AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ITBP: ಖಾಕಿ ತೊಟ್ಟು ತನ್ನ ಮುಂದೆ ಅಧಿಕಾರಿಯಾಗಿ ನಿಂತ ಮಗಳಿಗೆ ಹೆಮ್ಮೆಯಿಂದ ಸೆಲ್ಯೂಟ್ ಹೊಡೆದ ಇನ್ಸ್ಪೆಕ್ಟರ್ ತಂದೆ

ಭಾರತ- ಟಿಬೆಟ್ ಗಡಿ ಪೊಲೀಸ್ ಪಡೆ ನೂತನ ಅಧಿಕಾರಿಗಳಿಗೆ ಪದವಿ ಪ್ರಧಾನ ಮಾಡಿದ್ದು, ಅದರಲ್ಲಿ ಮೊದಲ ಬಾರಿಗೆ ಇಬ್ಬರು ಮಹಿಳೆಯರನ್ನು ಆಯ್ಕೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಅದೇ ಇಲಾಖೆಯಲ್ಲಿ ಕರ್ತವ್ಯ ಸಲ್ಲಿಸುತ್ತಿರುವ ತಂದೆ ಮಗಳಿಗೆ ಸೆಲ್ಯೂಟ್ ಮಾಡಿರುವ ಚಿತ್ರ ಎಲ್ಲರ ಮನಸೆಳೆದಿದೆ.

ITBP: ಖಾಕಿ ತೊಟ್ಟು ತನ್ನ ಮುಂದೆ ಅಧಿಕಾರಿಯಾಗಿ ನಿಂತ ಮಗಳಿಗೆ ಹೆಮ್ಮೆಯಿಂದ ಸೆಲ್ಯೂಟ್ ಹೊಡೆದ ಇನ್ಸ್ಪೆಕ್ಟರ್ ತಂದೆ
ಪುತ್ರಿ ದೀಕ್ಷಾ ಹಾಗೂ ತಂದೆ ಇನ್ಸ್ಪೆಕ್ಟರ್ ಕಮಲೇಶ್ ಕುಮಾರ್
TV9 Web
| Edited By: |

Updated on:Aug 10, 2021 | 1:59 PM

Share

ತಂದೆ ಕರ್ತವ್ಯ ಸಲ್ಲಿಸುತ್ತಿರುವಾಗಲೇ ಮಗಳು ಉನ್ನತ ಅಧಿಕಾರಿಯಾಗಿ ತಾನು ಸೇವೆ ಸಲ್ಲಿರುತ್ತಿರುವ ಇಲಾಖೆಯಲ್ಲೇ ಅಧಿಕಾರ ಸ್ವೀಕರಿಸಿದರೆ ತಂದೆ ಅಭಿನಂದನೆಯನ್ನುಹೇಗೆ ಹೇಳಬಹುದು? ಇಂಥದ್ದೊಂದು ಅಪರೂಪದ ವಿದ್ಯಾಮಾನಕ್ಕೆ ಮುಸ್ಸೂರಿ ಸಾಕ್ಷಿಯಾಗಿದ್ದು, ಅಧಿಕಾರ ಸ್ವೀಕರಿಸಿದ ಮಗಳಿಗೆ ಸೆಲ್ಯೂಟ್ ಹೊಡೆದು ತಂದೆ ಗೌರವ ಸಲ್ಲಿಸಿದ್ದಾರೆ. ಹಲವು ಪ್ರಥಮಗಳಿಗೆ ಸಾಕ್ಷಿಯಾದ ಈ ಸಮಾರಂಭದಲ್ಲಿ ಮೊಟ್ಟ ಮೊದಲ ಬಾರಿಗೆ ಈರ್ವರು ಮಹಿಳೆಯರು ಐಟಿಬಿಪಿಯಲ್ಲಿ ಅಧಿಕಾರಿಗಳ ಸ್ಥಾನಕ್ಕೂ ಏರಿದ್ದಾರೆ.

ಮುಸ್ಸೂರಿಯಲ್ಲಿರುವ ಭಾರತ- ಟಿಬೆಟ್ ಗಡಿ ಪೊಲೀಸ್ (Indo-Tibetan Border Police- ITBP) ಭಾನುವಾರದಂದು ಪ್ರಪ್ರಥಮ ಬಾರಿಗೆ ಮಹಿಳಾ ಅಧಿಕಾರಿಗಳನ್ನು ಯುದ್ಧ ಪಡೆಗೆ ನೇಮಿಸಿದೆ. ಐಟಿಬಿಪಿ ಅಧಿಕಾರಿಗಳ ತರಬೇತಿ ಕೇಂದ್ರದಿಂದ ಅರೆ ಸೈನಿಕ ಪಡೆಯ ಪ್ರಾರಂಭಿಕ ಮಟ್ಟದ ಅಧಿಕಾರಿಗಳ ಹುದ್ದೆಯಲ್ಲಿ ಮೊಟ್ಟಮೊದಲ ಬಾರಿಗೆ ಇಬ್ಬರು ಮಹಿಳಾ ಅಧಿಕಾರಿಗಳನ್ನು ನೇಮಿಸಲಾಗಿದೆ. ಪ್ರಕೃತಿ ಮತ್ತು ದೀಕ್ಷಾ ಎಂಬ ಈರ್ವರು ಮಹಿಳೆಯರು ಅಧಿಕಾರಿಗಳಾಗಿ ಆಯ್ಕೆಯಾಗಿದ್ದಾರೆ.

ಪದವಿ ಪ್ರಧಾನ ಸಮಾರಂಭದ ಸಂದರ್ಭದಲ್ಲಿ ತೆಗೆಯಲಾದ ಫೊಟೊ ಮತ್ತು ವಿಡಿಯೊಗಳು ನೋಡುಗರ ಮನ ಸೆಳೆದಿದೆ. ಕಾರಣ, ದೀಕ್ಷಾ ಅವರು ಐಟಿಬಿಪಿಯಲ್ಲಿ ಇನ್ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಕಮಲೇಶ್ ಕುಮಾರ್ ಅವರ ಪುತ್ರಿ. ಅಧಿಕಾರ ಸ್ವೀಕರಿಸಿದ ಮಗಳಿಗೆ ಸೆಲ್ಯೂಟ್ ಮಾಡುತ್ತಿರುವ ತಂದೆಯ ಚಿತ್ರವನ್ನು ಐಟಿಬಿಪಿಯ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ಎಲ್ಲರಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇದಕ್ಕೆ ಸುಂದರ ಒಕ್ಕಣೆಯನ್ನೂ ನೀಡಿರುವ ಐಟಿಬಿಪಿ ‘ಮಗಳಿಗೆ ಹೆಮ್ಮೆಯಿಂದ ಸೆಲ್ಯೂಟ್’ ಎಂದು ಬರೆದು ಟ್ವೀಟ್ ಮಾಡಿದೆ.

ಈ ಕುರಿತು ಐಟಿಬಿಪಿ ಮಾಡಿರುವ ಟ್ವೀಟ್ ಇಲ್ಲಿದೆ:

ಈ ವರ್ಷ ಒಟ್ಟು 53 ಅಧಿಕಾರಿಗಳಿಗೆ ತರಬೇತಿ ನೀಡಲಾಗಿದೆ. ಅದರಲ್ಲಿ 42 ಜನರನ್ನು ಅಸಿಸ್ಟೆಂಟ್ ಕಮಾಂಡೆಂಟ್ಸ್(ಜಿಡಿ) ಅಧಿಕಾರಿಗಳಾಗಿ ಹಾಗೂ 11 ಜನರನ್ನು ಅಸಿಸ್ಟೆಂಟ್ ಕಮಾಂಡೆಂಟ್ಸ್(ಇಂಜಿನಿಯರ್) ಅಧಿಕಾರಿಗಳಾಗಿ ನೇಮಿಸಲಾಗಿದೆ.

ಈ ಕುರಿತ ವಿಡಿಯೊ ವರದಿ ಇಲ್ಲಿದೆ:

ಸಮಾರಂಭದ ನಂತರ ಎಎನ್​ಐನೊಂದಿಗೆ ಮಾತನಾಡಿದ ದೀಕ್ಷಾ, ತಂದೆಯೇ ತನಗೆ ಆದರ್ಶ ಎಂದು ಹೇಳಿದ್ದಾರೆ. ಮತ್ತೊಬ್ಬ ಅಧಿಕಾರಿಯಾಗಿ ಆಯ್ಕೆಯಾಗಿರುವ ಪ್ರಕೃತಿ ಕೂಡಾ ಸೇನಾ ಕುಟುಂಬದ ಹಿನ್ನೆಲೆಯಿಂದ ಬಂದವರಾಗಿದ್ದಾರೆ. ಪ್ರಕೃತಿ ಅವರ ತಂದೆ ಭಾರತೀಯ ವಾಯು ಸೇನೆಯ ಅಧಿಕಾರಿಯಾಗಿ ಈಗ ನಿವೃತ್ತರಾಗಿದ್ದಾರೆ.

ಇದನ್ನೂ ಓದಿ:

ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ, ಪೇಟ, ಶಾಲುಗೆ ಬ್ರೇಕ್; ಹೂ ಗುಚ್ಚದ ಬದಲು ಕನ್ನಡ ಪುಸ್ತಕ ನೀಡಿ – ರಾಜ್ಯ ಸರ್ಕಾರ ಆದೇಶ

Ujjwala Scheme 2.0: ಉಜ್ವಲ ಯೋಜನೆಯ ಲಾಭಗಳೇನು? ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

(ITBP Inspector saluting his Officer daughter tooks heartwarming reaction from people)

Published On - 1:55 pm, Tue, 10 August 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ