AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBC: ಬಿಬಿಸಿ ಕಚೇರಿ ಮೇಲೆ ಐಟಿ ಶೋಧ, ಎರಡನೇ ದಿನವೂ ಮುಂದುವರಿಕೆ; ಕಾಗದ ರೂಪದ ದಾಖಲೆಗಳ ಇ-ಕಾಪಿ ತಯಾರಿಕೆ

IT Survey On BBC Office: ತೆರಿಗೆ ವಂಚನೆ ಆರೋಪದ ಮೇಲೆ ಲಂಡನ್ ಮೂಲದ ಬಿಬಿಸಿ ಮಾಧ್ಯಮ ಸಂಸ್ಥೆಯ ದೆಹಲಿ ಕಚೇರಿಯಲ್ಲಿ ಐಟಿ ಅಧಿಕಾರಿಗಳ ತಂಡ ಬುಧವಾರವೂ ಪರಿಶೀಲನೆಗಳನ್ನು ಕೈಗೊಂಡಿದೆ. ಇಂದು ಕೆಲ ಕಾಗದಪತ್ರಗಳ ಇ-ಪ್ರತಿ ತಯಾರಿಸುವ ಕೆಲಸ ಮಾಡಲಾಗಿದೆ.

BBC: ಬಿಬಿಸಿ ಕಚೇರಿ ಮೇಲೆ ಐಟಿ ಶೋಧ, ಎರಡನೇ ದಿನವೂ ಮುಂದುವರಿಕೆ; ಕಾಗದ ರೂಪದ ದಾಖಲೆಗಳ ಇ-ಕಾಪಿ ತಯಾರಿಕೆ
ಬಿಬಿಸಿ ಕಚೇರಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Feb 15, 2023 | 2:18 PM

Share

ನವದೆಹಲಿ: ಬಿಬಿಸಿ ಕಚೇರಿಯಲ್ಲಿ ಐಟಿ ಅಧಿಕಾರಿಗಳ ನಡೆಸುತ್ತಿರುವ ಶೋಧ ಕಾರ್ಯಾಚರಣೆ (IT Survey In BBC Office) ಎರಡನೇ ದಿನವೂ ನಡೆದಿದೆ. ಬುಧವಾರ ಐಟಿ ಅಧಿಕಾರಿಗಳು ಬಿಬಿಸಿ ಕಚೇರಿಯಲ್ಲಿರುವ ಹಣಕಾಸು ದತ್ತಾಂಶದ ಕಾಗದಪತ್ರಗಳ ಇಪ್ರತಿಯನ್ನು ತಯಾರಿಸಿದೆ ಎಂದು ಹೇಳಲಾಗುತ್ತಿದೆ.

ಬಿಬಿಸಿಯಿಂದ ತೆರಿಗೆ ವಂಚನೆ ಆಗಿರುವ ಆರೋಪದ ಹಿನ್ನೆಲೆಯಲ್ಲಿ ಐಟಿ ಇಲಾಖೆ ಈ ಕ್ರಮ ಕೈಗೊಂಡಿರುವುದು ತಿಳಿದುಬಂದಿದೆ. ನಿನ್ನೆ ಬೆಳಗ್ಗೆ 11:30ಗಂಟೆಗೆ ನವದೆಹಲಿ ಮತ್ತು ಮುಂಬೈನಲ್ಲಿರುವ ಬಿಬಿಸಿ ಕಚೇರಿಗಳಿಗೆ ಐಟಿ ಅಧಿಕಾರಿಗಳ ತಂಡಗಳು ಹೋಗಿ ಪರಿಶೀಲನೆ ಆರಂಭಿಸಿದ್ದವು. ಆರಂಭದಲ್ಲಿ ಇದು ಐಟಿ ರೇಡ್ ಎಂಬ ಮಾಹಿತಿ ಮಾಧ್ಯಮಗಳಿಗೆ ಬಂದಿತ್ತು. ಆದರೆ ಇದು ರೇಡ್ ಅಲ್ಲ, ಕೇವಲ ಸರ್ವೆ ಮಾತ್ರ ಮಾಡಲಾಗುತ್ತಿದೆ ಎಂದು ಐಟಿ ಇಲಾಖೆ ಸ್ಪಷ್ಟಪಡಿಸಿತು.

2012ರಿಂದ ಇಲ್ಲಿಯವರೆಗೆ ಬಿಬಿಸಿ ಕಚೇರಿಯಲ್ಲಿ ದಾಖಲಾದ ಹಣಕಾಸು ವಿವರವನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಕಚೇರಿಯಲ್ಲಿದ್ದ ಮೊಬೈಲ್​ಗಳ ದತ್ತಾಂಶಗಳನ್ನು ಬೇರೆ ಮೊಬೈಲ್​ಗೆ ನಕಲು ಮಾಡಿಕೊಳ್ಳಲಾಗಿದೆ.

ಬಿಬಿಸಿ ಅಂಗ ಸಂಸ್ಥೆಗಳ ವರ್ಗಾವಣೆ ವೆಚ್ಚ ಮತ್ತು ಅಂತಾರಾಷ್ಟ್ರೀಯ ತೆರಿಗೆ ಪಾವತಿಯಲ್ಲಿ ಅಕ್ರಮಗಳು ನಡೆದಿವೆ ಎಂಬುದು ಆರೋಪ. ಲಂಡನ್ ಮೂಲದ ಬಿಬಿಸಿ ಸಂಸ್ಥೆಗೆ ಈ ಪ್ರಕರಣದಲ್ಲಿ ಹಿಂದೆ ಕೆಲ ಬಾರಿ ನೋಟೀಸ್ ಜಾರಿ ಮಾಡಲಾಗಿತ್ತು. ಆದರೆ ಅದಕ್ಕೆ ಸಂಸ್ಥೆ ಸಹಕರಿಸಿರಲಿಲ್ಲ. ಹೀಗಾಗಿ, ಕಚೇರಿಗಳಿಗೆ ಹೋಗಿ ಐಟಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುವ ಕೆಲಸ ಮಾಡಿದ್ದಾರೆ.

ಪ್ರತೀಕಾರ ಕ್ರಮ ಎಂದು ಟೀಕೆ

ಕೆಲ ವಾರಗಳ ಹಿಂದೆ ಬಿಬಿಸಿ ಗುಜರಾತ್ ಗಲಭೆ ಘಟನೆಗಳ ಬಗ್ಗೆ ಎರಡು ಸಂಚಿಕೆಯ ಸಾಕ್ಷ್ಯಚಿತ್ರಗಳನ್ನು ಪ್ರಸಾರ ಮಾಡಿತ್ತು. ಗಲಭೆ ಘಟನೆಗೆ ಸರ್ಕಾರ ಹೇಗೆ ಪ್ರಚೋದನೆ ಕೊಟ್ಟಿತು, ಆಗ ಸಿಎಂ ಆಗಿದ್ದ ನರೇಂದ್ರ ಮೋದಿ ಪಾತ್ರ ಏನಿತ್ತು ಎಂಬಿತ್ಯಾದಿ ಸಂಗತಿಯನ್ನು ಕೆಲ ಸಾಕ್ಷಿಗಳನ್ನು ಉಲ್ಲೇಖಿಸಿ ಡಾಕ್ಯುಮೆಂಟರಿ ಮಾಡಲಾಗಿತ್ತು.

ಈ ಸಾಕ್ಷ್ಯಚಿತ್ರವನ್ನು ಸರ್ಕಾರ ನಿಷೇಧಿಸಿದೆ. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಆಗಿದ್ದ ಎಲ್ಲಾ ವಿಡಿಯೋಗಳನ್ನು ತೆಗೆದುಹಾಕಲಾಗಿದೆ. ವಿದೇಶಗಳಲ್ಲಿ ಮಾತ್ರ ಈ ಸಾಕ್ಷ್ಯಚಿತ್ರವನ್ನು ನೋಡಬಹುದು. ಜೆಎನ್​ಯು ಮೊದಲಾದ ಕೆಲ ಕಡೆ ಡಾಕ್ಯುಮೆಂಟರಿಯನ್ನು ಪ್ರದರ್ಶಿಸಿದವರ ಮೇಲೆ ಸರ್ಕಾರ ಕ್ರಮ ಕೂಡ ಕೈಗೊಂಡಿತು.

ಗುಜರಾತ್ ಗಲಭೆ ಘಟನೆ ವಿಚಾರದಲ್ಲಿ ನರೇಂದ್ರ ಮೋದಿ ಪಾತ್ರ ಇಲ್ಲ ಎಂದು ಸರ್ವೋಚ್ಚ ನ್ಯಾಯಾಲಯವೇ ಕ್ಲೀನ್ ಚಿಟ್ ಕೊಟ್ಟಿದೆ. ಅದರೂ ಕೂಡ ಪ್ರಧಾನಿಯ ತೇಜೋವಧೆ ಮಾಡುವ ಪಿತೂರಿಯೊಂದಿಗೆ ಈ ಸಾಕ್ಷ್ಯಚಿತ್ರವನ್ನು ಚುನಾವಣಾ ಸಮಯದಲ್ಲಿ ಬಿಡುಗಡೆ ಮಾಡಲಾಗಿದೆ ಎಂಬುದು ಸರ್ಕಾರದ ಸಮರ್ಥಕರ ವಾದ.

ಬಿಬಿಸಿ ಡಾಕ್ಯುಮೆಂಟರಿ ಬಿಡುಗಡೆಗೆ ಪ್ರತಿಯಾಗಿ ಸರ್ಕಾರ ಪ್ರತೀಕಾರ ಕ್ರಮವಾಗಿ ಕಚೇರಿಗಳ ಮೇಲೆ ದಾಳಿ ಮಾಡಿಸಿದೆ ಎಂದು ವಿಪಕ್ಷಗಳು ಟೀಕಿಸಿವೆ.

Published On - 2:18 pm, Wed, 15 February 23

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!