AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: 15 ಸಾವಿರ ಅಡಿ ಎತ್ತರದಲ್ಲಿ, ಹಿಮಾಚ್ಛಾದಿತ ಪ್ರದೇಶದಲ್ಲಿ ಧ್ವಜಾರೋಹಣ ಮಾಡಿ, ಸಂಭ್ರಮಿಸಿದ ಐಟಿಬಿಪಿ ಹಿಮವೀರರು !

Republic Day 2022: ಇವತ್ತು ಐಟಿಬಿಪಿಯ ಡೇರ್​ ಡೆವಿಲ್​ ಬೈಕರ್​ಗಳು ರಾಜಪಥ್​​ನಲ್ಲಿ ನಡೆಯಲಿರುವ ಪರೇಡ್​ನಲ್ಲಿ 10 ವಿವಿಧ ರೀತಿಯ ರಚನೆಗಳನ್ನು ಪ್ರದರ್ಶನ ಮಾಡಲಿದ್ದಾರೆ.

Video: 15 ಸಾವಿರ ಅಡಿ ಎತ್ತರದಲ್ಲಿ, ಹಿಮಾಚ್ಛಾದಿತ ಪ್ರದೇಶದಲ್ಲಿ ಧ್ವಜಾರೋಹಣ ಮಾಡಿ, ಸಂಭ್ರಮಿಸಿದ ಐಟಿಬಿಪಿ ಹಿಮವೀರರು !
ಲಡಾಖ್​ ಬಳಿ 15 ಸಾವಿರ ಅಡಿ ಎತ್ತರದಲ್ಲಿ ಧ್ವಜಾರೋಹಣ ಮಾಡಿದ ಐಟಿಬಿಪಿ
TV9 Web
| Edited By: |

Updated on:Jan 26, 2022 | 10:09 AM

Share

ಭಾರತ ಇಂದು 73ನೇ ಗಣರಾಜ್ಯೋತ್ಸವ ಆಚರಿಸುತ್ತಿದೆ. ಎಲ್ಲೆಡೆ ಧ್ವಜಾರೋಹಣ ನಡೆಸಲಾಗುತ್ತಿದೆ. ಅದರಲ್ಲಿ ತುಂಬ ಗಮನ ಸೆಳೆದಿದ್ದು, ಇಂಡೋ-ಟಿಬೆಟಿಯನ್​ ಬಾರ್ಡರ್ ಪೊಲೀಸ್​ (ITBP) ಪಡೆಯ ಸಿಬ್ಬಂದಿಯ ಧ್ವಜಾರೋಹಣ. ಇವರು ಲಡಾಖ್​ ಗಡಿಯಲ್ಲಿರುವ ಸುಮಾರು 15 ಸಾವಿರ ಅಡಿ ಎತ್ತರದ ಪ್ರದೇಶದಲ್ಲಿ, ಮೈನಸ್​ 35 ಡಿಗ್ರಿ ಸೆಲ್ಸಿಯಸ್​ ತಾಪಮಾನದಲ್ಲಿ  ಧ್ವಜಾರೋಹಣ ಮಾಡಿ, ಗಣರಾಜ್ಯೋತ್ಸವ ಆಚರಣೆ ಮಾಡಿದ್ದಾರೆ. ಹಿಮಾಚ್ಛಾದಿತ ಪ್ರದೇಶದಲ್ಲಿ, ಅಷ್ಟೇ ಬಿಳಿ ಬಣ್ಣದ ಸಮವಸ್ತ್ರ ಧರಿಸಿದ ಯೋಧರು, ಕೈಯಲ್ಲಿ ರಾಷ್ಟ್ರ ಧ್ವಜ ಹಿಡಿದು, ಭಾರತ್​ ಮಾತಾ ಕೀ ಜೈ ಎನ್ನುತ್ತ ಸಾಗಿದ್ದಾರೆ. ಈ ವಿಡಿಯೋವನ್ನು ಐಟಿಬಿಪಿ ಟ್ವಿಟರ್​ ಅಕೌಂಟ್​​ನಿಂದ ಶೇರ್​ ಮಾಡಲಾಗಿದೆ. ಅಂದಹಾಗೇ, ಯೋಧರು ಕೇವಲ ಲಡಾಖ್​​ನಲ್ಲಷ್ಟೇ ಅಲ್ಲ, ಹೀಗೆ ಭಾರತದ ಅತ್ಯಂತ ಎತ್ತರದ ಪ್ರದೇಶಗಳಲ್ಲಿ, ಹಿಮಾಚ್ಛಾದಿತ ಸ್ಥಳಗಳಲ್ಲಿ ಚಳಿಯ ಮಧ್ಯೆ ಗಣರಾಜ್ಯೋತ್ಸವ ಆಚರಣೆ ಮಾಡಿದ್ದಾರೆ. ಅಂದಹಾಗೇ, ಈ ಪ್ರದೇಶಗಳಲ್ಲಿ ದೇಶ ಕಾಯುವವರನ್ನು ಹಿಮವೀರರು ಎಂದೇ ಕರೆಯಲಾಗುತ್ತದೆ.

ಹಾಗೇ, ಉತ್ತರಾಖಂಡ್​ನ ಔಲಿ ಎಂಬಲ್ಲಿ ಕೂಡ ಮೈನಸ್​ 20 ಡಿಗ್ರಿ ಸೆಲ್ಸಿಯಸ್​ ತಾಪಮಾನದಲ್ಲಿ, 11 ಸಾವಿರ ಅಡಿ ಎತ್ತರದಲ್ಲಿ ಐಟಿಬಿಪಿ ಸೈನಿಕರು ಧ್ವಜಾರೋಹಣ ನಡೆಸಿದ್ದಾರೆ. ಇವರು ತ್ರಿವರ್ಣ ಧ್ವಜ ಎತ್ತಿ ಹಿಡಿದು ಅಲ್ಲೇ ಪಥ ಸಂಚಲನ ಮಾಡಿದ ವಿಡಿಯೋ ಕೂಡ ವೈರಲ್ ಆಗಿದೆ.

ಅಂದಹಾಗೆ, ಇವತ್ತು ಐಟಿಬಿಪಿಯ ಡೇರ್​ ಡೆವಿಲ್​ ಬೈಕರ್​ಗಳು ರಾಜಪಥ್​​ನಲ್ಲಿ ನಡೆಯಲಿರುವ ಪರೇಡ್​ನಲ್ಲಿ 10 ವಿವಿಧ ರೀತಿಯ ರಚನೆಗಳನ್ನು ಪ್ರದರ್ಶನ ಮಾಡಲಿದ್ದಾರೆ. ಇಷ್ಟು ವಿಧದ ಸಾಹಸ ರಚನೆಗಳನ್ನು ಐಟಿಬಿಪಿ ಸಿಬ್ಬಂದಿ ಪ್ರದರ್ಶಿಸುತ್ತಿರುವುದು ಇದೇ ಮೊದಲ ಬಾರಿ ಎನ್ನಲಾಗಿದೆ. 1962ರಲ್ಲಿ ಐಟಿಬಿಪಿ ರಚನೆಯಾಗಿದೆ.

ಇದನ್ನೂ ಓದಿ: Republic Day 2022: ಕರ್ನಾಟಕದ ಜನತೆಯನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್ ಭಾಷಣ

Published On - 9:56 am, Wed, 26 January 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?