AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Yoga Day 2021: 18ಸಾವಿರ ಅಡಿ ಎತ್ತರದ ಹಿಮಾಚ್ಛಾದಿತ ಪ್ರದೇಶದಲ್ಲಿ ಯೋಗಾಭ್ಯಾಸ ಮಾಡಿದ ಐಟಿಬಿಪಿ ಯೋಧರು

ಇಂದು ಐಟಿಬಿಪಿಯ ಕೆಲವು ಸಿಬ್ಬಂದಿ ಹಿಮಾಚಲ ಪ್ರದೇಶದ 16000 ಅಡಿ ಎತ್ತರದ ಪ್ರದೇಶದಲ್ಲಿ, ಲಡಾಖ್​ನ ಪ್ಯಾಂಗೋಂಗ್​ ತ್ಸೋ ಸರೋವರ ದಡದ 14,000 ಅಡಿ ಎತ್ತರದಲ್ಲಿ ಕೂಡ ಯೋಗಾಭ್ಯಾಸ ಮಾಡಿದ್ದಾರೆ.

International Yoga Day 2021: 18ಸಾವಿರ ಅಡಿ ಎತ್ತರದ ಹಿಮಾಚ್ಛಾದಿತ ಪ್ರದೇಶದಲ್ಲಿ ಯೋಗಾಭ್ಯಾಸ ಮಾಡಿದ ಐಟಿಬಿಪಿ ಯೋಧರು
ಯೋಗಾಭ್ಯಾಸದಲ್ಲಿ ತೊಡಗಿರುವ ಐಟಿಬಿಪಿ ಯೋಧರು..
TV9 Web
| Updated By: Lakshmi Hegde|

Updated on: Jun 21, 2021 | 9:27 AM

Share

ಇಂದು ಅಂತಾರಾಷ್ಟ್ರೀಯ ಯೋಗ ದಿನ. ಬೆಳಗ್ಗೆಯೇ ಪ್ರಧಾನಿ ಮೋದಿಯವರು ದೇಶವನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಹಾಗೇ ಭಾರತ-ಚೀನಾ ಗಡಿಯಲ್ಲಿ ನಿಯೋಜಿಸಲ್ಪಟ್ಟಿರುವ ಇಂಡೋ-ಟಿಬೇಟಿಯನ್​ ಬಾರ್ಡರ್​ ಪೊಲೀಸ್​​​ (ಐಟಿಬಿಪಿ)ಸಿಬ್ಬಂದಿ 18000 ಅಡಿ ಎತ್ತರದ ಹಿಮಾಚ್ಛಾದಿತ ಪ್ರದೇಶದಲ್ಲಿ ಯೋಗಾಭ್ಯಾಸ ಮಾಡಿದ್ದಾರೆ. ಹಿಮ ಬೀಳುತ್ತಿದ್ದರೂ ಅದರ ಮಧ್ಯೆಯೇ ಐಟಿಬಿಪಿ ಸಿಬ್ಬಂದಿ ಯೋಗಾಭ್ಯಾಸ ಮಾಡಿದ ಫೋಟೋಗಳು ವೈರಲ್​ ಆಗುತ್ತಿವೆ. ಕಳೆದ ವರ್ಷವೂ ಸಹ ಐಟಿಬಿಪಿ ಸಿಬ್ಬಂದಿ ಲಡಾಖ್​ ಔಟ್​ಪೋಸ್ಟ್​​​ ರೇಂಜಿಂಗ್​​ನಲ್ಲಿರುವ 13,000 ಅಡಿ ಎತ್ತರದ ಪ್ರದೇಶದಲ್ಲಿ ಯೋಗ ಮಾಡಿದ್ದರು.

ಅಷ್ಟೇ ಅಲ್ಲ, ಇಂದು ಐಟಿಬಿಪಿಯ ಕೆಲವು ಸಿಬ್ಬಂದಿ ಹಿಮಾಚಲ ಪ್ರದೇಶದ 16000 ಅಡಿ ಎತ್ತರದ ಪ್ರದೇಶದಲ್ಲಿ, ಲಡಾಖ್​ನ ಪ್ಯಾಂಗೋಂಗ್​ ತ್ಸೋ ಸರೋವರ ದಡದ 14,000 ಅಡಿ ಎತ್ತರದಲ್ಲಿ, ಕಳೆದ ವರ್ಷ ಚೀನಾ ಸೈನಿಕರೊಂದಿಗೆ ಸಂಘರ್ಷ ನಡೆದ ಗಾಲ್ವಾನ್​ ಕಣಿವೆಯ ಬಳಿಯೂ ಯೋಗಾಭ್ಯಾಸ ನಡೆಸಿದ್ದಾರೆ.

ITBP 2

ಯೋಗಾಭ್ಯಾಸದಲ್ಲಿ ತೊಡಗಿರುವ ಯೋಧರು

ಲಡಾಖ್​​ನಲ್ಲಂತೂ ವಿಪರೀತ ಚಳಿ. 30 ಡಿಗ್ರಿ ಸೆಲ್ಸಿಯಸ್​ ಕೊರೆವ ಚಳಿಯಲ್ಲೂ ಯೋಗಾಭ್ಯಾಸ ಮಾಡಿದ ಐಟಿಬಿಪಿ ಸಿಬ್ಬಂದಿಯ ಬದ್ಧತೆಗೆ ಇಡೀ ದೇಶ ಭೇಷ್​ ಎನ್ನುತ್ತಿದೆ. ಗಾಲ್ವಾನ್ ಸೇರಿ ಹಲವು ಪ್ರದೇಶಗಳಿಗೆ ಸಂಚರಿಸುವುದೇ ಕಷ್ಟವಾಗಿರುವಾಗ ಈ ಯೋಧರು ಶಸ್ತ್ರಾಸ್ತ್ರಗಳನ್ನು ಹೊತ್ತು ಸಾಗುತ್ತಾರೆ. ಅಂಥ ಚಳಿಯಲ್ಲೂ ಮುಂಜಾನೆ ಹಿಮದಲ್ಲೇ ಕುಳಿತು ಯೋಗಾಭ್ಯಾಸ ಮಾಡುವುದು ನಿಜಕ್ಕೂ ಹೆಮ್ಮೆ ತರುತ್ತಿದೆ ಎಂದು ನೆಟ್ಟಿಗರೂ ಅಭಿಪ್ರಾಯ ಪಟ್ಟಿದ್ದಾರೆ.

ITBP 1

ಐಟಿಬಿಪಿ ಯೋಗಾಭ್ಯಾಸ

ಇದನ್ನೂ ಓದಿ: International Yoga Day 2021: ಕೊರೊನಾ ವಿರುದ್ಧದ ಹೋರಾಟಕ್ಕೆ ಯೋಗದಿಂದ ಬಲ ಸಿಕ್ಕಿದೆ: ಪ್ರಧಾನಿ ನರೇಂದ್ರ ಮೋದಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ