AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಟಿ ದಾಳಿ: ಮಧ್ಯಪ್ರದೇಶದ ಉದ್ಯಮಿ ಮನೆಯಿಂದ ₹ 8 ಕೋಟಿ ನಗದು ವಶ, ನೀರಿನ ಟ್ಯಾಂಕ್‌ನಲ್ಲಿ ಪತ್ತೆಯಾಗಿದ್ದು ₹1 ಕೋಟಿ

ರಾಯ್ ಕುಟುಂಬದಿಂದ ₹ 8 ಕೋಟಿ ನಗದನ್ನು ಆದಾಯ ತೆರಿಗೆ ಇಲಾಖೆ ವಶಪಡಿಸಿಕೊಂಡಿದ್ದು, ನೀರಿನ ಪಾತ್ರೆಯಲ್ಲಿ ತುಂಬಿದ್ದ ₹ 1 ಕೋಟಿ ನಗದನ್ನು ಒಳಗೊಂಡ ಬ್ಯಾಗ್‌ನ ಜೊತೆಗೆ ಮೂರು ಕೆಜಿ ಚಿನ್ನಾಭರಣವನ್ನು ಜಪ್ತಿ ಮಾಡಲಾಗಿದೆ’ ಎಂದು ಜಂಟಿ ಆಯುಕ್ತ ಮುನ್‌ಮುನ್ ಶರ್ಮಾ ತಿಳಿಸಿದ್ದಾರೆ.

ಐಟಿ ದಾಳಿ: ಮಧ್ಯಪ್ರದೇಶದ ಉದ್ಯಮಿ ಮನೆಯಿಂದ ₹ 8 ಕೋಟಿ ನಗದು ವಶ, ನೀರಿನ ಟ್ಯಾಂಕ್‌ನಲ್ಲಿ ಪತ್ತೆಯಾಗಿದ್ದು ₹1 ಕೋಟಿ
ನೋಟಿನ ಕಂತೆಗಳನ್ನು ಒಣಗಿಸುತ್ತಿರುವ ಐಟಿ ಅಧಿಕಾರಿಗಳು
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jan 09, 2022 | 9:51 AM

ಭೋಪಾಲ್: ಮಧ್ಯಪ್ರದೇಶದ (Madhya Pradesh)ದಾಮೋಹ್ ಜಿಲ್ಲೆಯಲ್ಲಿ ಉದ್ಯಮಿ ಶಂಕರ್ ರಾಯ್ (Shankar Rai) ಮತ್ತು ಅವರ ಕುಟುಂಬದ ಮೇಲೆ ಗುರುವಾರ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ  (IT Riad) ನಡೆಸಿದ್ದು, ₹ 8 ಕೋಟಿಗೂ ಅಧಿಕ ಮೌಲ್ಯದ ನಗದು ವಶಪಡಿಸಿಕೊಂಡಿದ್ದಾರೆ. ಮನೆಯಡಿಯಲ್ಲಿರುವ ನೀರಿನ ತೊಟ್ಟಿಯಲ್ಲಿ ಬಚ್ಚಿಟ್ಟಿದ್ದ ಚೀಲದಲ್ಲಿ ₹1 ಕೋಟಿ ನಗದು ಪತ್ತೆಯಾಗಿದೆ. ನೀರಿನಲ್ಲಿ ಒದ್ದೆಯಾಗಿರುವ ನೋಟುಗಳನ್ನುಅಧಿಕಾರಿಗಳು ಒಣಗಿಸುತ್ತಿರುವ ದೃಶ್ಯಗಳು ವಿಡಿಯೊದಲ್ಲಿದೆ.  ನಗದು ಅಲ್ಲದೆ ಸುಮಾರು ₹ 5 ಕೋಟಿ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿರುವುದಾಗಿ ಎನ್​​ಡಿಟಿವಿ ವರದಿ ಮಾಡಿದೆ. ‘ರಾಯ್ ಕುಟುಂಬದಿಂದ ₹ 8 ಕೋಟಿ ನಗದನ್ನು ಆದಾಯ ತೆರಿಗೆ ಇಲಾಖೆ ವಶಪಡಿಸಿಕೊಂಡಿದ್ದು, ನೀರಿನ ಪಾತ್ರೆಯಲ್ಲಿ ತುಂಬಿದ್ದ ₹ 1 ಕೋಟಿ ನಗದನ್ನು ಒಳಗೊಂಡ ಬ್ಯಾಗ್‌ನ ಜೊತೆಗೆ ಮೂರು ಕೆಜಿ ಚಿನ್ನಾಭರಣವನ್ನು ಜಪ್ತಿ ಮಾಡಲಾಗಿದೆ’ ಎಂದು ಜಂಟಿ ಆಯುಕ್ತ ಮುನ್‌ಮುನ್ ಶರ್ಮಾ (Munmun Sharma) ತಿಳಿಸಿದ್ದಾರೆ. ಜಬಲ್‌ಪುರದ ಆದಾಯ ತೆರಿಗೆ ಇಲಾಖೆಯವರು ತೆರಿಗೆ ದಾಳಿಯ ನೇತೃತ್ವ ವಹಿಸಿದ್ದರು. ರಾಯ್ ಅವರು ಕಾಂಗ್ರೆಸ್ ಬೆಂಬಲದೊಂದಿಗೆ ದಾಮೋಹ್ ನಗರ ಪಾಲಿಕೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರೆ, ಅವರ ಸಹೋದರ ಕಮಲ್ ರಾಯ್ ಈ ಹಿಂದೆ ಬಿಜೆಪಿ ಬೆಂಬಲದೊಂದಿಗೆ ದಾಮೋಹ್ ನಗರ ಪಾಲಿಕೆ ಉಪಾಧ್ಯಕ್ಷರಾಗಿದ್ದರು.

ಗುರುವಾರ ಬೆಳಗ್ಗೆ 5 ಗಂಟೆಗೆ ಆರಂಭವಾದ ದಾಳಿ 39 ಗಂಟೆಗಳ ಕಾಲ ಮುಂದುವರಿಯಿತು. ಶಂಕರ್ ರಾಯ್ ಕುಟುಂಬದ ಒಡೆತನದ ಹತ್ತಕ್ಕೂ ಹೆಚ್ಚು ನಿವೇಶನಗಳ ಮೇಲೆ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಯ್ ಅವರ ಕುಟುಂಬವು ನೌಕರರ ಹೆಸರಿನಲ್ಲಿ ಸುಮಾರು ಮೂರು ಡಜನ್ ಬಸ್‌ಗಳನ್ನು ಓಡಿಸುತ್ತಿದೆ ಎಂದು ತೆರಿಗೆ ಇಲಾಖೆ ಬಹಿರಂಗಪಡಿಸಿದೆ.

ಮಧ್ಯಪ್ರದೇಶ ಅಥವಾ ಇನ್ನಾವುದೇ ಸ್ಥಳದಲ್ಲಿರುವ ರಾಯ್ ಕುಟುಂಬದ ಆಸ್ತಿ ಬಗ್ಗೆ ಹೆಚ್ಚಿನ ಮಾಹಿತಿ ನೀಡುವವರಿಗೆ ₹ 10,000 ಬಹುಮಾನವನ್ನು ಇಲಾಖೆ ಘೋಷಿಸಿದೆ.  ಕಾರ್ಯಾಚರಣೆ ಮುಗಿದ ನಂತರ, ಜಂಟಿ ಆಯುಕ್ತರು, “ಭೌತಿಕ ದಾಳಿ ಮುಗಿದಿದೆ ಮತ್ತು ಭೋಪಾಲ್‌ನಲ್ಲಿ ರಾಯ್ ಕುಟುಂಬದಿಂದ  ವಶಪಡಿಸಿಕೊಂಡಿರುವ ದಾಖಲೆಗಳ ಆಧಾರದ ಮೇಲೆ ತನಿಖೆ ಮುಂದುವರಿಯುತ್ತದೆ” ಎಂದು ಹೇಳಿದರು.

“ಇಲಾಖೆಯು ಈಗ ವಶಪಡಿಸಿಕೊಂಡ ದಾಖಲೆಗಳು ಮತ್ತು ಬೇನಾಮಿ ಆಸ್ತಿಗಳನ್ನು ತನಿಖೆ ಮಾಡುತ್ತದೆ. ಆದ್ದರಿಂದ, ನಾವು ಅಂತಿಮ ಅಂಕಿಅಂಶಕ್ಕಾಗಿ ಕಾಯಬೇಕಾಗಿದೆ” ಎಂದು ಜಂಟಿ ಆಯುಕ್ತರು ಹೇಳಿದರು. 2019 ಜನವರಿಯಲ್ಲಿ ಪೂರ್ವ ಉತ್ತರ ಪ್ರದೇಶದ ಚಂದೌಲಿ ಕ್ಷೇತ್ರದ ಸಮಾಜವಾದಿ ಪಕ್ಷದ ಮಾಜಿ ಸಂಸದ ಜವಾಹರ್ ಜೈಸ್ವಾಲ್ನ್ನು ಉತ್ತರ ಪ್ರದೇಶ ಎಸ್‌ಟಿಎಫ್ ಸಂಜಯ್ ರಾಯ್ (ಶಂಕರ್ ರಾಯ್ ಅವರ ಸಹೋದರ) ಆವರಣದಿಂದ ಬಂಧಿಸಿತ್ತು.

ಇದನ್ನೂ ಓದಿ:  Fatima Sheikh ಮುಸ್ಲಿಂ ಸಮುದಾಯದ ಮೊದಲ ಶಿಕ್ಷಕಿ ಫಾತಿಮಾ ಶೇಖ್​​ಗೆ ಗೂಗಲ್ ಡೂಡಲ್ ಗೌರವ

Published On - 9:38 am, Sun, 9 January 22

Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್