AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Yoga Day 2021: 18ಸಾವಿರ ಅಡಿ ಎತ್ತರದ ಹಿಮಾಚ್ಛಾದಿತ ಪ್ರದೇಶದಲ್ಲಿ ಯೋಗಾಭ್ಯಾಸ ಮಾಡಿದ ಐಟಿಬಿಪಿ ಯೋಧರು

ಇಂದು ಐಟಿಬಿಪಿಯ ಕೆಲವು ಸಿಬ್ಬಂದಿ ಹಿಮಾಚಲ ಪ್ರದೇಶದ 16000 ಅಡಿ ಎತ್ತರದ ಪ್ರದೇಶದಲ್ಲಿ, ಲಡಾಖ್​ನ ಪ್ಯಾಂಗೋಂಗ್​ ತ್ಸೋ ಸರೋವರ ದಡದ 14,000 ಅಡಿ ಎತ್ತರದಲ್ಲಿ ಕೂಡ ಯೋಗಾಭ್ಯಾಸ ಮಾಡಿದ್ದಾರೆ.

International Yoga Day 2021: 18ಸಾವಿರ ಅಡಿ ಎತ್ತರದ ಹಿಮಾಚ್ಛಾದಿತ ಪ್ರದೇಶದಲ್ಲಿ ಯೋಗಾಭ್ಯಾಸ ಮಾಡಿದ ಐಟಿಬಿಪಿ ಯೋಧರು
ಯೋಗಾಭ್ಯಾಸದಲ್ಲಿ ತೊಡಗಿರುವ ಐಟಿಬಿಪಿ ಯೋಧರು..
TV9 Web
| Edited By: |

Updated on: Jun 21, 2021 | 9:27 AM

Share

ಇಂದು ಅಂತಾರಾಷ್ಟ್ರೀಯ ಯೋಗ ದಿನ. ಬೆಳಗ್ಗೆಯೇ ಪ್ರಧಾನಿ ಮೋದಿಯವರು ದೇಶವನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಹಾಗೇ ಭಾರತ-ಚೀನಾ ಗಡಿಯಲ್ಲಿ ನಿಯೋಜಿಸಲ್ಪಟ್ಟಿರುವ ಇಂಡೋ-ಟಿಬೇಟಿಯನ್​ ಬಾರ್ಡರ್​ ಪೊಲೀಸ್​​​ (ಐಟಿಬಿಪಿ)ಸಿಬ್ಬಂದಿ 18000 ಅಡಿ ಎತ್ತರದ ಹಿಮಾಚ್ಛಾದಿತ ಪ್ರದೇಶದಲ್ಲಿ ಯೋಗಾಭ್ಯಾಸ ಮಾಡಿದ್ದಾರೆ. ಹಿಮ ಬೀಳುತ್ತಿದ್ದರೂ ಅದರ ಮಧ್ಯೆಯೇ ಐಟಿಬಿಪಿ ಸಿಬ್ಬಂದಿ ಯೋಗಾಭ್ಯಾಸ ಮಾಡಿದ ಫೋಟೋಗಳು ವೈರಲ್​ ಆಗುತ್ತಿವೆ. ಕಳೆದ ವರ್ಷವೂ ಸಹ ಐಟಿಬಿಪಿ ಸಿಬ್ಬಂದಿ ಲಡಾಖ್​ ಔಟ್​ಪೋಸ್ಟ್​​​ ರೇಂಜಿಂಗ್​​ನಲ್ಲಿರುವ 13,000 ಅಡಿ ಎತ್ತರದ ಪ್ರದೇಶದಲ್ಲಿ ಯೋಗ ಮಾಡಿದ್ದರು.

ಅಷ್ಟೇ ಅಲ್ಲ, ಇಂದು ಐಟಿಬಿಪಿಯ ಕೆಲವು ಸಿಬ್ಬಂದಿ ಹಿಮಾಚಲ ಪ್ರದೇಶದ 16000 ಅಡಿ ಎತ್ತರದ ಪ್ರದೇಶದಲ್ಲಿ, ಲಡಾಖ್​ನ ಪ್ಯಾಂಗೋಂಗ್​ ತ್ಸೋ ಸರೋವರ ದಡದ 14,000 ಅಡಿ ಎತ್ತರದಲ್ಲಿ, ಕಳೆದ ವರ್ಷ ಚೀನಾ ಸೈನಿಕರೊಂದಿಗೆ ಸಂಘರ್ಷ ನಡೆದ ಗಾಲ್ವಾನ್​ ಕಣಿವೆಯ ಬಳಿಯೂ ಯೋಗಾಭ್ಯಾಸ ನಡೆಸಿದ್ದಾರೆ.

ITBP 2

ಯೋಗಾಭ್ಯಾಸದಲ್ಲಿ ತೊಡಗಿರುವ ಯೋಧರು

ಲಡಾಖ್​​ನಲ್ಲಂತೂ ವಿಪರೀತ ಚಳಿ. 30 ಡಿಗ್ರಿ ಸೆಲ್ಸಿಯಸ್​ ಕೊರೆವ ಚಳಿಯಲ್ಲೂ ಯೋಗಾಭ್ಯಾಸ ಮಾಡಿದ ಐಟಿಬಿಪಿ ಸಿಬ್ಬಂದಿಯ ಬದ್ಧತೆಗೆ ಇಡೀ ದೇಶ ಭೇಷ್​ ಎನ್ನುತ್ತಿದೆ. ಗಾಲ್ವಾನ್ ಸೇರಿ ಹಲವು ಪ್ರದೇಶಗಳಿಗೆ ಸಂಚರಿಸುವುದೇ ಕಷ್ಟವಾಗಿರುವಾಗ ಈ ಯೋಧರು ಶಸ್ತ್ರಾಸ್ತ್ರಗಳನ್ನು ಹೊತ್ತು ಸಾಗುತ್ತಾರೆ. ಅಂಥ ಚಳಿಯಲ್ಲೂ ಮುಂಜಾನೆ ಹಿಮದಲ್ಲೇ ಕುಳಿತು ಯೋಗಾಭ್ಯಾಸ ಮಾಡುವುದು ನಿಜಕ್ಕೂ ಹೆಮ್ಮೆ ತರುತ್ತಿದೆ ಎಂದು ನೆಟ್ಟಿಗರೂ ಅಭಿಪ್ರಾಯ ಪಟ್ಟಿದ್ದಾರೆ.

ITBP 1

ಐಟಿಬಿಪಿ ಯೋಗಾಭ್ಯಾಸ

ಇದನ್ನೂ ಓದಿ: International Yoga Day 2021: ಕೊರೊನಾ ವಿರುದ್ಧದ ಹೋರಾಟಕ್ಕೆ ಯೋಗದಿಂದ ಬಲ ಸಿಕ್ಕಿದೆ: ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ