International Yoga Day 2021: 18ಸಾವಿರ ಅಡಿ ಎತ್ತರದ ಹಿಮಾಚ್ಛಾದಿತ ಪ್ರದೇಶದಲ್ಲಿ ಯೋಗಾಭ್ಯಾಸ ಮಾಡಿದ ಐಟಿಬಿಪಿ ಯೋಧರು

ಇಂದು ಐಟಿಬಿಪಿಯ ಕೆಲವು ಸಿಬ್ಬಂದಿ ಹಿಮಾಚಲ ಪ್ರದೇಶದ 16000 ಅಡಿ ಎತ್ತರದ ಪ್ರದೇಶದಲ್ಲಿ, ಲಡಾಖ್​ನ ಪ್ಯಾಂಗೋಂಗ್​ ತ್ಸೋ ಸರೋವರ ದಡದ 14,000 ಅಡಿ ಎತ್ತರದಲ್ಲಿ ಕೂಡ ಯೋಗಾಭ್ಯಾಸ ಮಾಡಿದ್ದಾರೆ.

International Yoga Day 2021: 18ಸಾವಿರ ಅಡಿ ಎತ್ತರದ ಹಿಮಾಚ್ಛಾದಿತ ಪ್ರದೇಶದಲ್ಲಿ ಯೋಗಾಭ್ಯಾಸ ಮಾಡಿದ ಐಟಿಬಿಪಿ ಯೋಧರು
ಯೋಗಾಭ್ಯಾಸದಲ್ಲಿ ತೊಡಗಿರುವ ಐಟಿಬಿಪಿ ಯೋಧರು..
Follow us
| Updated By: Lakshmi Hegde

Updated on: Jun 21, 2021 | 9:27 AM

ಇಂದು ಅಂತಾರಾಷ್ಟ್ರೀಯ ಯೋಗ ದಿನ. ಬೆಳಗ್ಗೆಯೇ ಪ್ರಧಾನಿ ಮೋದಿಯವರು ದೇಶವನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಹಾಗೇ ಭಾರತ-ಚೀನಾ ಗಡಿಯಲ್ಲಿ ನಿಯೋಜಿಸಲ್ಪಟ್ಟಿರುವ ಇಂಡೋ-ಟಿಬೇಟಿಯನ್​ ಬಾರ್ಡರ್​ ಪೊಲೀಸ್​​​ (ಐಟಿಬಿಪಿ)ಸಿಬ್ಬಂದಿ 18000 ಅಡಿ ಎತ್ತರದ ಹಿಮಾಚ್ಛಾದಿತ ಪ್ರದೇಶದಲ್ಲಿ ಯೋಗಾಭ್ಯಾಸ ಮಾಡಿದ್ದಾರೆ. ಹಿಮ ಬೀಳುತ್ತಿದ್ದರೂ ಅದರ ಮಧ್ಯೆಯೇ ಐಟಿಬಿಪಿ ಸಿಬ್ಬಂದಿ ಯೋಗಾಭ್ಯಾಸ ಮಾಡಿದ ಫೋಟೋಗಳು ವೈರಲ್​ ಆಗುತ್ತಿವೆ. ಕಳೆದ ವರ್ಷವೂ ಸಹ ಐಟಿಬಿಪಿ ಸಿಬ್ಬಂದಿ ಲಡಾಖ್​ ಔಟ್​ಪೋಸ್ಟ್​​​ ರೇಂಜಿಂಗ್​​ನಲ್ಲಿರುವ 13,000 ಅಡಿ ಎತ್ತರದ ಪ್ರದೇಶದಲ್ಲಿ ಯೋಗ ಮಾಡಿದ್ದರು.

ಅಷ್ಟೇ ಅಲ್ಲ, ಇಂದು ಐಟಿಬಿಪಿಯ ಕೆಲವು ಸಿಬ್ಬಂದಿ ಹಿಮಾಚಲ ಪ್ರದೇಶದ 16000 ಅಡಿ ಎತ್ತರದ ಪ್ರದೇಶದಲ್ಲಿ, ಲಡಾಖ್​ನ ಪ್ಯಾಂಗೋಂಗ್​ ತ್ಸೋ ಸರೋವರ ದಡದ 14,000 ಅಡಿ ಎತ್ತರದಲ್ಲಿ, ಕಳೆದ ವರ್ಷ ಚೀನಾ ಸೈನಿಕರೊಂದಿಗೆ ಸಂಘರ್ಷ ನಡೆದ ಗಾಲ್ವಾನ್​ ಕಣಿವೆಯ ಬಳಿಯೂ ಯೋಗಾಭ್ಯಾಸ ನಡೆಸಿದ್ದಾರೆ.

ITBP 2

ಯೋಗಾಭ್ಯಾಸದಲ್ಲಿ ತೊಡಗಿರುವ ಯೋಧರು

ಲಡಾಖ್​​ನಲ್ಲಂತೂ ವಿಪರೀತ ಚಳಿ. 30 ಡಿಗ್ರಿ ಸೆಲ್ಸಿಯಸ್​ ಕೊರೆವ ಚಳಿಯಲ್ಲೂ ಯೋಗಾಭ್ಯಾಸ ಮಾಡಿದ ಐಟಿಬಿಪಿ ಸಿಬ್ಬಂದಿಯ ಬದ್ಧತೆಗೆ ಇಡೀ ದೇಶ ಭೇಷ್​ ಎನ್ನುತ್ತಿದೆ. ಗಾಲ್ವಾನ್ ಸೇರಿ ಹಲವು ಪ್ರದೇಶಗಳಿಗೆ ಸಂಚರಿಸುವುದೇ ಕಷ್ಟವಾಗಿರುವಾಗ ಈ ಯೋಧರು ಶಸ್ತ್ರಾಸ್ತ್ರಗಳನ್ನು ಹೊತ್ತು ಸಾಗುತ್ತಾರೆ. ಅಂಥ ಚಳಿಯಲ್ಲೂ ಮುಂಜಾನೆ ಹಿಮದಲ್ಲೇ ಕುಳಿತು ಯೋಗಾಭ್ಯಾಸ ಮಾಡುವುದು ನಿಜಕ್ಕೂ ಹೆಮ್ಮೆ ತರುತ್ತಿದೆ ಎಂದು ನೆಟ್ಟಿಗರೂ ಅಭಿಪ್ರಾಯ ಪಟ್ಟಿದ್ದಾರೆ.

ITBP 1

ಐಟಿಬಿಪಿ ಯೋಗಾಭ್ಯಾಸ

ಇದನ್ನೂ ಓದಿ: International Yoga Day 2021: ಕೊರೊನಾ ವಿರುದ್ಧದ ಹೋರಾಟಕ್ಕೆ ಯೋಗದಿಂದ ಬಲ ಸಿಕ್ಕಿದೆ: ಪ್ರಧಾನಿ ನರೇಂದ್ರ ಮೋದಿ

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್