AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಬೂಲ್​ನಿಂದ ಭಾರತಕ್ಕೆ ಮರಳಿದ ಐಟಿಬಿಪಿ ಸ್ನಿಫರ್ ಶ್ವಾನಗಳು

Afghanistan: ಯುದ್ಧ ಶ್ವಾನಗಳನ್ನು ಅಫ್ಘಾನಿಸ್ತಾನದ ಕಾಬೂಲ್​ನಿಂದ ಮಂಗಳವಾರ ಏರ್​ಲಿಫ್ಟ್​ ಮಾಡಲಾಗಿದೆ. ಶ್ವಾನಗಳು ಕಾಬೂಲ್​ನಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ಭದ್ರತಾ ಕರ್ತವ್ಯದಲ್ಲಿದ್ದವು.

ಕಾಬೂಲ್​ನಿಂದ ಭಾರತಕ್ಕೆ ಮರಳಿದ ಐಟಿಬಿಪಿ ಸ್ನಿಫರ್ ಶ್ವಾನಗಳು
ಕಾಬೂಲ್​ನಿಂದ ಭಾರತಕ್ಕೆ ಮರಳಿದ ಐಟಿಬಿಪಿ ಸ್ನಿಫರ್ ಶ್ವಾನಗಳು
TV9 Web
| Edited By: |

Updated on:Aug 19, 2021 | 12:09 PM

Share

​ಭಾರತೀಯ ವಾಯಪಡೆಯ ಸಿ- 17 ವಿಮಾನವು ಮಂಗಳವಾರ 100ಕ್ಕೂ ಹೆಚ್ಚು ಸೈನಿಕರ ಜತೆಗೆ ಮೂರು ಯುದ್ಧ ಶ್ವಾನಗಳನ್ನು ಕರೆತಂದಿದೆ. ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್  (ITBP) K9 ಸ್ನಿಫರ್ ಶ್ವಾನಗಳಾದ ಮಾಯಾ, ಬಾಬಿ ಮತ್ತು ರೂಬಿ ಕಳೆದ ಮೂರು ವರ್ಷಗಳಿಂದ ಕಾಬೂಲ್​ನಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ಸೇವೆ ಸಲ್ಲಿಸುತ್ತಿದ್ದವು. ಮಾಯಾ (ಲ್ಯಾಬ್ರಡಾರ್), ಬಾಬಿ (ಡೋಬರ್ಮನ್) ಮತ್ತು ರೂಬಿ (ಮಾಲಿನಾಯ್ಸ್) ತಳಿಗೆ ಸೇರಿದ ಶ್ವಾನಗಳಾಗಿವೆ.

ಯುದ್ಧ ಶ್ವಾನಗಳನ್ನು ಅಫ್ಘಾನಿಸ್ತಾನದ ಕಾಬೂಲ್​ನಿಂದ ಮಂಗಳವಾರ ಏರ್​ಲಿಫ್ಟ್​ ಮಾಡಲಾಗಿದೆ. ಕಾಬೂಲ್​ನಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ಭದ್ರತಾ ಕರ್ತವ್ಯದಲ್ಲಿದ್ದವು. ಶ್ವಾನಗಳು ಹಲವು ಐಇಡಿಗಳನ್ನು ಪತ್ತೆಹಚ್ಚಲು ಸಹಾಯ ಮಾಡಿವೆ. ಭಾರತೀಯ ರಾಜತಾಂತ್ರಿಕರು ಮಾತ್ರವಲ್ಲದೇ ರಾಯಭಾರ ಕಚೇರಿಯಲ್ಲಿ ಕೆಲಸ ಮಾಡುವ ಸ್ಥಳೀಯ ಅಫ್ಘಾನ್ ನಾಗರಿಕರ ಜೀವವನ್ನು ರಕ್ಷಿಸಿವೆ.

ಧೈರ್ಯಶಾಲಿಗಳಾದ ಮಾಯಾ, ರೂಬಿ ಮತ್ತು ಬಾಬಿ ಕಾಬೂಲ್​ನಲ್ಲಿ ಭಾರತೀಯರ ಸ್ವತ್ತುಗಳನ್ನು ಸುರಕ್ಷಿತವಾಗಿಡಲು ಶ್ರೇಷ್ಠ ವೃತ್ತಿಪರತೆಯನ್ನು ಮೆರೆದಿವೆ ಎಂದು ಡಿಐಜಿ ಸುಧಾಕರ್ ನಟರಾಜನ್ ಇಂಡಿಯಾ ಟುಡೇ ಸುದ್ದಿ ಮಾಧ್ಯಮದ ಜತೆ ಮಾತನಾಡಿದ್ದಾರೆ.

ಯುದ್ಧ ಶ್ವಾನಗಳ ನಿರ್ವಾಹಕರು ಹೆಡ್ ಕಾನ್ಸ್ಟೇಬಲ್ ಕಿಶನ್ ಕುಮಾರ್, ಬಿಜೇಂದರ್ ಸಿಂಗ್ ಮತ್ತು ಅತುಲ್ ಕುಮಾರ್. ಮಾಯ, ಬಾಬಿ ಮತ್ತು ರೂಬಿ ಹರಿಯಾಣದ ಪಂಚಕುಲ ಜಿಲ್ಲೆಯ ಎನ್​ಟಿಸಿಡಿ ಭಾನು ಎಂಬ ಶ್ವಾನ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆದಿದ್ದವು.

ಇದನ್ನೂ ಓದಿ:

ಕಾಬೂಲ್​ನಿಂದ ಸುರಕ್ಷಿತವಾಗಿ ಭಾರತಕ್ಕೆ ಬಂದಿಳಿದ ರಾಯಭಾರಿ ಕಚೇರಿ ಸಿಬ್ಬಂದಿಯ ಮುಖದಲ್ಲಿ ನಿರಾಳ ಭಾವ!

Afghanistan: ಕಾಬೂಲ್​ನಿಂದ ಅಮೆರಿಕಕ್ಕೆ ಹೋಗುತ್ತಿದ್ದ ವಿಮಾನದಿಂದ ಕೆಳಗೆ ಬಿದ್ದು ಇಬ್ಬರ ದುರ್ಮರಣ

Published On - 11:51 am, Thu, 19 August 21

ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ