AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಟಿ ದಾಳಿಗಳು ಲಖಿಂಪುರ್ ಖೇರಿ ಘಟನೆಯನ್ನು ಟೀಕಿಸಿದ್ದರ ಪರಿಣಾಮವಾಗಿರಬಹುದು: ಶರದ್ ಪವಾರ್

Sharad Pawar: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಕೆಲವು ರಿಯಲ್ ಎಸ್ಟೇಟ್ ಡೆವಲಪರ್‌ಗಳ ಕುಟುಂಬ ಸದಸ್ಯರಿಗೆ ಸಂಬಂಧಿಸಿದ ಕೆಲವು ವ್ಯವಹಾರಗಳ ಮೇಲೆ ತೆರಿಗೆ ವಂಚನೆ ಆರೋಪದ ಮೇಲೆ ಐಟಿ ಇಲಾಖೆ ಶುಕ್ರವಾರ ದಾಳಿ ನಡೆಸಿದೆ

ಐಟಿ ದಾಳಿಗಳು ಲಖಿಂಪುರ್ ಖೇರಿ ಘಟನೆಯನ್ನು ಟೀಕಿಸಿದ್ದರ ಪರಿಣಾಮವಾಗಿರಬಹುದು: ಶರದ್ ಪವಾರ್
ಶರದ್ ಪವಾರ್
TV9 Web
| Edited By: |

Updated on: Oct 08, 2021 | 5:05 PM

Share

ಪುಣೆ: ತನ್ನ ಸೋದರಳಿಯ ಅಜಿತ್ ಪವಾರ್ ಅವರ ಕುಟುಂಬ ಸದಸ್ಯರೊಂದಿಗೆ ಸಂಬಂಧ ಹೊಂದಿರುವ ವಿವಿಧ ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಇಲಾಖೆಯ ದಾಳಿಗಳು ತನ್ನ ಮತ್ತು ಮಹಾರಾಷ್ಟ್ರ ಸರ್ಕಾರದಿಂದ ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ನಡೆದ ಹಿಂಸಾಚಾರಕ್ಕೆ ಕೇಂದ್ರದ ಪ್ರತಿಕ್ರಿಯೆಯಾಗಿರಬಹುದು ಎಂದು ಎನ್‌ಸಿಪಿ ವರಿಷ್ಠ ಶರದ್ ಪವಾರ್ ಹೇಳಿದ್ದಾರೆ. ಬಾರಾಮತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶರದ್ ಪವಾರ್ ಹಣಕಾಸಿನ ವಹಿವಾಟುಗಳಿಗೆ ಸಂಬಂಧವಿಲ್ಲದ ವ್ಯಕ್ತಿಗಳ ವಿಚಾರಣೆಯನ್ನು “ಅಧಿಕಾರದ ಮಿತಿ ಮೀರಿದ ಬಳಕೆ” ಎಂದು ಹೇಳಿದರು. ರಾಜ್ಯದಲ್ಲಿ ಐಟಿ ದಾಳಿ ಕೇಂದ್ರ ಸರ್ಕಾರದ ಪ್ರತಿಕ್ರಿಯೆಯಾಗಿದೆ ಎಂದು ಅವರು ಹೇಳಿದರು. “ರೈತರ ಹತ್ಯೆಯಾದ ಉತ್ತರಪ್ರದೇಶದ ಲಖಿಂಪುರ್ ಖೇರಿ ಘಟನೆಯನ್ನು ನಾನು ತೀವ್ರವಾಗಿ ಖಂಡಿಸಿದ್ದೇನೆ. ನಾನು ಅದನ್ನು ಜಲಿಯನ್ ವಾಲಾಬಾಗ್ ಹತ್ಯಾಕಾಂಡಕ್ಕೆ ಹೋಲಿಸಿದ್ದೇನೆ. ಅಲ್ಲದೆ, ರಾಜ್ಯ ಸರ್ಕಾರ ತನ್ನ ಕ್ಯಾಬಿನೆಟ್ ಸಭೆಯಲ್ಲಿ ಇದನ್ನು ಖಂಡಿಸಿದೆ.ಇದನ್ನು ತಳ್ಳಿಹಾಕಲು ಸಾಧ್ಯವಿಲ್ಲ ರಾಜ್ಯದ ವಿವಿಧ ಸಂಸ್ಥೆಗಳ ವಿರುದ್ಧ ಐಟಿ ಇಲಾಖೆಯ ಕ್ರಮವು ಈ ಘಟನೆಯ ನಮ್ಮ ತೀವ್ರ ಖಂಡನೆಗೆ ಪ್ರತಿಕ್ರಿಯೆಯಾಗಿದೆ ಎಂದು ಪವಾರ್ ಹೇಳಿದರು.

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಕೆಲವು ರಿಯಲ್ ಎಸ್ಟೇಟ್ ಡೆವಲಪರ್‌ಗಳ ಕುಟುಂಬ ಸದಸ್ಯರಿಗೆ ಸಂಬಂಧಿಸಿದ ಕೆಲವು ವ್ಯವಹಾರಗಳ ಮೇಲೆ ತೆರಿಗೆ ವಂಚನೆ ಆರೋಪದ ಮೇಲೆ ಐಟಿ ಇಲಾಖೆ ಶುಕ್ರವಾರ ದಾಳಿ ನಡೆಸಿದೆ. ಡಿಬಿ ರಿಯಾಲ್ಟಿ, ಶಿವಾಲಿಕ್, ಜಾರಂದೇಶ್ವರ್ ಸಹಕಾರಿ ಸಕ್ಕರೆ ಕಾರ್ಖಾನಾ (ಜಾರಂದೇಶ್ವರ್ ಎಸ್‌ಎಸ್‌ಕೆ) ಮತ್ತು ಅಜಿತ್ ಪವಾರ್ ಸಹೋದರಿಯರಿಗೆ ಸಂಬಂಧಿಸಿದ ವ್ಯವಹಾರಗಳನ್ನು ಐಟಿ ಪರಿಶೀಲಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಅಜಿತ್ ಪವಾರ್ ಸಹೋದರಿಯರ ನಿವಾಸಗಳ ಮೇಲೆ ಐಟಿ ದಾಳಿಗಳ ಕುರಿತು ಕೇಳಿದಾಗ, ಮಾಜಿ ಕೇಂದ್ರ ಸಚಿವರು ಇದನ್ನು “ಅಧಿಕಾರದ ಮಿತಿಮೀರಿದ ಬಳಕೆ ” ಎಂದು ಕರೆದರು.

ಸಂಸ್ಥೆಗಳು ಮತ್ತು ಅವರ ಹಣಕಾಸಿನ ವಹಿವಾಟುಗಳಿಗೆ ಸಂಬಂಧಿಸಿದ ಮತ್ತು ಜವಾಬ್ದಾರಿಯುತ ಜನರನ್ನು ವಿಚಾರಿಸಲು ಐಟಿ ಇಲಾಖೆಯು ತನ್ನ ಅಧಿಕಾರವನ್ನು ಚಲಾಯಿಸುವ ಹಕ್ಕನ್ನು ಹೊಂದಿದೆ. ಆದರೆ ಹಣಕಾಸಿನ ವಹಿವಾಟುಗಳಿಗೆ ಸಂಬಂಧಿಸದ ವ್ಯಕ್ತಿಗಳ ವಿಚಾರಣೆಯು ಅಧಿಕಾರದ ಮಿತಿ ಮೀರಿದ ಬಳಕೆಯಾಗಿದೆ ಮತ್ತು ಜನರು ಯಾವಾಗ ಅಂಥ ಸ್ಪಷ್ಟವಾದ ಅಧಿಕಾರವನ್ನು ಸ್ವೀಕರಿಸುತ್ತಾರೆ ಎಂಬುದನ್ನು ಅವರು ನಿರ್ಧರಿಸಬೇಕು, “ಎಂದು ಪವಾರ್ ಹೇಳಿದ್ದಾರೆ.

ಕಳೆದ ವಾರ ಮುಂಬೈ ಕರಾವಳಿಯಲ್ಲಿ ಕ್ರೂಸ್ ಹಡಗಿನಿಂದ ಡ್ರಗ್ಸ್ ವಶಪಡಿಸಿಕೊಳ್ಳುವ ಬಗ್ಗೆ ಮಾತನಾಡಿದ ಪವಾರ್, ನಾರ್ಕೋಟಿಕ್ ಕಂಟ್ರೋಲ್ ಬ್ಯೂರೋ (ಎನ್ ಸಿಬಿ) ಗೆ ಸೇರದ ಕೆಲವರು ಪ್ರಕರಣದ ಆರೋಪಿಗಳನ್ನು ದೂರವಿಟ್ಟು ಮಾತನಾಡುತ್ತಿರುವುದನ್ನು ನೋಡಿದ್ದೇನೆ. ಇದು ಕೇಂದ್ರ ಸಂಸ್ಥೆಯ ಕೆಲಸದಲ್ಲಿ ರಾಜಕೀಯ ಪಕ್ಷದ ಹಸ್ತಕ್ಷೇಪ ಎಂದಿದ್ದಾರೆ ಪವಾರ್.

ಅವರ ಪಕ್ಷವು ಈ ಹಿಂದೆ ಎನ್ ಸಿಬಿ ತಂಡದೊಂದಿಗೆ ಇಬ್ಬರು ವ್ಯಕ್ತಿಗಳ ಉಪಸ್ಥಿತಿಯನ್ನು ಪ್ರಶ್ನಿಸಿತ್ತು ಮತ್ತು ಅವರಲ್ಲಿ ಒಬ್ಬರು ಬಿಜೆಪಿ ಸದಸ್ಯರು ಎಂದು ಆರೋಪಿಸಿತ್ತು. “ಆ ಪಕ್ಷದ ಕಾರ್ಯಕರ್ತರು ಸಾಕ್ಷಿಗಳಾಗಿದ್ದರು ಎಂದು ಹೇಳಲಾಗಿದೆ. ದಾಳಿಯ ಸಮಯದಲ್ಲಿ ಅಥವಾ ನ್ಯಾಯಾಲಯದಲ್ಲಿ ಸಾಕ್ಷಿಗಳು ಇರುವುದು ತಪ್ಪಲ್ಲ, ಆದರೆ ಎನ್‌ಸಿಬಿ ಕಚೇರಿಗೆ ಆರೋಪಿಗಳನ್ನು ಕರೆದೊಯ್ಯುವಲ್ಲಿ ಅವರ ಪಾತ್ರವು ಪಕ್ಷದ ಜನರು ಏಜೆನ್ಸಿ ಕೆಲಸದಲ್ಲಿ ಭಾಗಿಯಾಗಿರುವುದನ್ನು ಎತ್ತಿ ತೋರಿಸುತ್ತದೆ.” ಎಂದು ಪವಾರ್ ಆರೋಪಿಸಿದ್ದಾರೆ.

ಇದನ್ನೂ ಓದಿ: Air India: ಟಾಟಾ ಸನ್ಸ್​ ತೆಕ್ಕೆಗೆ ಏರ್​ ಇಂಡಿಯಾ: ಸರ್ಕಾರದಿಂದ ಅಧಿಕೃತ ಘೋಷಣೆ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!