Sign In

By signing in or creating an account, you agree with Associated Broadcasting Company's Terms & Conditions and Privacy Policy.

BBC: ಬಿಬಿಸಿ ಕಚೇರಿ ಮೇಲೆ ಐಟಿ ಶೋಧ, ಎರಡನೇ ದಿನವೂ ಮುಂದುವರಿಕೆ; ಕಾಗದ ರೂಪದ ದಾಖಲೆಗಳ ಇ-ಕಾಪಿ ತಯಾರಿಕೆ

IT Survey On BBC Office: ತೆರಿಗೆ ವಂಚನೆ ಆರೋಪದ ಮೇಲೆ ಲಂಡನ್ ಮೂಲದ ಬಿಬಿಸಿ ಮಾಧ್ಯಮ ಸಂಸ್ಥೆಯ ದೆಹಲಿ ಕಚೇರಿಯಲ್ಲಿ ಐಟಿ ಅಧಿಕಾರಿಗಳ ತಂಡ ಬುಧವಾರವೂ ಪರಿಶೀಲನೆಗಳನ್ನು ಕೈಗೊಂಡಿದೆ. ಇಂದು ಕೆಲ ಕಾಗದಪತ್ರಗಳ ಇ-ಪ್ರತಿ ತಯಾರಿಸುವ ಕೆಲಸ ಮಾಡಲಾಗಿದೆ.

BBC: ಬಿಬಿಸಿ ಕಚೇರಿ ಮೇಲೆ ಐಟಿ ಶೋಧ, ಎರಡನೇ ದಿನವೂ ಮುಂದುವರಿಕೆ; ಕಾಗದ ರೂಪದ ದಾಖಲೆಗಳ ಇ-ಕಾಪಿ ತಯಾರಿಕೆ
ಬಿಬಿಸಿ ಕಚೇರಿ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Feb 15, 2023 | 2:18 PM

ನವದೆಹಲಿ: ಬಿಬಿಸಿ ಕಚೇರಿಯಲ್ಲಿ ಐಟಿ ಅಧಿಕಾರಿಗಳ ನಡೆಸುತ್ತಿರುವ ಶೋಧ ಕಾರ್ಯಾಚರಣೆ (IT Survey In BBC Office) ಎರಡನೇ ದಿನವೂ ನಡೆದಿದೆ. ಬುಧವಾರ ಐಟಿ ಅಧಿಕಾರಿಗಳು ಬಿಬಿಸಿ ಕಚೇರಿಯಲ್ಲಿರುವ ಹಣಕಾಸು ದತ್ತಾಂಶದ ಕಾಗದಪತ್ರಗಳ ಇಪ್ರತಿಯನ್ನು ತಯಾರಿಸಿದೆ ಎಂದು ಹೇಳಲಾಗುತ್ತಿದೆ.

ಬಿಬಿಸಿಯಿಂದ ತೆರಿಗೆ ವಂಚನೆ ಆಗಿರುವ ಆರೋಪದ ಹಿನ್ನೆಲೆಯಲ್ಲಿ ಐಟಿ ಇಲಾಖೆ ಈ ಕ್ರಮ ಕೈಗೊಂಡಿರುವುದು ತಿಳಿದುಬಂದಿದೆ. ನಿನ್ನೆ ಬೆಳಗ್ಗೆ 11:30ಗಂಟೆಗೆ ನವದೆಹಲಿ ಮತ್ತು ಮುಂಬೈನಲ್ಲಿರುವ ಬಿಬಿಸಿ ಕಚೇರಿಗಳಿಗೆ ಐಟಿ ಅಧಿಕಾರಿಗಳ ತಂಡಗಳು ಹೋಗಿ ಪರಿಶೀಲನೆ ಆರಂಭಿಸಿದ್ದವು. ಆರಂಭದಲ್ಲಿ ಇದು ಐಟಿ ರೇಡ್ ಎಂಬ ಮಾಹಿತಿ ಮಾಧ್ಯಮಗಳಿಗೆ ಬಂದಿತ್ತು. ಆದರೆ ಇದು ರೇಡ್ ಅಲ್ಲ, ಕೇವಲ ಸರ್ವೆ ಮಾತ್ರ ಮಾಡಲಾಗುತ್ತಿದೆ ಎಂದು ಐಟಿ ಇಲಾಖೆ ಸ್ಪಷ್ಟಪಡಿಸಿತು.

2012ರಿಂದ ಇಲ್ಲಿಯವರೆಗೆ ಬಿಬಿಸಿ ಕಚೇರಿಯಲ್ಲಿ ದಾಖಲಾದ ಹಣಕಾಸು ವಿವರವನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಕಚೇರಿಯಲ್ಲಿದ್ದ ಮೊಬೈಲ್​ಗಳ ದತ್ತಾಂಶಗಳನ್ನು ಬೇರೆ ಮೊಬೈಲ್​ಗೆ ನಕಲು ಮಾಡಿಕೊಳ್ಳಲಾಗಿದೆ.

ಬಿಬಿಸಿ ಅಂಗ ಸಂಸ್ಥೆಗಳ ವರ್ಗಾವಣೆ ವೆಚ್ಚ ಮತ್ತು ಅಂತಾರಾಷ್ಟ್ರೀಯ ತೆರಿಗೆ ಪಾವತಿಯಲ್ಲಿ ಅಕ್ರಮಗಳು ನಡೆದಿವೆ ಎಂಬುದು ಆರೋಪ. ಲಂಡನ್ ಮೂಲದ ಬಿಬಿಸಿ ಸಂಸ್ಥೆಗೆ ಈ ಪ್ರಕರಣದಲ್ಲಿ ಹಿಂದೆ ಕೆಲ ಬಾರಿ ನೋಟೀಸ್ ಜಾರಿ ಮಾಡಲಾಗಿತ್ತು. ಆದರೆ ಅದಕ್ಕೆ ಸಂಸ್ಥೆ ಸಹಕರಿಸಿರಲಿಲ್ಲ. ಹೀಗಾಗಿ, ಕಚೇರಿಗಳಿಗೆ ಹೋಗಿ ಐಟಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುವ ಕೆಲಸ ಮಾಡಿದ್ದಾರೆ.

ಪ್ರತೀಕಾರ ಕ್ರಮ ಎಂದು ಟೀಕೆ

ಕೆಲ ವಾರಗಳ ಹಿಂದೆ ಬಿಬಿಸಿ ಗುಜರಾತ್ ಗಲಭೆ ಘಟನೆಗಳ ಬಗ್ಗೆ ಎರಡು ಸಂಚಿಕೆಯ ಸಾಕ್ಷ್ಯಚಿತ್ರಗಳನ್ನು ಪ್ರಸಾರ ಮಾಡಿತ್ತು. ಗಲಭೆ ಘಟನೆಗೆ ಸರ್ಕಾರ ಹೇಗೆ ಪ್ರಚೋದನೆ ಕೊಟ್ಟಿತು, ಆಗ ಸಿಎಂ ಆಗಿದ್ದ ನರೇಂದ್ರ ಮೋದಿ ಪಾತ್ರ ಏನಿತ್ತು ಎಂಬಿತ್ಯಾದಿ ಸಂಗತಿಯನ್ನು ಕೆಲ ಸಾಕ್ಷಿಗಳನ್ನು ಉಲ್ಲೇಖಿಸಿ ಡಾಕ್ಯುಮೆಂಟರಿ ಮಾಡಲಾಗಿತ್ತು.

ಈ ಸಾಕ್ಷ್ಯಚಿತ್ರವನ್ನು ಸರ್ಕಾರ ನಿಷೇಧಿಸಿದೆ. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಆಗಿದ್ದ ಎಲ್ಲಾ ವಿಡಿಯೋಗಳನ್ನು ತೆಗೆದುಹಾಕಲಾಗಿದೆ. ವಿದೇಶಗಳಲ್ಲಿ ಮಾತ್ರ ಈ ಸಾಕ್ಷ್ಯಚಿತ್ರವನ್ನು ನೋಡಬಹುದು. ಜೆಎನ್​ಯು ಮೊದಲಾದ ಕೆಲ ಕಡೆ ಡಾಕ್ಯುಮೆಂಟರಿಯನ್ನು ಪ್ರದರ್ಶಿಸಿದವರ ಮೇಲೆ ಸರ್ಕಾರ ಕ್ರಮ ಕೂಡ ಕೈಗೊಂಡಿತು.

ಗುಜರಾತ್ ಗಲಭೆ ಘಟನೆ ವಿಚಾರದಲ್ಲಿ ನರೇಂದ್ರ ಮೋದಿ ಪಾತ್ರ ಇಲ್ಲ ಎಂದು ಸರ್ವೋಚ್ಚ ನ್ಯಾಯಾಲಯವೇ ಕ್ಲೀನ್ ಚಿಟ್ ಕೊಟ್ಟಿದೆ. ಅದರೂ ಕೂಡ ಪ್ರಧಾನಿಯ ತೇಜೋವಧೆ ಮಾಡುವ ಪಿತೂರಿಯೊಂದಿಗೆ ಈ ಸಾಕ್ಷ್ಯಚಿತ್ರವನ್ನು ಚುನಾವಣಾ ಸಮಯದಲ್ಲಿ ಬಿಡುಗಡೆ ಮಾಡಲಾಗಿದೆ ಎಂಬುದು ಸರ್ಕಾರದ ಸಮರ್ಥಕರ ವಾದ.

ಬಿಬಿಸಿ ಡಾಕ್ಯುಮೆಂಟರಿ ಬಿಡುಗಡೆಗೆ ಪ್ರತಿಯಾಗಿ ಸರ್ಕಾರ ಪ್ರತೀಕಾರ ಕ್ರಮವಾಗಿ ಕಚೇರಿಗಳ ಮೇಲೆ ದಾಳಿ ಮಾಡಿಸಿದೆ ಎಂದು ವಿಪಕ್ಷಗಳು ಟೀಕಿಸಿವೆ.

Published On - 2:18 pm, Wed, 15 February 23

ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ