AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Yoga Day 2021: 18ಸಾವಿರ ಅಡಿ ಎತ್ತರದ ಹಿಮಾಚ್ಛಾದಿತ ಪ್ರದೇಶದಲ್ಲಿ ಯೋಗಾಭ್ಯಾಸ ಮಾಡಿದ ಐಟಿಬಿಪಿ ಯೋಧರು

ಇಂದು ಐಟಿಬಿಪಿಯ ಕೆಲವು ಸಿಬ್ಬಂದಿ ಹಿಮಾಚಲ ಪ್ರದೇಶದ 16000 ಅಡಿ ಎತ್ತರದ ಪ್ರದೇಶದಲ್ಲಿ, ಲಡಾಖ್​ನ ಪ್ಯಾಂಗೋಂಗ್​ ತ್ಸೋ ಸರೋವರ ದಡದ 14,000 ಅಡಿ ಎತ್ತರದಲ್ಲಿ ಕೂಡ ಯೋಗಾಭ್ಯಾಸ ಮಾಡಿದ್ದಾರೆ.

International Yoga Day 2021: 18ಸಾವಿರ ಅಡಿ ಎತ್ತರದ ಹಿಮಾಚ್ಛಾದಿತ ಪ್ರದೇಶದಲ್ಲಿ ಯೋಗಾಭ್ಯಾಸ ಮಾಡಿದ ಐಟಿಬಿಪಿ ಯೋಧರು
ಯೋಗಾಭ್ಯಾಸದಲ್ಲಿ ತೊಡಗಿರುವ ಐಟಿಬಿಪಿ ಯೋಧರು..
Follow us
TV9 Web
| Updated By: Lakshmi Hegde

Updated on: Jun 21, 2021 | 9:27 AM

ಇಂದು ಅಂತಾರಾಷ್ಟ್ರೀಯ ಯೋಗ ದಿನ. ಬೆಳಗ್ಗೆಯೇ ಪ್ರಧಾನಿ ಮೋದಿಯವರು ದೇಶವನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಹಾಗೇ ಭಾರತ-ಚೀನಾ ಗಡಿಯಲ್ಲಿ ನಿಯೋಜಿಸಲ್ಪಟ್ಟಿರುವ ಇಂಡೋ-ಟಿಬೇಟಿಯನ್​ ಬಾರ್ಡರ್​ ಪೊಲೀಸ್​​​ (ಐಟಿಬಿಪಿ)ಸಿಬ್ಬಂದಿ 18000 ಅಡಿ ಎತ್ತರದ ಹಿಮಾಚ್ಛಾದಿತ ಪ್ರದೇಶದಲ್ಲಿ ಯೋಗಾಭ್ಯಾಸ ಮಾಡಿದ್ದಾರೆ. ಹಿಮ ಬೀಳುತ್ತಿದ್ದರೂ ಅದರ ಮಧ್ಯೆಯೇ ಐಟಿಬಿಪಿ ಸಿಬ್ಬಂದಿ ಯೋಗಾಭ್ಯಾಸ ಮಾಡಿದ ಫೋಟೋಗಳು ವೈರಲ್​ ಆಗುತ್ತಿವೆ. ಕಳೆದ ವರ್ಷವೂ ಸಹ ಐಟಿಬಿಪಿ ಸಿಬ್ಬಂದಿ ಲಡಾಖ್​ ಔಟ್​ಪೋಸ್ಟ್​​​ ರೇಂಜಿಂಗ್​​ನಲ್ಲಿರುವ 13,000 ಅಡಿ ಎತ್ತರದ ಪ್ರದೇಶದಲ್ಲಿ ಯೋಗ ಮಾಡಿದ್ದರು.

ಅಷ್ಟೇ ಅಲ್ಲ, ಇಂದು ಐಟಿಬಿಪಿಯ ಕೆಲವು ಸಿಬ್ಬಂದಿ ಹಿಮಾಚಲ ಪ್ರದೇಶದ 16000 ಅಡಿ ಎತ್ತರದ ಪ್ರದೇಶದಲ್ಲಿ, ಲಡಾಖ್​ನ ಪ್ಯಾಂಗೋಂಗ್​ ತ್ಸೋ ಸರೋವರ ದಡದ 14,000 ಅಡಿ ಎತ್ತರದಲ್ಲಿ, ಕಳೆದ ವರ್ಷ ಚೀನಾ ಸೈನಿಕರೊಂದಿಗೆ ಸಂಘರ್ಷ ನಡೆದ ಗಾಲ್ವಾನ್​ ಕಣಿವೆಯ ಬಳಿಯೂ ಯೋಗಾಭ್ಯಾಸ ನಡೆಸಿದ್ದಾರೆ.

ITBP 2

ಯೋಗಾಭ್ಯಾಸದಲ್ಲಿ ತೊಡಗಿರುವ ಯೋಧರು

ಲಡಾಖ್​​ನಲ್ಲಂತೂ ವಿಪರೀತ ಚಳಿ. 30 ಡಿಗ್ರಿ ಸೆಲ್ಸಿಯಸ್​ ಕೊರೆವ ಚಳಿಯಲ್ಲೂ ಯೋಗಾಭ್ಯಾಸ ಮಾಡಿದ ಐಟಿಬಿಪಿ ಸಿಬ್ಬಂದಿಯ ಬದ್ಧತೆಗೆ ಇಡೀ ದೇಶ ಭೇಷ್​ ಎನ್ನುತ್ತಿದೆ. ಗಾಲ್ವಾನ್ ಸೇರಿ ಹಲವು ಪ್ರದೇಶಗಳಿಗೆ ಸಂಚರಿಸುವುದೇ ಕಷ್ಟವಾಗಿರುವಾಗ ಈ ಯೋಧರು ಶಸ್ತ್ರಾಸ್ತ್ರಗಳನ್ನು ಹೊತ್ತು ಸಾಗುತ್ತಾರೆ. ಅಂಥ ಚಳಿಯಲ್ಲೂ ಮುಂಜಾನೆ ಹಿಮದಲ್ಲೇ ಕುಳಿತು ಯೋಗಾಭ್ಯಾಸ ಮಾಡುವುದು ನಿಜಕ್ಕೂ ಹೆಮ್ಮೆ ತರುತ್ತಿದೆ ಎಂದು ನೆಟ್ಟಿಗರೂ ಅಭಿಪ್ರಾಯ ಪಟ್ಟಿದ್ದಾರೆ.

ITBP 1

ಐಟಿಬಿಪಿ ಯೋಗಾಭ್ಯಾಸ

ಇದನ್ನೂ ಓದಿ: International Yoga Day 2021: ಕೊರೊನಾ ವಿರುದ್ಧದ ಹೋರಾಟಕ್ಕೆ ಯೋಗದಿಂದ ಬಲ ಸಿಕ್ಕಿದೆ: ಪ್ರಧಾನಿ ನರೇಂದ್ರ ಮೋದಿ

ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್
ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್
ತಾಳಿ ಕಟ್ಟುವಾಗ ಮದುವೆ ಬೇಡವೆಂದ್ಲು, ಅದೇ ದಿನ ಪ್ರಿಯಕರನ ವಿವಾಹವಾದ್ಲು!
ತಾಳಿ ಕಟ್ಟುವಾಗ ಮದುವೆ ಬೇಡವೆಂದ್ಲು, ಅದೇ ದಿನ ಪ್ರಿಯಕರನ ವಿವಾಹವಾದ್ಲು!