‌ ಆಶ್ರಮದಲ್ಲಿ ಐಟಿ ದಾಳಿ ಅಂತ್ಯ, ಇಲ್ಲಿದೆ ಫೈನಲ್ ಟ್ಯಾಲಿ

ಹೈದ್ರಾಬಾದ್: ಕಳೆದ 5 ದಿನಗಳಿಂದ ಕಲ್ಕಿ ಆಶ್ರಮಕ್ಕೆ ಸಂಬಂಧಿಸಿದ ವಿವಿಧ ಶಾಖೆಗಳ‌ ಮೇಲಿನ ಐಟಿ ದಾಳಿ ಇಂದು ಮುಕ್ತಾಯವಾಗಿದೆ. 4 ಸಾವಿರ ಎಕರೆ‌ ಜಮೀನು ಅಕ್ರಮವಾಗಿ ಖರೀದಿ ಮಾಡಿರುವುದು ಹಾಗೂ 800 ಕೋಟಿಗೂ ಅಧಿಕ ಹಣ ಸಂಗ್ರಹಣೆ ಮಾಡಿರುವ ಬಗ್ಗೆ‌ ದಾಖಲೆಗಳು ಪತ್ತೆಯಾಗಿವೆ. ಐಟಿ ದಾಳಿ ವೇಳೆ ಸ್ವಯಂ ಘೋಷಿತ ದೇವ ಮಾನವ ಕಲ್ಕಿಯ ಕೋಟಿ ಕೋಟಿ ಅಕ್ರಮ ಆಸ್ತಿ ಬಯಲಾಗಿದೆ. ಕಲ್ಕಿಯ ಆಶ್ರಮದ ಮೇಲೆ ನಡೆದ ಐಟಿ ದಾಳಿ ವೇಳೆ ಬರೋಬ್ಬರಿ 26 ಕೋಟಿ ಮೌಲ್ಯದ […]

ಕಲ್ಕಿ‌ ಆಶ್ರಮದಲ್ಲಿ ಐಟಿ ದಾಳಿ ಅಂತ್ಯ, ಇಲ್ಲಿದೆ ಫೈನಲ್ ಟ್ಯಾಲಿ
ಸಾಧು ಶ್ರೀನಾಥ್​

Updated on: Oct 21, 2019 | 6:28 PM

ಹೈದ್ರಾಬಾದ್: ಕಳೆದ 5 ದಿನಗಳಿಂದ ಕಲ್ಕಿ ಆಶ್ರಮಕ್ಕೆ ಸಂಬಂಧಿಸಿದ ವಿವಿಧ ಶಾಖೆಗಳ‌ ಮೇಲಿನ ಐಟಿ ದಾಳಿ ಇಂದು ಮುಕ್ತಾಯವಾಗಿದೆ. 4 ಸಾವಿರ ಎಕರೆ‌ ಜಮೀನು ಅಕ್ರಮವಾಗಿ ಖರೀದಿ ಮಾಡಿರುವುದು ಹಾಗೂ 800 ಕೋಟಿಗೂ ಅಧಿಕ ಹಣ ಸಂಗ್ರಹಣೆ ಮಾಡಿರುವ ಬಗ್ಗೆ‌ ದಾಖಲೆಗಳು ಪತ್ತೆಯಾಗಿವೆ.

ಐಟಿ ದಾಳಿ ವೇಳೆ ಸ್ವಯಂ ಘೋಷಿತ ದೇವ ಮಾನವ ಕಲ್ಕಿಯ ಕೋಟಿ ಕೋಟಿ ಅಕ್ರಮ ಆಸ್ತಿ ಬಯಲಾಗಿದೆ. ಕಲ್ಕಿಯ ಆಶ್ರಮದ ಮೇಲೆ ನಡೆದ ಐಟಿ ದಾಳಿ ವೇಳೆ ಬರೋಬ್ಬರಿ 26 ಕೋಟಿ ಮೌಲ್ಯದ 88 ಕೆಜಿ ಚಿನ್ನ, ಡಾಲರ್ ರೂಪದಲ್ಲಿದ್ದ 18 ಕೋಟಿ ಮೌಲ್ಯದ ವಿದೇಶಿ ಕರೆನ್ಸಿ, ಸುಮಾರು 5 ಕೋಟಿ ಮೌಲ್ಯದ 1,271 ಕ್ಯಾರೆಟ್​ ವಜ್ರವನ್ನು ಎರಡು ದಿನಗಳ ಹಿಂದಷ್ಟೇ ಐಟಿ ಅಧಿಕಾರಿಗಳು ಜಪ್ತಿ ಮಾಡಿದ್ದರು.

ಕೋಟ್ಯಂತರ ರೂಪಾಯಿ ತೆರಿಗೆ ವಂಚಿಸಲಾಗಿದೆ ಅನ್ನೋ ಮಾಹಿತಿ ಮೇರೆಗೆ ಆಂಧ್ರದ ವರದೈಪಾಲಂ, ಚೆನ್ನೈ, ಹೈದ್ರಾಬಾದ್, ತೆಲಂಗಾಣ ಹಾಗೂ ಬೆಂಗಳೂರಿನ ಒಟ್ಟು 40 ಸ್ಥಳಗಳಲ್ಲಿ ಬುಧವಾರದಿಂದ ಐಟಿ ಶೋಧ ನಡೆಯುತ್ತಿತ್ತು.

Published On - 5:53 pm, Mon, 21 October 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us